Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಪರ್ಯಾಯ ಮಹೋತ್ಸವದ ಸುಗಮ ವಾಹನ ಸಂಚಾರಕ್ಕೆ ಡಿಜಿಟಲ್ ಟ್ರಾಫಿಕ್ ವ್ಯವಸ್ಥೆ..!!

Dhrishya News by Dhrishya News
15/01/2024
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
89
VIEWS
Share on FacebookShare on Twitter

ಉಡುಪಿ:ಜನವರಿ 15: ಪುತ್ತಿಗೆ ಮಠದ ಪರ್ಯಾಯದ ಸಂದರ್ಭದಲ್ಲಿ ಬೇರೆ ಬೇರೆ ಕಡೆಗಳಿಂದ ಆಗಮಿಸುವ ಭಕ್ತಾದಿಗಳಿಗೆ ಹಾಗೂ ನಾಗರಿಕರಿಗೆ ಸುಗಮ ಸಂಚಾರ ಮತ್ತು ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಡಿಜಿಟಲ್ ಟ್ರಾಫಿಕ್ ಮತ್ತು ವಾಹನ ಪಾರ್ಕಿಂಗ್ ಮ್ಯಾನೇಜ್ ಮೆಂಟ್ ವ್ಯವಸ್ಥೆಯನ್ನು ಈ ಬಾರಿ ಪರಿಚಯಿಸಿದೆ.

 

ಹೊಸಡಿಜಿಟಲ್ ಟ್ರಾಫಿಕ್ ಮತ್ತು ವಾಹನ ಪಾರ್ಕಿಂಗ್ ಮ್ಯಾನೇಜ್ ಮೆಂಟ್ ವ್ಯವಸ್ಥೆಯಲ್ಲಿ ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಸಹಾಯವಾಗುವ ನಿಟ್ಟಿನಲ್ಲಿ ನಗರದ 25 ಕಡೆಗಳಲ್ಲಿ ಕ್ಯೂ ಆರ್ ಕೋಡ್ ಸ್ಯಾನರ್ ಗಳನ್ನು ಆಳವಡಿಸಲಾಗುತ್ತಿದ್ದು ಇದನ್ನು ಸ್ಕ್ಯಾನ್ ಮಾಡುವುದ ರಿಂದ ಭಕ್ತರು ಶ್ರೀಕೃಷ್ಣ ಮಠಕ್ಕೆ ತಲುಪುವ ವಿವರಗಳು ಹಾಗೂ ಪಾರ್ಕಿಂಗ್ ಸ್ಥಳದ ಮಾಹಿತಿಗಳನ್ನು ಪಡೆಯಬಹುದಾಗಿದೆ.

ಪರ್ಯಾಯಕ್ಕೆ ಆಗಮಿಸುವ ಹೊರ ರಾಜ್ಯ ಮತ್ತು ಜಿಲ್ಲೆಗಳ ಭಕ್ತರಿಗೆ ಸರಿಯಾದ ಮಾಹಿತಿ ಇಲ್ಲದೆ ಒಳರಸ್ತೆಗಳಿಂದ ನಗರಕ್ಕೆ ಪ್ರವೇಶ ಪಡೆದಾಗ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ’ ಅರುಣ್ ಕೆ ಹೊಸ ಪ್ರಯೋಗವನ್ನು ಮಾಡಿದ್ದಾರೆ. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವುದರ ಮೂಲಕ ಹೊರರಾಜ್ಯ ಹಾಗೂ ಜಿಲ್ಲೆಗಳ ಭಕ್ತರು ನಿಗ ದಿತ ಪ್ರದೇಶಕ್ಕೆ ಸುಲಭವಾಗಿ ತಲುಪಬಹುದಾಗಿದೆ

 

ಇದಲ್ಲದೆ ಕ್ಯೂಆರ್ ಕೋಡ್ ಸ್ಕ್ಯಾನ್ ತಮ್ಮ ಮೊಬೈಲ್ಗಳಲ್ಲಿ ಸ್ಕ್ಯಾನ್ ಮಾಡಿದಾಗ ಪರ್ಯಾಯ ಮಹೋತ್ಸವ ಸಂಬಂಧ ಈಗಾಗಲೇ ನಿಗದಿಪಡಿಸಿದ ವಿವಿಐಪಿ ಪಾರ್ಕಿಂಗ್, ವಿಐಪಿ ಪಾರ್ಕಿಂಗ್, ಕಾರು, ದ್ವಿಚಕ್ರ ವಾಹನ ಪಾರ್ಕಿಂಗ್ ಮಾಹಿತಿಗಳು ಫೋಟೋ ಸಮೇತ ಪಡೆಯಬಹುದಾಗಿದೆ.

 

ಅಲ್ಲದೆ ನಗರದಲ್ಲಿನ ಪರ್ಯಾಯ ಮೆರವಣಿಗೆ ಮಾರ್ಗ, ಪೊಲೀಸ್ ಔಟ್ಪೋಸ್ಟ್, ಪೊಲೀಸ್ ಹೆಲ್ಪ್ಲೈನ್, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಮೊಬೈಲ್ ಟಾಯ್ಲೆಟ್ಗಳು, ಸಾರ್ವಜನಿಕರಿಗೆ ಕಳ್ಳರ ಬಗ್ಗೆ ಎಚ್ಚರಿಕೆ ಕೊಡುವ ಪೊಲೀಸ್ ನೋಟೀಸ್ ಅಳವಡಿಸಿರುವ ಸ್ಥಳಗಳು, ಬ್ಯಾರಿಕೇಡ್ ಅಳವಡಿಸಿರುವ ಸ್ಥಳಗಳ ಸಂಪೂರ್ಣ ಮಾಹಿತಿ ಈ ವ್ಯವಸ್ಥೆಯಿಂದ ಪಡೆಯಬಹುದಾಗಿದೆ.

 

ಪರ್ಯಾಯ ಮಹೋತ್ಸವಕ್ಕೆ ಪೊಲೀಸ್ ಇಲಾಖೆ ಸೂಕ್ತ ಭದ್ರತೆಯನ್ನು ಮಾಡಿದ್ದು ಇರಿಸಲು ಉಡುಪಿ, ದ.ಕ., ಚಿಕ್ಕಮಗಳೂರು, ಉತ್ತರಕನ್ನಡ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

 

ಜಿಲ್ಲಾ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಜಿಲ್ಲೆಯ 4 ಮಂದಿ ಹಾಗೂ ಹೊರಜಿಲ್ಲೆಯ 5 ಮಂದಿ ಡಿವೈಎಸ್ಪಿಗಳು, ಜಿಲ್ಲೆಯ 10 ಹಾಗೂ ಹೊರಜಿಲ್ಲೆಯ 12 ಮಂದಿ ಪೊಲೀಸ್ ನಿರೀಕ್ಷಕರು, ಜಿಲ್ಲೆಯ 40 ಹಾಗೂ ಹೊರಜಿಲ್ಲೆಯ 25 ಮಂದಿ ಉಪನಿರೀಕ್ಷಕರು, ಜಿಲ್ಲೆಯ 550 ಹಾಗೂ ಹೊರಜಿಲ್ಲೆಯ 400 ಮಂದಿ ಸಿಬಂದಿ, ಎರಡು ಕೆಎಸ್ಆರ್ಪಿ, 10 ಜಿಲ್ಲಾ ಸಶಸ್ತ್ರ ಪೊಲೀಸ್ ಮೀಸಲು ಪಡೆಗಳನ್ನು ನಿಯೋಜಿಸಲಾಗಿದೆ

ಡಿಜಿಟಲ್ ಟ್ರಾಫಿಕ್ ವ್ಯವಸ್ಥೆ ವಿವರಗಳಿಗೆ ಕ್ಲಿಕ್ ಮಾಡಿ

PARYAYA DARBAR – 2024 TRAFFIC MANAGEMENT SYSTEM

https://goo.gl/maps/PmJ1Ee5cBKPrVbHK6

Previous Post

ಉಡುಪಿ ಪೇಜಾವರ ಮಠದಲ್ಲಿ ಶ್ರೀ ವಿಶ್ವೇಶತೀರ್ಥ ಸಂಸ್ಮರಣೆ : ದೇಶ ಸೇವೆ ಈಶ ಸೇವೆಯಲ್ಲಿ ಸಾರ್ಥಕ್ಯ ಕಂಡ ಶ್ರೇಷ್ಠ ತಪಸ್ವಿಗಳು ಶ್ರೀ ವಿಶ್ವೇಶತೀರ್ಥರು – ಶ್ರೀ ವಿದ್ಯಾಧೀಶತೀರ್ಥ ಶ್ರೀ

Next Post

ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ಸ್ ಕರಿಕ್ಯುಲಮ್ ಕಾನ್ಕ್ಲೇವ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ಸ್ ಕರಿಕ್ಯುಲಮ್ ಕಾನ್ಕ್ಲೇವ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved