Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ನಾಲ್ಕನೇ ದಿನದ ಬಲಿಪೂಜೆ ಸಂಪನ್ನ..!!

ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರ : ಅತ್ತೂರು ಕಾರ್ಕಳ ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು. ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೊ.

Dhrishya News by Dhrishya News
25/01/2024
in ಕರಾವಳಿ, ಮುಖಪುಟ
0
0
SHARES
7
VIEWS
Share on FacebookShare on Twitter

ಕಾರ್ಕಳ:ಜನವರಿ 25: ಅತ್ತೂರು ಕಾರ್ಕಳ ಪವಾಡ ಪುರುಷ ಸಂತ ಲಾರೆನ್ಸ್ ಬಸಿಲಿಕದ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ನಾಲ್ಕನೇ ದಿನದ ಭಕ್ತಿ ಕಾರ್ಯಗಳು ಅತ್ಯಂತ ಸುಸೂತ್ರವಾಗಿ ನೆರವೇರಿತು. ಸಂತ ಲಾರೆನ್ಸ್ ಪುಣ್ಯಕ್ಷೇತ್ರದ ಮಹೋತ್ಸವದ ಅಂಗವಾಗಿ ‘ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು’ ಎಂಬ ಹಬ್ಬದ ದಿನದ ವಿಷಯವನ್ನು ಧ್ಯಾನಿಸಲಾಯಿತು. ದೈನಂದಿನ ಜೀವನದಲ್ಲಿ ಕೇಳುವ ಬಯಕೆ ನಮ್ಮದಾದಾಗ ನೀಡುವ ಆಶಯ ತಂದೆ ದೇವರದ್ದಾಗಿರುತ್ತದೆ. ಪ್ರಾರ್ಥನೆಯ ಮೂಲಕ ಕೇಳುವ ನಮ್ಮ ಅತ್ಯಗತ್ಯಗಳನ್ನು ದೇವರು ಸಕಾಲಕ್ಕೆ ಒದಗಿಸುವುರು. ಮನುಜರಾದ ನಾವು ಕೇಳುವ ಗುಣವನ್ನು ಶ್ರತಪಡಿಸಿದಾಗ ಅದರ ಫಲ ಖಂಡಿತವಾಗಿಯೂ ಲಭಿಸುತ್ತದೆ.

 

ಜನಸಾಗರ ಪುಣ್ಯಕ್ಷೇತ್ರದ ವಠಾರದ ಸುತ್ತಮುತ್ತ ಒಂದುಗೂಡಿ ತಮ್ಮ ಭಕ್ತಿಕಾರ್ಯಗಳಲ್ಲಿ ಒಂದಾದರು. ಪಾಲಕ ಸಂತ ಲಾರೆನ್ನರ ಸಮುಕದಲ್ಲಿ ವಿಶೇಷವಾಗಿ ಪ್ರಾರ್ಥಿಸಿದರು. ಪವಾಡ ಮೂರ್ತಿಯ ಬಳಿ ಸಾಲು ನಿಂತು ಭಕ್ತಿಪರವಶೆಯಿಂದ ಪ್ರಾರ್ಥನೆಯಲ್ಲಿ ಮಗ್ನರಾದರು.

 

ಜನವರಿ 24 ರಂದು ಸಂತ ಲಾರೆನ್ಸರ ದೇವಾಲಯದ ಒಳಗಿನ ದಿವ್ಯ ಸಂಪುಟದ ಬಳಿ ಧಾವಿಸಿ ಪ್ರಾರ್ಥಿಸಿದರು. ದಿವ್ಯ ಬಲಿಪೀಠದ ಮೇಲೆ ತಮ್ಮ ಪುಟ್ಟ ಮಕ್ಕಳನ್ನು ಕುಳ್ಳಿರಿಸಿ ಹರಕೆಯನ್ನು ತೀರಿಸಿದರು. ಜಲ ತೀರ್ಥ ಹಾಗೂ ಪುಷ್ಪ ತೀರ್ಥವನ್ನು ಭಕ್ತಜನಸಾಗರ ಭಾವನಾತ್ಮಕವಾಗಿ ಭಕ್ತಿಯಿಂದ ಸ್ವೀಕರಿಸಿದರು. ಪವಾಡ ಮೂರ್ತಿಯ ದಿವ್ಯ ಪ್ರಸನ್ನತೆಯನ್ನು ಕಂಡ ಭಕ್ತಜನರು ಸಾವಿರಾರು ಸಂಖ್ಯೆಯಲ್ಲಿ ಧಾವಿಸಿದರು. ಅಂತೆಯೇ ಲೂಕನ ಶುಭಸಂದೇಶದಿಂದ ಆರಿಸಲ್ಪಟ್ಟಂತಹ ದೈವವಾಕ್ಯ ‘ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು’ ಪ್ರವಚನಕ್ಕೆ ಆರಿಸಲ್ಪಟ್ಟ ಪ್ರಮುಖ ಧ್ಯಾನದ ವಿಷಯವಾಗಿತ್ತು.

 

ವಾರ್ಷಿಕ ಮಹೋತ್ಸವದ ಪ್ರಮುಖ ಸಾಂಭ್ರಾಮಿಕ ಆಡಂಭರದ ಗಾಯನ ಬಲಿಪೂಜೆಯನ್ನು ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾಂದತಹ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೊ ನೆರವೇರಿಸಿ ನಾವು ನಮ್ಮ ಶ್ವಾಸವನ್ನು ಆಗಿಂದಾಗೆ ಶ್ವಾಶಿಸುವಾಗ ದೇವರನ್ನು ಆಗಿಂದಾಗೆ ಜ್ಞಾಪಿಸಿಕೊಳ್ಳಬೇಕು. ಭರವಸೆಯಿಂದ ಹಾಗೂ ನಂಬಿಕೆಯಿಂದ ಕೂಡಿದ ನಮ್ಮ ಪ್ರಾರ್ಥನೆ ಫಲಭರಿತಾಗುವುದು. ನಮ್ಮ ಜೀವನದಲ್ಲಿ ಪಾರ್ಥನೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ನಮ್ಮ ಕುಟುಂಬ ಪ್ರಾರ್ಥನಾ ಮಂದಿರವಾಗಬೇಕು. ಪ್ರಾರ್ಥನೆಯನ್ನು ಜೀವನದಿಂದ ಬೇರ್ಪಡಿಸಲು ಅಸಾಧ್ಯ. ಪ್ರಾರ್ಥನೆ ಶಕ್ತಿಯುತ ಸಾಧನ. ಸ್ವರ್ಗದ ದ್ವಾರವನ್ನು ತೆರೆಯುವಂತಹ ಕೈಬೀಗ ಆದಾಗಿದೆ ಎಂದು ಅರ್ಥಗರ್ಭಿತ ಪ್ರಬೋಧನೆಯನ್ನು ನೀಡಿದರು.

 

ದಿನದ ಇತರ ಬಲಿಪೂಜೆಗಳನ್ನು ವಂದನೀಯ ಜಾನ್ ವಾಸ್, ಫಾದರ್ ಮುಲ್ಲರ್ ಮಂಗಳೂರು, ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೊ ಉಡುಪಿಯ ಧರ್ಮಾಧ್ಯಕ್ಷರು, ವಂದನೀಯ ಆಲ್ಬರ್ಟ್ ಕ್ರಾಸ್ತಾ, ಗಂಗೊಳ್ಳಿ, ವಂದನೀಯ ಪ್ರದೀಪ್ ಕರ್ಡೋಜಾ, ಮೂಡುಬೆಳ್ಳಿ, ವಂದನೀಯ ಫ್ರಾನ್ಸಿಸ್ ಮಿನೆಜಸ್, ಗುಲ್ಬರ್ಗಾ, ವಂದನೀಯ ರಾಬರ್ಟ್ ಕ್ರಾಸ್ತಾ, ಗುಲ್ಬರ್ಗಾ, ವಂದನೀಯ ಲೆಸ್ಲಿ ಡಿ’ಸೋಜ, ಶಿರ್ವಾಂ, ವಂದನೀಯ ಅಲ್ಟನ್ ಡಿ’ಸೋಜ, ಅತ್ತೂರು ಪುಣ್ಯಕ್ಷೇತ್ರ, ವಂದನೀಯ ರೋಯ್ ಲೋಬೊ, ಉಡುಪಿ ಇವರುಗಳು ಅರ್ಪಿಸಿದರು.

 

ವಿವಿಧ ಸ್ಥಳಗಳಿಂದ, ವರನಾಡಿನಿಂದ ವಿದೇಶಿಯರು ಹಾಗೂ ಊರ ಮೂಲೆಮೂಲೆಗಳಿಂದ ಹಲವಾರು ಜನರು ಜಾತಿ ಭೇದವಿಲ್ಲದೆ ಹಬ್ಬದ ಸಂಭ್ರಮವನ್ನು ವೀಕ್ಷಿಸಲು. ಭಕ್ತಿಯಾಚರಣೆಗಳಲ್ಲಿ ಪಾಲ್ಗೊಳ್ಳಲು ಧಾವಿಸಿದರು. ಅಂತೆಯೇ ತಮ್ಮ ಹರಕೆಯ ಮೊಂಬತ್ತಿಯನ್ನು ಬೆಳಗಿಸಿದರು. ಪುಣ್ಯಕ್ಷೇತ್ರದ ತೈಲವನ್ನು ಸ್ವೀಕರಿಸಿ ಪವಿತ್ರ ಪುಷ್ಕರಣಿಯ ಸನ್ನಿಧಿ ಧಾವಿಸಿ ತೀರ್ಥವನ್ನು ಪಡೆದು, ದೀರ್ಘ ವಿಶೇಷ ಪ್ರಾರ್ಥನೆ ಹಾಗೂ ಬಸಿಲಿಕದ ಮಹಾನ್ ಪಾಲಕ ಸಂತ ಲಾರೆನ್ಸರ ದಿವ್ಯ ಸಾನಿಧ್ಯದ ಬಳಿ ಧಾವಿಸಿ ಪ್ರಾರ್ಥಿಸಿ ತೆರಳಿದರು.

 

ದಿನದ ಅಂತಿಮ ಬಲಿಪೂಜೆಯನ್ನು ರಾತ್ರಿ 10 ಗಂಟೆಗೆ ನೆರವೇರಿಸಿ ಮಹೋತ್ಸವದ ನಾಲ್ಕನೇ ದಿನದ ಬಲಿಪೂಜೆಗಳನ್ನು, ಧಾರ್ಮಿಕ ಭಕ್ತಿ- ಆಚರಣೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಭಕ್ತಿಯುತವಾಗಿ ನೇರವೇರಿಸಿ ಮುಕ್ತಾಯಗೊಳಿಸಲಾಯಿತು.

Previous Post

ವಿಸ್ಮಯ ಜಾದೂ :ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಾದೂ ಪ್ರದರ್ಶನ..!!

Next Post

ಉಡುಪಿ: ಮಹಾತ್ಮಾ ಗಾಂಧಿ ಹುತಾತ್ಮರಾದ ದಿನ ಜನವರಿ 30 ರಂದು “ಸೌಹಾರ್ದ ಮಾನವ ಸರಪಳಿ” – ಭಿತ್ತಿಪತ್ರ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಮಹಾತ್ಮಾ ಗಾಂಧಿ ಹುತಾತ್ಮರಾದ ದಿನ ಜನವರಿ 30 ರಂದು "ಸೌಹಾರ್ದ ಮಾನವ ಸರಪಳಿ" - ಭಿತ್ತಿಪತ್ರ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved