Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಅದಿತಿ ಗ್ಯಾಲರಿಯಲ್ಲಿ ವಸಂತ ಕಲಾ ಚಿತ್ರಕಲಾ ಪ್ರದರ್ಶನ..!!

Dhrishya News by Dhrishya News
01/11/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಉಡುಪಿ : ನವೆಂಬರ್ 01: ಕುಂಜಿಬೆಟ್ಟು ಅದಿತಿ ಗ್ಯಾಲರಿಯಲ್ಲಿ ವಸಂತ ಕಲಾ ಚಿತ್ರಕಲಾ ಪ್ರದರ್ಶನ ಉದ್ಘಾಟನೆಗೊಂಡಿತು,ಕಲಾವಿದ ಯು.ರಮೇಶ ರಾವ್, ಕಲಾವಿದೆ ಶರ್ಮಿಳಾ ಗುಪ್ತೆ ಪ್ರದರ್ಶನ ಉದ್ಘಾಟಿಸಿದರು .

ಬದುಕೆಂಬುದನ್ನು ಕಲೆಯಾಗಿ ತಿಳಿದು, ಕಲೆಯ ಬದುಕನ್ನೇ ಬಾಳಿದವರು ಉಡುಪಿಯ ವಸಂತಲಕ್ಷ್ಮೀ ಹೆಬ್ಬಾರ್ (1960-2022). ಕಾಲೇಜು ದಿನಗಳಿಂದಲೇ ಶಾಸ್ತ್ರೀಯ ಸಂಗೀತ, ನೃತ್ಯ, ಯಕ್ಷಗಾನಗಳಲ್ಲಿ ಪರಿಣತಿ ಸಾಧಿಸಿದ ಇವರು ಯಾವ ಗುರುವಿನ ಆಶ್ರಯವಿಲ್ಲದೇ ಚಿತ್ರ ಕಲೆಗೂ ಕೈಯಾಡಿಸಿದರು.

ಖ್ಯಾತ ಸಂಗೀತ ಕಲಾವಿದೆ ಪುತ್ರಿ ರಂಜನಿಯ ಅಕಾಲ ಮೃತ್ಯುವಿನ ಬಳಿಕ (2013) ವಸಂತಲಕ್ಷ್ಮೀ ಯವರು ದುಃಖದ ಮಡುವಿನಿಂದ ಮರೆಯಾಗಲು ಸಾಧನವಾಗಿ ಆಯ್ದುಕೊಂಡದ್ದು ಚಿತ್ರಕಲೆ. ಆಯಿಲ್, ಅಕ್ರಿಲಿಕ್, ಪೆನ್ಸಿಲ್ ಡ್ರಾಯಿಂಗ್ ಮಾಧ್ಯಮಗಳನ್ನು ಬ್ರಷ್- ನೈಫ್ – ಸ್ಕ್ಯಾಲ್ಪೆಲ್ ಸಾಧನಗಳನ್ನು ಬಳಸಿ ಪೋರ್ಟ್ರೇಟ್, ಲ್ಯಾಂಡ್ ಸ್ಕೇಪ್, ಸ್ಥಿರ ಚಿತ್ರ, ಅಮೂರ್ತ ಶೈಲಿಯ ಹಲವಾರು ಕೃತಿಗಳನ್ನು ತನ್ನಷ್ಟಕ್ಕೆ ತಾನೇ ಹೆಣೆಯುತ್ತಾ ಬಂದರು.

ಉಡುಪಿಯ ದೃಶ್ಯ ಕಲಾ ಶಾಲೆಯ ಹಿರಿಯ ಶಿಕ್ಷಕ ರಮೇಶ ರಾಯರಲ್ಲಿ ಮಾರ್ಗದರ್ಶನ ಪಡೆದು, ಮುಂದೆ ಮುಂಬೈ ಯ ಶ್ರೀಮತಿ ಶರ್ಮಿಳಾ ಗುಪ್ತೆ ಯವರಲ್ಲಿ ವಿದ್ಯುಕ್ತ ಕಲಾ ತರಬೇತಿಯನ್ನು ತನ್ನ 57 ರ ವಯಸ್ಸಿನಲ್ಲಿ ಪಡೆದ ಸಾಧನೆ ಇವರದು.

ವಸಂತಲಕ್ಷ್ಮೀ ಯವರು ಅಕಾಲಿಕವಾಗಿ ನಿಧನರಾದ ಒಂದು ವರ್ಷದಲ್ಲೇ ಅವರ ಚಿತ್ರ ಕಲಾ ನೈಪುಣ್ಯವನ್ನು ಸಾರುವ “ವಸಂತ ಕಲಾ” ಎಂಬ ಈ ಚಿತ್ರಕಲಾ ಪ್ರದರ್ಶನವು ಅವರಿಗೆ ಸಲ್ಲಿಸುವ ವಿನಯ ಪೂರ್ವಕ ಶ್ರದ್ಧಾಂಜಲಿಯೇ ಆಗಿದೆ.

ಸುಮಾರು 70 ಕಲಾಕೃತಿಗಳು ಈ ಪ್ರದರ್ಶನದಲ್ಲಿವೆ.ವಸಂತ ಕಲಾ ಚಿತ್ರಕಲಾ ಪ್ರದರ್ಶನವು ಉಡುಪಿ ಕುಂಜಿಬೆಟ್ಟಿನ ಅದಿತಿ ಗ್ಯಾಲರಿಯಲ್ಲಿ ನವೆಂಬರ್ 1 ರಂದು ಬೆಳಗ್ಗೆ 11 ರಿಂದ ರಾತ್ರಿ 8 ಗಂಟೆಯವರೆಗೆ ತೆರೆದಿರುತ್ತದೆ.

ಅದಿತಿ ಗ್ಯಾಲರಿಯ ಆಡಳಿತ ವಿಶ್ವಸ್ಥರಾದ ಡಾ | ಕಿರಣ್ ಆಚಾರ್ಯ ಸ್ವಾಗತಿಸಿ ರಾಜಮೋಹನ್ ವಾರಂಬಳ್ಳಿ ವಂದಿಸಿದರು. ರಂಜನಿ ಮೆಮೋರಿಯಲ್ ಟ್ರಸ್ಟ್ ನ ಅರವಿಂದ ಹೆಬ್ಬಾರ್ ಪ್ರಸ್ತಾವಿಸಿದರು. ಶಿಷ್ಯೆಯರಾದ ಸಮನ್ವಿ, ಅರ್ಚನಾ ಹಾಗೂ ಗಾರ್ಗಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು . ಉದ್ಘಾಟನಾ ಸಮಾರಂಭದ ಬಳಿಕ ಕಲಾವಿದೆ ವಸಂತಲಕ್ಷ್ಮೀ ಅವರ ಕುರಿತಾಗಿ ನಿರ್ಮಿಸಲಾದ ವಿಡಿಯೋ ಪ್ರದರ್ಶನ ಜರಗಿತು.

Tags: ##ಉಡುಪಿ#ಅದಿತಿ#ಉದ್ಘಾಟನೆ#ನ್ಯೂಸ್
Previous Post

ಕನ್ನಡ ನುಡಿ ಕಟ್ಟುವ, ಉಳಿಸಿ ಬೆಳೆಸುವಲ್ಲಿ ಜಿಲ್ಲೆಯ ಕೊಡುಗೆ ಅಪಾರ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Next Post

ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಅಧ್ಯಕ್ಷರಾಗಿ ನೇತ್ರತಜ್ಞ ಡಾ| ಕೃಷ್ಣಪ್ರಸಾದ್‌ ಕೂಡ್ಲು ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಅಧ್ಯಕ್ಷರಾಗಿ ನೇತ್ರತಜ್ಞ ಡಾ| ಕೃಷ್ಣಪ್ರಸಾದ್‌ ಕೂಡ್ಲು ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026

Recent News

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved