Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಪು :ಮೀನುಗಾರಿಕೆಗೆ ತೆರಳಿದ್ದ ಬೋಟನ್ನು ತಡೆದು ಮೀನುಗಾರರಿಗೆ ಹಲ್ಲೆ : ಲಕ್ಷಾಂತರ ರೂಪಾಯಿ ಬೆಲೆಬಾಳುವ ಮೀನು ಸಹಿತ ಸೊತ್ತುಗಳ ದರೋಡೆ..!!

Dhrishya News by Dhrishya News
01/02/2024
in ಸುದ್ದಿಗಳು
0
0
SHARES
51
VIEWS
Share on FacebookShare on Twitter

ಕಾಪು:ಫೆಬ್ರವರಿ 01:ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟನ್ನು ತಡೆದು ಮೀನುಗಾರರಿಗೆ ಹಲ್ಲೆ ನಡೆಸಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮೀನು ಹಾಗೂ ಮೀನುಗಾರರ ಬಳಿಯಿದ್ದ ಮೊಬೈಲ್‌ ಫೋನ್‌ ಸಹಿತ ಸೊತ್ತುಗಳನ್ನು ದರೋಡೆಗೈದಿರುವ ಘಟನೆ ಕಾಪು ಲೈಟ್‌ ಹೌಸ್‌ ಸಮೀಪದಲ್ಲಿ ಮಂಗಳವಾರ ನಡೆದಿದೆ.

ಆಂಧ್ರಪ್ರದೇಶದ ಮೀನುಗಾರರಾದ ಪರ್ವತಯ್ಯ, ಕೊಂಡಯ್ಯ, ರಘು ರಾಮಯ್ಯ, ಶಿವರಾಜ್‌, ಕೆ. ಶೀನು, ಏಳುಮಲೆ, ಚಿನ್ನೋಡು, ರಾಜು ಅವರು ಜ. 27ರಂದು ಮಹಮ್ಮದ್‌ ಮುಸ್ತಫ್‌ ಬಾಷಾ ಅವರಿಗೆ ಸೇರಿದ ಮಿರಾಶ್‌ – 2 ಟ್ರಾಲ್‌ ಬೋಟ್‌ನಲ್ಲಿ ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೊರಟಿದ್ದು ಮೀನುಗಳನ್ನು ಹಿಡಿದುಕೊಂಡು ಮರಳಿ ಹೋಗುತ್ತಿರುವಾಗ ಜ. 30ರಂದು ಬೆಳಿಗ್ಗೆ 5 ಗಂಟೆಗೆ ಕಾಪು ಲೈಟ್‌ ಹೌಸ್‌ನಿಂದ 10 ನಾಟಿಕಲ್‌ ಮೈಲ್‌ ದೂರ ಸಮುದ್ರ ಮಧ್ಯದಲ್ಲಿ ಹಲ್ಲೆ ನಡೆಸಿ, ಮೀನುಗಳನ್ನು ದರೋಡೆಗೈದಿರುವುದಾಗಿ ತಿಳಿದು ಬಂದಿದೆ.

ಹನುಮ ಜ್ಯೋತಿ ಹೆಸರಿನ ಪರ್ಸಿನ್‌ ಬೋಟ್‌ನಲ್ಲಿದ್ದ ಜನರ ಪೈಕಿ 7-8 ಜನರು ಟ್ರಾಲ್‌ ಬೋಟ್‌ ಒಳಗೆ ಹತ್ತಿ ಬೋಟ್‌ನಲ್ಲಿದ್ದ ಮೀನಿನ ಬಾಕ್ಸ್‌ಗಳನ್ನು ದರೋಡೆಗೈದಿದ್ದು ಈ ವೇಳೆ ಅವರನ್ನು ತಡೆಯಲು ಹೋದ ಮೀನುಗಾರರ ಪೈಕಿ ಶೀನು ಮತ್ತ ರಘು ರಾಮಯ್ಯ ಅವರನ್ನು ಪರ್ಸಿನ್‌ ಬೋಟ್‌ನ ಪಕ್ಕದಲ್ಲಿ ಬಂದ 5-7 ಜನರಿದ್ದ ನಾಡದೋಣಿಗೆ ಎತ್ತಿ ಹಾಕಿಕೊಂಡು ಹೋಗಿ ಹಲ್ಲೆ ನಡೆಸಿದರು. ಆಗ ಪರ್ಸಿನ್‌ ಬೋಟ್‌ನಲ್ಲಿದ್ದವರು ಟ್ರಾಲ್‌ ಬೋಟ್‌ನಲ್ಲಿದ್ದ 6 ಜನರಿಗೆ ಕೈಯಿಂದ ಹಾಗೂ ಮರದ ತುಂಡಿನಿಂದ ಹಲ್ಲೆ ನಡೆಸಿದರು. ಬಳಿಕ ನಾಡದೋಣಿಯಲ್ಲಿ ಕರೆದುಕೊಂಡು ಹೋದ ಶೀನು ಮತ್ತ ರಘು ರಾಮಯ್ಯ ಅ‌ವರನ್ನು ವಾಪಸು ಕರೆದುಕೊಂಡು ಬಂದು ಟ್ರಾಲ್‌ ಬೋಟ್‌ಗೆ ಹಾಕಿ, ಮೀನುಗಾರರ 4 ಮೊಬೈಲ್‌ ಮತ್ತು 2 ಲಕ್ಷ ರೂ. ಮೌಲ್ಯದ 12 ಬಾಕ್ಸ್‌ ಮೀನುಗಳನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ಹಲ್ಲೆಯ ಪರಿಣಾಮ ಪರ್ವತಯ್ಯ, ಕೊಂಡಯ್ಯ ರಘುರಾಮಯ್ಯ, ಶಿವರಾಜ್‌ ಮತ್ತು ಶೀನು ಅವರಿಗೆ ಗಾಯಗಳಾಗಿವೆ. ಟ್ರಾಲ್‌ ಬೋಟ್‌ನಲ್ಲಿದ್ದ ಮೀನುಗಾರರು ಘಟನೆಯ ಸಮಯ ಹಲ್ಲೆ ನಡೆಸಿ ಸುಲಿಗೆ ಮಾಡಿಕೊಂಡು ಹೋದವರನ್ನು ಹಾಗೂ ಬೋಟ್‌ನ ಹೆಸರನ್ನು ಬೋಟ್‌ನಲ್ಲಿದ್ದ ಲೈಟ್‌ ಸಹಾಯದಿಂದ ನೋಡಿರುವುದಾಗಿ ಮೀನುಗಾರರು ತಿಳಿಸಿದ್ದಾರೆ ಎಂದು ಬೋಟ್‌ನ ಮಾಲಕ ಮಹಮ್ಮದ್‌ ಮುಸ್ತಫ್‌ ಬಾಷಾ ಕಾಪು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಉಡುಪಿ :ಅಕ್ರಮ ಗಾಂಜಾ ಮಾರಾಟ ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ..!!

Next Post

16ನೇ ಹಣಕಾಸು ಆಯೋಗಕ್ಕೆ ನಾಲ್ಕು ಪೂರ್ಣಾವಧಿ ಸದಸ್ಯರ ನೇಮಕ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

16ನೇ ಹಣಕಾಸು ಆಯೋಗಕ್ಕೆ ನಾಲ್ಕು ಪೂರ್ಣಾವಧಿ ಸದಸ್ಯರ ನೇಮಕ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved