Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ನಾನು ಶಂಕುಸ್ಥಾಪನೆ ಮಾಡಿದ ತರಬೇತಿ ಕೇಂದ್ರ ಮತ್ತು ಭವನವನ್ನು ನಾನೇ ಉದ್ಘಾಟಿಸುತ್ತೇನೆ: ಸಿ.ಎಂ ಅಭಯ..!! 

Dhrishya News by Dhrishya News
22/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಮೈಸೂರು : ಡಿ 22: ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು.

 

ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

 

ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗ್ತದಾ? ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ ಎಂದು ಹೇಳಿದರು.

 

ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು ಎಂದರು.

 

ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು ಎಂದರು.

 

ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ ಎಂದು ಪ್ರಶ್ನಿಸಿದರು.

 

ಗಂಡ ಹೆಂಡತಿ ಜಗಳ ಸುದ್ದಿ ಮಾಡ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಇಂಥದ್ದನ್ನೆಲ್ಲಾ ಸ್ಟೋರಿ ಮಾಡಿದರೆ ಮಾಧ್ಯಮಗಳ ಬಗ್ಗೆ ಜನ ಕುತೂಹಲ ಕಳೆದುಕೊಳ್ಳದೆ ಇನ್ನೇನಾಗುತ್ತದೆ ಎಂದರು.

 

ನಾನು ಶಂಕುಸ್ಥಾಪನೆ ಮಾಡಿದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ವವನ್ನು ನಾನೇ ಉದ್ಘಾಟಿಸುತ್ತೇನೆ ಎಂದ ಅವರು ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.

 

ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ಅವರು ವಹಿಸಿದ್ದರು.

 

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

 

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

Previous Post

ಎಸ್ಎಎಸ್ಎಸ್ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಸಂಚಾಲಕಿಯಾಗಿ ತಾರಾ ಉಮೇಶ್ ಆಚಾರ್ಯ ಆಯ್ಕೆ..!!

Next Post

ಉಡುಪಿ : ಮನೆಯಲ್ಲಿ ಕಳ್ಳತನ: ತನಿಖೆಗೆ ನಾಲ್ಕು ತಂಡಗಳ ರಚನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಮನೆಯಲ್ಲಿ ಕಳ್ಳತನ: ತನಿಖೆಗೆ ನಾಲ್ಕು ತಂಡಗಳ ರಚನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026