Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಅಪಘಾತ ವಲಯವಾಗಿ ಮಾರ್ಪಡಿಸಿದ ಸಿಗ್ನಲ್ ಕಂಬಗಳು..! ಪ್ರತಿಫಲನ ಪಟ್ಟಿ ಅಂಟಿಸಿದ ಸಾಮಾಜಿಕ ಕಾರ್ಯಕರ್ತರು..!!

Dhrishya News by Dhrishya News
18/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
46
VIEWS
Share on FacebookShare on Twitter

ಉಡುಪಿ, ಡಿ.17;ದ್ರಶ್ಯ ನ್ಯೂಸ್ನ :ನ lಗರದ ಹಳೆ ಡಯಾನ ವೃತ್ತ ಬಳಿ, ಹಾದುಹೋಗುವ ಪಾದಚಾರಿ ರಸ್ತೆಯ ಮೇಲೆ ಸಿಗ್ನಲ್ ಕಂಬಗಳು ಮತ್ತು ಅದರ ಜೋಡಣಾ ಪರಿಕರಗಳನ್ನು ಕೆಲವು ತಿಂಗಳುಗಳಿಂದ ದಾಸ್ತಾನು ಮಾಡಿಡಲಾಗಿದ್ದು. ಈ ಸೂಕ್ಷ್ಮ ಸ್ಥಳವು ಇವಾಗ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ತಕ್ಷಣ ಜಿಲ್ಲಾಡಳಿತವು ಇಲ್ಲಿ ದಾಸ್ತಾನಿಟ್ಟಿರುವ ಪರಿಕರಗಳನ್ನು ತೆರವುಗೊಳಿಸಬೇಕೆಂದು ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಅವರು ಆಗ್ರಹಪಡಿಸಿದ್ದಾರೆ. ಇಲ್ಲಿ ಅವಘಡ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ರಸ್ತೆಯಲ್ಲಿ ಮಲಗಿಸಿರುವ ಕಂಬಗಳಿಗೆ (ರಿಪ್ಲಕ್ಟರ್ ಸ್ಟಿಕರ್) ಪ್ರತಿಫಲನ ಪಟ್ಟಿ ಅಂಟಿಸಿ ಸಮಾಜಿಕಪ್ರಜ್ಞೆ ತೋರಿದ್ದಾರೆ. ಸಾಮಾಜಿಕ ಕಾರ್ಯಕರ್ತರ ಕಳಕಳಿಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಉಡುಪಿಯ ಪರ್ಯಾಯಯೋತ್ಸವ ಕಾರ್ಯಕ್ರಮ ಸಿದ್ಧತೆಗಳು ನಡೆಯುತ್ತಿದೆ. ಪರ್ಯಾಯ ಮೆರವಣಿಗೆ ಈ ರಸ್ತೆಯ ಮೂಲಕ ಹಾದುಹೋಗುತ್ತದೆ. ಲಕ್ಷಾಂತರ ಭಕ್ತರು ಉಡುಪಿಗೆ ಬರುವ ನಿರೀಕ್ಷೆ ಇದೆ. ಆವಾಗ ಸಿಗ್ನಲ್ ಖಂಬಗಳ ಪರಿಕರಗಳಿಂದಾಗಿ ಭಕ್ತರ ಸಂಚಾರಕ್ಕೆ ತೊಂದರೆಯಾಖುದಲ್ಲದೆ, ಸಮಸ್ಯೆ ಮತ್ತಷ್ಟು ಉಲ್ಭಣವಾಗುವ ಸಾಧ್ಯತೆ ಇದೆ.

 

ನಗರದಲ್ಲಿ ವಾಹನ ದಟ್ಟಣೆ ಹೆಚ್ಚಳ ಕಂಡಿದ್ದು, ಸುಗಮ ಸಂಚಾರ ವ್ಯವಸ್ಥೆಗಾಗಿ ಸಿಗ್ನಲ್ ಕಂಬ ಅಳವಡಿಸುವ ಯೋಜನೆ ರೂಪಿಸಲಾಗಿತ್ತು. ಅದಕ್ಕೆಂದೆ ನಿರ್ಮಾಣ ಕಾಮಗಾರಿಯು ಪ್ರಾರಂಭ ಪಡೆದಿತ್ತು. ನಗರದ ತ್ರಿವೇಣಿ ವೃತ್ತ, ಹಳೆ ಡಯಾನ ವೃತ್ತದಲ್ಲಿ ಸಿಗ್ನಲ್ ಕಂಬದ ತಳಪಾಯ ಕಾಮಗಾರಿ ಮುಗಿದಿತ್ತು. ಆದರೆ ತಳಪಾಯದ ಪೀಠಕ್ಕೆ ಕಂಬ ಜೋಡಿಸುವ ಕಾಮಗಾರಿಯು ಸ್ಥಗಿತ ಪಡೆದು ಮೂರು ತಿಂಗಳು ಕಳೆದಿವೆ. ಜೋಡಣೆಗೆ ತಂದಿರುವ ಲಾರಿಗಟ್ಟಲೆ ಸಾಮಾಗ್ರಿಗಳನ್ನು ಪಾದಚಾರಿ ರಸ್ತೆಯಲ್ಲಿ ಸಂಗ್ರಹಿಸಿಡಲಾಗಿದೆ.

ಪಾದಚಾರಿಗಳು ನಡೆದಾಡಲು ಸ್ಥಳಾವಕಾಶ ಇಲ್ಲದೆ ವಾಹನ ದಟ್ಟನೆ ಇರುವ ಹೆದ್ದಾರಿಯಲ್ಲಿ ನಡೆದಾಡ ಬೇಕಾದ ಪರಿಸ್ಥಿತಿ ಎದುರಾಗಿದೆ. ಅದೇ ಸ್ಥಳದಲ್ಲಿ ಗಿಡಗಂಟಿಗಳು ಬೆಳೆದು ಪೊದೆಗಳಾಗಿವೆ. ವಿಷ ಜಂತುಗಳಿಗೆ ಆಶ್ರಯತಾಣವಾಗಿದೆ. ಇಲ್ಲಿಯೇ ಕಸ ತ್ಯಾಜ್ಯಗಳು ಸಂಗ್ರಹ ಪಡೆದು ನಾರುತ್ತಿವೆ. ಡಯಾನ ವೃತ್ತದಲ್ಲಿ ರಸ್ತೆಯು ತಿರುವು ಪಡೆದಿರುವುದರಿಂದ ಇಲ್ಲಿ ಬಹಳಷ್ಟು ದ್ವಿಚಕ್ರ ವಾಹನ ಸವಾರರಿಗೆ ಕಂಬಗಳು ಗೋಚರಕ್ಕೆ ಬಾರದೆ ಅಪಘಾತವಾಗಿರುವ ಘಟನೆಗಳು ಬಹಳಷ್ಟು ನಡೆದಿವೆ. ಇಲ್ಲಿ ಎದುರಾಗಿರುವ ಸಮಸ್ಯೆಯನ್ನು ಪರಿಶೀಲಿಸಿ ಜಿಲ್ಲಾಡಳಿತವು ತಕ್ಷಣ ಸಮಸ್ಯೆ ಬಗೆಹರಿಸಬೇಕೆಂದು ನಾಗರಿಕ ಸಮಿತಿಯ ಕಾರ್ಯಕರ್ತರು ಆಗ್ರಹಪಡಿಸಿದ್ದಾರೆ.

Previous Post

ಶಿರೂರು ಮೀನುಗಾರರ ಸಾವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ..!!

Next Post

ಕುಂದಾಪುರ : ತಾವು ಓದಿದ್ದ ಕೆರಾಡಿ ಕನ್ನಡ ಮಾಧ್ಯಮ ಶಾಲೆಯನ್ನು ದತ್ತು ಪಡೆದ ನಟ ರಿಷಬ್‌ ಶೆಟ್ಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ತಾವು ಓದಿದ್ದ ಕೆರಾಡಿ ಕನ್ನಡ ಮಾಧ್ಯಮ ಶಾಲೆಯನ್ನು ದತ್ತು ಪಡೆದ ನಟ ರಿಷಬ್‌ ಶೆಟ್ಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026

Recent News

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved