Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಿದ್ಯಾಪೀಠದ ” ಸುವರ್ಣ ಸ್ಮೃತಿ ಸೌಧ” ಸಮರ್ಪಣಾ ಸಮಾರಂಭ.!!

Dhrishya News by Dhrishya News
01/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
6
VIEWS
Share on FacebookShare on Twitter

ಉಡುಪಿ: ಜನವರಿ 01: ದ್ರಶ್ಯ ನ್ಯೂಸ್ :ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಪೀಠಾರೋಹಣದ ಸುವರ್ಣೋತ್ಸವದ ಸ್ಮರಣಿಕೆಯಾಗಿ ಪೂಜ್ಯ ವ್ಯಾಸರಾಜ ಶ್ರೀಪಾದರಿಂದ ಪುತ್ತಿಗೆ ಯಲ್ಲಿ ಶ್ರೀ ಪುತ್ತಿಗೆ ವಿದ್ಯಾಪೀಠದ ಭವ್ಯ ಕಟ್ಟಡ ಸುವರ್ಣ ಸ್ಮೃತಿ ಸೌಧ*ಲೋಕಾರ್ಪಣೆ ನಿನ್ನೆ ಡಿಸೆಂಬರ್ 31 ರಂದು ನೆರವೇರಿತು

ಇಂದಿನ ಕಾಲದಲ್ಲಿ ಅನೇಕ ವಿಶ್ವವಿದ್ಯಾಲಯಗಳು, ಪಾಠಶಾಲೆಗಳು ಸರಕಾರದ ಅಧೀನವಾಗಿ ನಡೆಯುತ್ತಿದ್ದು ಆರ್ಥಿಕ ಬಲದಿಂದ ಬೃಹತ್‌ ಕಟ್ಟಡಗಳು ಕಂಡುಬಂದರೂ ನಿರೀಕ್ಷಿಸಿದಷ್ಟು ಫ‌ಲಗಳು ಸಮಾಜಕ್ಕೆ, ದೇಶಕ್ಕೆ ದೊರಕುತ್ತಿಲ್ಲ. ಆದರೆ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥರು ಪುತ್ತಿಗೆಯಂತಹ ಹಳ್ಳಿಯಲ್ಲಿ ನಡೆಸುತ್ತಿರುವ ವಿದ್ಯಾಪೀಠದಿಂದ ಹೊರಬಂದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲೂ ಅಮೂಲ್ಯ ಸೇವೆ ಸಲ್ಲಿಸುತ್ತಿದ್ದಾರೆಂದು ಸೋಸಲೆ ವ್ಯಾಸರಾಜ ಮಠದ ಶ್ರೀವಿದ್ಯಾಶ್ರೀಶತೀರ್ಥ ಶ್ರೀಪಾದರು ಹೇಳಿದರು.

ಶ್ರೀಕೃಷ್ಣಮಠದಲ್ಲಿ ಜ. 18ರಂದು ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಪೀಠಾರೋಹಣದ ಸುವರ್ಣ ಮಹೋತ್ಸವದ ಅಂಗವಾಗಿ ಹಿರಿಯಡಕ ಸಮೀಪದ ಪುತ್ತಿಗೆ ಮೂಲ ಮಠದ ಪುತ್ತಿಗೆ ವಿದ್ಯಾಪೀಠದ ವಿದ್ಯಾರ್ಥಿಗಳ ಅನುಕೂಲಕತೆಗಾಗಿ ನಿರ್ಮಿಸಿದ ಸುವರ್ಣ ಸ್ಮತಿಸೌಧವನ್ನು ರವಿವಾರ ಸೋಸಲೆ ವ್ಯಾಸರಾಜ ಮಠಾಧೀಶರು ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದರು

ಅಧ್ಯಕ್ಷತೆಯನ್ನು ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ವಹಿಸಿದ್ದರು. ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ನ್ಯಾ|ಮೂ| ಪಿ.ಎಸ್‌.ದಿನೇಶಕುಮಾರ್‌ ಶುಭ ಕೋರಿದರು. ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ವಿದ್ವಾಂಸರಾದ ಬೆಂಗಳೂರಿನ ಚತುರ್ವೇದಿ ವೇದವ್ಯಾಸಾಚಾರ್‌, ಕಾಸರಗೋಡಿನ ರವೀಶ್ ತಂತ್ರಿ ಕುಂಟಾರು, ಮಂಗಳೂರು ಶಾರದಾ ಸಮೂಹ ವಿದ್ಯಾಲಯದ ಅಧ್ಯಕ್ಷ ಪ್ರೊ|ಎಂ.ಬಿ.ಪುರಾಣಿಕ್‌, ಪುತ್ತೂರಿನ ಡಾ|ಪಿ.ಜೆ.ಬಾಲಕೃಷ್ಣ ಮೂಡಂಬಡಿತ್ತಾಯ, ಉಜಿರೆಯ ಡಾ|ದಯಾಕರ್‌, ಅ.ಕ.ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಬೆಂಗಳೂರಿನ ಬಿ.ಎಸ್‌.ರಾಘವೇಂದ್ರ ಭಟ್‌, ಅಮೆರಿಕದ ದಂಡತೀರ್ಥ ಸೀತಾರಾಮ ಭಟ್‌, ಸಾರಿಗೆ ಉದ್ಯಮಿ ಕೃಷ್ಣಾನಂದ ಚಾತ್ರ, ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ ಉಪಾಧ್ಯಾಯ, ನಿವೃತ್ತ ಪ್ರಾಂಶುಪಾಲ ಡಾ|ಮಧುಸೂದನ ಭಟ್‌ ಅತಿಥಿಗಳಾಗಿ ಪಾಲ್ಗೊಂಡಿದ್ದರು.

 

ಪುತ್ತಿಗೆ ವಿದ್ಯಾಪೀಠದ ಪ್ರಾಂಶುಪಾಲ ಸುನಿಲ್‌ ಆಚಾರ್ಯ ಸ್ವಾಗತಿಸಿ, ಅಮೆರಿಕದ ನ್ಯೂಜೆರ್ಸಿ ಶ್ರೀಕೃಷ್ಣ ವೃಂದಾವನದ ಪ್ರಧಾನ ಅರ್ಚಕ ಯೋಗೀಂದ್ರ ಭಟ್‌ ಕಾರ್ಯಕ್ರಮ ನಿರ್ವಹಿಸಿದರು. ಶ್ರೀಪಾದರ ಆಪ್ತ ಕಾರ್ಯದರ್ಶಿ ಪ್ರಸನ್ನಾಚಾರ್ಯ ವಂದಿಸಿದರು. ವಿದ್ವಾಂಸ ಡಾ|ಗೋಪಾಲಾಚಾರ್ಯ ಪ್ರಸ್ತಾವನೆಗೈದರು.

Previous Post

ಹೊಸ ವರ್ಷಕ್ಕೆ  ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿಯವರಿಂದ ದೇಶದ ಜನತೆಗೆ ಶುಭಾಶಯ…!!

Next Post

ಉಡುಪಿ :ಧನ್ವಿ  ಮರವಂತೆಗೆ ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿ ಪ್ರದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಧನ್ವಿ  ಮರವಂತೆಗೆ ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿ ಪ್ರದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

30/01/2026
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026

Recent News

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

30/01/2026
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved