Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಾಹೆಯಲ್ಲಿ ಗಂಗಾ ಚಟುವಟಿಕೆಗಳ ಸಂಘ ಮತ್ತು ಗಂಗಾ ಯುವ ಸಂಸತ್‌ ಉದ್ಘಾಟನೆ…!!

Dhrishya News by Dhrishya News
01/11/2023
in ಕರಾವಳಿ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಮಣಿಪಾಲ, 01 ನವೆಂಬರ್ 2023:ದ್ರಶ್ಯ ನ್ಯೂಸ್ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಮಣಿಪಾಲ ಕ್ಯಾಂಪಸ್ ನಲ್ಲಿ 2023 ರ ಅಕ್ಟೋಬರ್ 28 ರಂದು ಇಂಟರಾಕ್ಟ್ ಹಾಲ್‌ನಲ್ಲಿ ಗಂಗಾ ಆಕ್ಟಿವಿಟಿ ಕ್ಲಬ್ ಮತ್ತು ಗಂಗಾ ಯೂತ್ ಸಂಸತ್ತಿನ ಉದ್ಘಾಟನೆಯೊಂದಿಗೆ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ಈ ಮಹತ್ವದ ಸಂದರ್ಭವು ಪ್ರದೇಶದೊಳಗೆ ಪರಿಸರ ಜಾಗೃತಿ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿದೆ.


ಎಂ ಐ ಟಿ ನಿರ್ದೇಶಕರಾದ ಕಮಾಂಡರ್‌ ಡಾ. ಅನಿಲ್‌ ರಾಣ ಅವರು ಸ್ವಾಗತ ಭಾಷಣ ಮಾಡುತ್ತ ರಾಷ್ಟ್ರೀಯ ಉಪಕ್ರಮವಾದ ‘ಮಿಶನ್‌ ಅಮೃತ್‌ ಸರೋವರ್‌’ಗೆ ಮಣಿಪಾಲ ಎಂಐಟಿಯ ಸುದೀರ್ಘ ಕಾಲದ ಬದ್ಧತೆಯನ್ನು ನೆನಪಿಸಿಕೊಂಡರು. ಮಾಹೆಯ ರಿಜಿಸ್ಟ್ರಾರ್‌ ಡಾ. ಪಿ. ಗಿರಿಧರ್‌ ಕಿಣಿ ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಗಂಗಾ ಆ್ಯಕ್ಟಿವಿಟಿ ಕ್ಲಬ್‌ನ ಗುರಿಗಳನ್ನು ಅನಾವರಣಗೊಳಿಸಿದರು. ಈ ಸಂಘಗಳು ಶುದ್ಧ ನೀರು ಮತ್ತು ನೈರ್ಮಲ್ಯದ ಕಡೆಗೆ ಗಮನಹರಿಸಲಿವೆ , ನದಿಗಳ ಪುನರುಜ್ಜೀವನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿವೆ ಮತ್ತು ನಮ್ಮ ನದಿಗಳನ್ನು ಸಂರಕ್ಷಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿವೆ. ಉಡುಪಿ ಜಿಲ್ಲೆಯಲ್ಲಿ ವಿವಿಧ ಋತುಗಳಲ್ಲಿ ನೀರಿನ ಲಭ್ಯತೆಯಲ್ಲಾಗುವ ವ್ಯತ್ಯಾಸವನ್ನು ಒತ್ತಿ ಹೇಳಿದ ಡಾ. ಕಿಣಿ ಆವರು ಸಾಮಾಜಿಕ ಜಾಗೃತಿಯ ಆವಶ್ಯಕತೆ ಮತ್ತು ನೀರಿನ ಸಂಪನ್ಮೂಲಗಳ ಸಂರಕ್ಷಣೆಯಲ್ಲಿ ವೈಯಕ್ತಿಕ ಹೊಣೆಗಾರಿಕೆಯ ಕುರಿತು ಒತ್ತಿ ಹೇಳಿದರು.

ಮಾಹೆ ಮಣಿಪಾಲದ ಸಹ ಕುಲಪತಿ ಡಾ. ನಾರಾಯಣ ಸಭಾಹಿತ್‌ ಅವರು ಮಾತನಾಡಿ ಜೀವನಾವಶ್ಯಕವಾದ ನೀರಿನ ಸಂಪನ್ಮೂಲಗಳನ್ನು ನಿಭಾಯಿಸುವಲ್ಲಿ ಜನಸಂಖ್ಯೆಯ ಹೆಚ್ಚಳದಿಂದಾಗುವ ಸವಾಲುಗಳ ಬಗ್ಗೆ ಅರಿವು ಮೂಡಿಸಿದರು. ಭೂ-ರಾಜಕೀಯ ಮತ್ತು ಅಂತರಾಷ್ಟ್ರೀಯ ವ್ಯವಹಾರಗಳ ವಿಭಾಗದ ಪ್ರಾಧ್ಯಾಪಕರಾದ ಡಾ. ಕೆ. ಪಿ. ವಿಜಯಲಕ್ಷ್ಮೀ ಅವರು ಗಂಗಾ ನದಿಯ ಆಧ್ಯಾತ್ಮಿಕ ಮತ್ತು ಭಾವನಾತ್ಮಕ ಮಹತ್ವ್ದದ ಕುರಿತು ಮಾತನಾಡಿದರು. ಜಾಗತಿಕ ಮತ್ತು ರಾಷ್ಟ್ರೀಯ ಮಟ್ಟದ ನೀರಿನ ಸಂಪನ್ಮೂಲಗಳ ಸುತ್ತ ಇರುವ ಭೌಗೋಳಿಕ-ರಾಜಕೀಯ ಸಂಪನ್ಮೂಲಗಳ ಕುರಿತು ಪ್ರಸ್ತಾವಿಸಿದರು. ಮಣಿಪಾಲ್‌ ಕ್ಯಾಂಪಸ್‌ನ ಸಹ ಕುಲಪತಿ ಡಾ. ಎನ್‌ ಎನ್‌. ಶರ್ಮಾ ಅವರು ಗಿಡಗಳಿಗೆ ಪವಿತ್ರ ಗಂಗಾ ಮತ್ತು ಸ್ವರ್ಣಾ ನದಿಗಳ ನೀರನ್ನು ಉಣಿಸಿದರು ಮತ್ತು ಆ ಗಿಡಗಳನ್ನು ಅತಿಥಿಗಳಿಗೆ ನೆನಪಿನ ಕಾಣಿಕೆಯಾಗಿ ನೀಡಲಾಯಿತು. ‘ಶುದ್ಧ ಗಂಗಾ’ [ಕ್ಲೀನ್‌ ಗಂಗಾ] ರಾಷ್ಟ್ರೀಯ ಆಂದೋಲನದ ಭಾಗವಹಿಸುವಿಕೆಯಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಭಾರತದ ಐವತ್ತು ವಿಶ್ವವಿದ್ಯಾನಿಲಯಗಳಲ್ಲಿ ಮಾಹೆಯೂ ಒಂದು ಎಂದು ಡಾ. ಶರ್ಮಾ ಹೇಳಿದರು.
ತನ್ವಿ ಅಮೀನ್‌ ಅವರ ಭಕ್ತಿಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಕಾನಿತ್‌ ಸಾವ್ಕರ್‌ ಅವರು ನಿರ್ವಹಿಸಿದರು . ವಿದ್ಯಾರ್ಥಿ ಕ್ಷೇಮಪಾಲನ ವಿಭಾಗದ ನಿರ್ದೇಶಕರಾದ ಡಾ. ಗೀತಾ ಮಯ್ಯ ಧನ್ಯವಾದ ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಗಂಗಾ ಯುವ ಸಂಸತ್‌, ‘ಆರ್ಥಿಕ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ವೈರುಧ್ಯ : ನದಿಯ ಪುನರುಜ್ಜೀವನದ ಸಮತೋಲನದ ಮೇಲಿನ ಆಘಾತ’ ಎಂಬ ವಿಷಯದ ಮೇಲೆ ಚರ್ಚಾಗೋಷ್ಠಿಯನ್ನು ಆಯೋಜಿಸಿತ್ತು. ಮಾಹೆಯ ಭೂ-ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದ ವಿದ್ಯಾರ್ಥಿಗಳು ಸರಕಾರಿ ಅಧಿಕಾರಿಗಳ, ವಿರೋಧ ಪಕ್ಷದ ನಾಯಕರ, ಪ್ರಭುತ್ವದ ಪ್ರತಿನಿಧಿಗಳ ಪಾತ್ರವಹಿಸಿ ತಮ್ಮವಾಕ್‌ ಪ್ರತಿಭೆಯನ್ನು ಪ್ರದರ್ಶಿಸಿದರು. ನವೀನ ಮತ್ತು ಪ್ರಾಯೋಗಿಕ ಸಲಹೆಗಳನ್ನು ಮುಂದಿಟ್ಟು ಆರ್ಥಿಕ ಅಭಿವೃದ್ಧಿಯ ಜೊತೆಗೆ ನದಿಯ ಸಂರಕ್ಷಣೆಯನ್ನು ಸೌಹಾರ್ದಯುತವಾಗಿಸುವ ಬಗ್ಗೆ ಮಾತನಾಡಿದರು.
ಮಾಹೆಯಲ್ಲಿ ಗಂಗಾ ಚಟುವಟಿಕೆಗಳ ಸಂಘ [ಗಂಗಾ ಆ್ಯಕ್ಟಿವಿಟಿ ಕ್ಲಬ್‌] ಮತ್ತು ಗಂಗಾ ಯುವ ಸಂಸತ್‌ [ಗಂಗಾ ಯೂತ್‌ ಪಾರ್ಲಿಮೆಂಟ್‌] ಸ್ಥಾಪನೆಯು ಶ್ಲಾಘನೀಯವಾದ ಹೆಜ್ಜೆಯಾಗಿದೆ. ಇದು ಸುಸ್ಥಿರ ಅಭಿವೃದ್ಧಿಯ ಕಾರ್ಯಕ್ರಮಗಳ ಅಗತ್ಯತೆಯ ಕುರಿತು ಗಮನಹರಿಸುತ್ತದೆ ಮತ್ತು ನಮ್ಮ ನೀರಿನ ಸಂಪನ್ಮೂಲಗಳನ್ನು ಸಂರಕ್ಷಿಸುವ ಬಗ್ಗೆ ಜಾಗೃತಿ ಮೂಡಿಸಲಿದೆ .

Tags: #ಮಣಿಪಾಲ#ಕೆಎಂಸಿ#ಮಹೇ#ಉದ್ಘಾಟನೆ#ನ್ಯೂಸ್
Previous Post

ಖ್ಯಾತ ನರರೋಗ ತಜ್ಞ ಡಾ. ರೋಹಿತ್ ಪೈ ಈಗ ಡಾ.ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯಲ್ಲಿ ಸಮಾಲೋಚನೆಗೆ ಲಭ್ಯ..!!

Next Post

LPG’ ವಾಣಿಜ್ಯ ಸಿಲಿಂಡರ್ ದರ 103 ರೂ. ಏರಿಕೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
LPG’ ವಾಣಿಜ್ಯ ಸಿಲಿಂಡರ್ ದರ 103 ರೂ. ಏರಿಕೆ…!!

LPG' ವಾಣಿಜ್ಯ ಸಿಲಿಂಡರ್ ದರ 103 ರೂ. ಏರಿಕೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved