Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಜಿಲ್ಲೆಯಾದ್ಯಂತ ಭಕ್ತಿ, ಶೃದ್ಧೆ, ಸಂಭ್ರಮದ ಕ್ರಿಸ್ಮಸ್ ಹಬ್ಬದ ಸಡಗರ..!!

Dhrishya News by Dhrishya News
24/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 24: ಏಸುಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ರಾತ್ರಿ ಭಕ್ತಿ, ಶೃದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು.

 

ಭಾನುವಾರ ರಾತ್ರಿ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರು ತಮ್ ಅಧಿಕೃತ ಚರ್ಚು ಮಿಲಾಗ್ರಿಸ್ ಕೆಥೆಡ್ರಲ್ ಕಲ್ಯಾಣಪುರದಲ್ಲಿ ಬಲಿಪೂಜೆಯನ್ನು ಅರ್ಪಿಸಿ ಹಬ್ಬದ ಸಂದೇಶವನ್ನು ನೀಡಿದರು.

ನಮ್ಮೆಲ್ಲರನ್ನು ಪ್ರೀತಿಸುವುದಕ್ಕಾಗಿ ಭುವಿಗೆ ಆಗಮಿಸಿದ ಯೇಸು ಸ್ವಾಮಿ ದನದ ಕೊಟ್ಟಿಗೆಯಾದ ಗೋದಲಿಯಲ್ಲಿ ಜನಿಸಿ ತನ್ನ ಸರಳತೆ ಮೆರೆದರು. ಪ್ರೀತಿ ಪಡೆಯುವುದರಲ್ಲಿಇರುವ ಸಂತೋಷಕ್ಕಿಂತ ಇತರರಿಗೆ ಸೇವೆಯ ಮೂಲಕ ನೀಡುವುದರಲ್ಲಿ ಹೆಚ್ಚಿನ ಸಮಾಧಾನ ನೀಡುತ್ತದೆ. ಪರಸ್ಪರ ದ್ವೇಷಿಸುವುದಕ್ಕಿಂತ ಯೇಸುವಿನಂತೆ ಇತರರನ್ನು ಪ್ರೀತಿಸುವ ಕೆಲಸ ಮಾಡಬೇಕಾಗಿದೆ. ಕ್ರಿಸ್ತ ಜಯಂತಿ ಶಾಂತಿಯನ್ನು ಹಂಚುವ ಹಬ್ಬವಾಗಿದ್ದು ಜಗತ್ತಿನೆಲ್ಲೆಡೆ ಸದಾ ಶಾಂತಿ ನೆಲೆಸುವಂತೆ ಪ್ರಾರ್ಥಿಸಬೇಕು ಎಂದು ಧರ್ಮಾಧ್ಯಕ್ಷರು ತಮ್ಮ ಸಂದೇಶದಲ್ಲಿ ತಿಳಿಸಿದರು.

 

ಮಿಲಾಗ್ರಿಸ್ ಕ್ಯಾಥೆಡ್ರಲ್ ನ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ|ಜೋಯ್ ಅಂದ್ರಾದೆ, ಕಟಪಾಡಿ ಹೋಲಿ ಕ್ರಾಸ್ ಸಭೆಯ ವಂ|ರೊನ್ಸನ್ ಡಿಸೋಜಾ ಉಪಸ್ಥಿತರಿದ್ದರು.

ಬಲಿಪೂಜೆಗೂ ಮುನ್ನ ಯೇಸು ಸ್ವಾಮಿಯ ಜನನದ ವೃತ್ತಾಂತವನ್ನು ನಟನೆ ಮತ್ತು ನೃತ್ಯರೂಪಕದ ಮೂಲಕ ಚರ್ಚಿನ ಮಕ್ಕಳು ಪ್ರದರ್ಶಿಸಿದರು.ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಇಡೀ ಜಿಲ್ಲೆಯ ಚರ್ಚುಗಳು ವರ್ಣಮಯ ವಿದ್ಯುತ್ ದೀಪಾಲಂಕಾರ ಹಾಗೂ ಬಗೆ ಬಗೆಯ ಚಿತ್ತಾಕರ್ಷಕ ನಕ್ಷತ್ರಗಳಿಂದ ಕಂಗೊಳಿಸುತ್ತಿದ್ದವು. ಉಡುಪಿ ಜಿಲ್ಲೆಯ ಪ್ರಮುಖ ದೇವಾಲಯಗಳು ಭಕ್ತಾದಿಗಳಿಂದ ತುಂಬಿ ತುಳುಕುತ್ತಿದ್ದವು.

ಭಾನುವಾರ ರಾತ್ರಿ ಪೂಜೆಯ ವೇಳೆ ಸಿಂಗರಿಸಿಟ್ಟ ಗೋದಲಿಯಲ್ಲಿ ಬಾಲಯೇಸು ಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗುಳದ ಮೂಲಕ ಭಕ್ತಾದಿಗಳು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಹೂವು ಸುಗಂಧಗಳನ್ನು ಅರ್ಪಿಸುವುದರ ಮೂಲಕ ಯೇಸು ಸ್ವಾಮಿಯ ಜನನವನ್ನು ಕ್ರೈಸ್ತ ಭಾಂಧವರು ಸ್ವಾಗತಿಸಿದರು.

ಜಿಲ್ಲೆಯ ಪ್ರಮುಖದ ಚರ್ಚುಗಳಾದ ಶಿರ್ವ ಆರೋಗ್ಯ ಮಾತೆಯ ದೇವಾಲಯದಲ್ಲಿ ಧರ್ಮಗುರು ವಂ|ಡಾ| ಲೆಸ್ಲಿ ಡಿ’ಸೋಜಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ|ಸ್ಟ್ಯಾನಿ ತಾವ್ರೊ, ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ | ಆಲ್ಬನ್ ಡಿಸೋಜಾ, ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ವಂ |ಡೆನಿಸ್ ಡೆಸಾ ಇವರುಗಳ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ ಬಲಿಪೂಜೆಗಳು ನಡೆದವು,ಹಬ್ಬದ ಅಂಗವಾಗಿ ಚರ್ಚುಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಮಕ್ಕಳ ಪ್ರೀತಿಗೆ ಪಾತ್ರನಾದ ಸಾಂತಾಕ್ಲಾಸ್ ವೇಷ, ಭಕ್ತಾದಿಗಳಿಗೆ ಕ್ರಿಸ್ಮಸ್ ಕೇಕ್ ವಿತರಣೆ ಕೂಡ ನಡೆಯಿತು. ಬಲಿಪೂಜೆಯ ಬಳಿಕ ಕ್ರೈಸ್ತ ಭಾಂಧವರು ಪರಸ್ಪರ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Previous Post

ಉಡುಪಿ : ಶ್ರೀಕೃಷ್ಣನ ದರ್ಶನ ಪಡೆದ ಪೂಜಾ ಗಾಂಧಿ ದಂಪತಿ…!!

Next Post

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

30/01/2026
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026

Recent News

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

30/01/2026
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved