Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

Paytm ಅಪ್ಲಿಕೇಶನ್ ಎಂದಿನಂತೆ ಫೆಬ್ರವರಿ 29 ರ ನಂತರವೂ ಕಾರ್ಯನಿರ್ವಹಿಸುತ್ತದೆ: ಸಿಇಒ ವಿಜಯ್ ಶೇಖರ್ ಶರ್ಮಾ ಸ್ಪಷ್ಟನೆ..!!

Dhrishya News by Dhrishya News
02/02/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ನವದೆಹಲಿ : ಫೆಬ್ರವರಿ 02 :ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ ಅನ್ನು ಆರ್​ಬಿಐ ನಿರ್ಬಂಧಿಸಿರುವ ಕ್ರಮದಿಂದ ಪೇಟಿಎಂ ಸೇವೆ ನಿಲ್ಲುವುದಿಲ್ಲ ಎಂದು ಸಿಇಒ ಹೇಳಿದ್ದಾರೆ. ಈ ಬೆಳವಣಿಗೆ ಪೇಟಿಎಂಗೆ ಸ್ಪೀಡ್ ಬಂಪ್ ಇದ್ದ ಹಾಗೆ. ಫೆ. 29 ಬಳಿಕವೂ ಪೇಟಿಎಂ ಕಾರ್ಯನಿರ್ವಹಿಸುತ್ತದೆ ಎಂದಿದ್ದಾರೆ ವಿಜಯ್ ಶೇಖರ್ ಶರ್ಮಾ. ಪೇಮೆಂಟ್ಸ್ ಬ್ಯಾಂಕ್ ಬಿಟ್ಟು ಈಗ ಬೇರೆ ಬ್ಯಾಂಕುಗಳೊಂದಿಗೆ ವ್ಯವಹರಿಸಬೇಕೆಂಬ ಸ್ಪಷ್ಟತೆ ಸಿಕ್ಕಿದೆ. ಅದರಂತೆ ಕೆಲಸ ಮಾಡುತ್ತೇವೆ ಎನ್ನುತ್ತಾರೆ.

ಫೆಬ್ರುವರಿ 29ರ ನಂತರವೂ ಪೇಟಿಎಂ ಚಾಲೂನಲ್ಲಿ ಇರುತ್ತದೆ ಎಂದು ಹೇಳಿರುವ ವಿಜಯ್ ಶೇಖರ್ ಶರ್ಮಾ, ನಿರಂತವಾಗಿ ಬೆಂಬಲಿಸುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿದ್ದಾರೆ.

ನಿಮ್ಮ ಫೇವರಿಟ್ ಆ್ಯಪ್ ಕಾರ್ಯವಹಿಸುತ್ತಿದೆ. ಫೆಬ್ರುವರಿ 29ರ ಬಳಿಕವೂ ಮಾಮೂಲಿಯಂತೆಯೇ ಕೆಲಸ ಮಾಡುತ್ತಿರುತ್ತದೆ. ನಿಮ್ಮ ನಿರಂತರ ಬೆಂಬಲಕ್ಕಾಗಿ ಪೇಟಿಎಂ ತಂಡದ ವತಿಯಿಂದ ನಾನು ನಿಮಗೆ ಧನ್ಯವಾದ ಹೇಳುತ್ತೇನೆ. ಪ್ರತಿಯೊಂದು ಸವಾಲಿನಲ್ಲೂ ಪರಿಹಾರ ಎಂಬುದು ಇರುತ್ತದೆ. ಪೂರ್ಣ ನಿಯಮಾನುಸಾರ ನಮ್ಮ ದೇಶಕ್ಕೆ ಸೇವೆ ಸಲ್ಲಿಸಲು ನಾವು ಬದ್ಧರಾಗಿದ್ದೇವೆ.

ಪೇಟಿಎಂಕರೋ ಚಾಂಪಿಯನ್ ಆಗಿರುವ ಪೇಮೆಂಟ್ ಕ್ರಿಯಾಶೀಲತೆಯಲ್ಲಿ ಮತ್ತು ಹಣಕಾಸು ಸೇವೆಗಳ ಒಳಗೊಳ್ಳುವಿಕೆಯಲ್ಲಿ ಭಾರತಕ್ಕೆ ಜಾಗತಿಕ ಪ್ರಶಂಸೆ ಮುಂದುವರಿಯುತ್ತದೆ’ ಎಂದು ಶರ್ಮಾ ಟ್ವೀಟ್ ಮಾಡಿದ್ದಾರೆ.

ಈ ದೇಶದ ವಿವಿಧ ಬ್ಯಾಂಕುಗಳು ನಮಗೆ ನೀಡಿರುವ ಬೆಂಬಲಕ್ಕೆ ಕೃತಜ್ಞರಾಗಿದ್ದೇವೆ. ಹೆಚ್ಚೆಚ್ಚು ಪ್ರಾದೇಶಿಕ ಮತ್ತು ದೊಡ್ಡ ಬ್ಯಾಂಕುಗಳು ಉನ್ನತ ಮಟ್ಟದಲ್ಲಿ ನಮ್ಮನ್ನು ಸಂಪರ್ಕಿಸಿ ಸಹಾಯ ಮಾಡಲು ಇಚ್ಛಿಸುತ್ತಿವೆ,’ ಎಂದು ಪೇಟಿಎಂ ಸಿಇಒ ವಿಜಯ್ ಶೇಖರ್ ಶರ್ಮಾ ತಿಳಿಸಿದ್ದಾರೆ.

‘ಒನ್97 ಕಮ್ಯೂನಿಕೇಶನ್ಸ್ ಸಂಸ್ಥೆ ವಿವಿಧ ಬ್ಯಾಂಕುಗಳೊಂದಿಗೆ ಸಹಭಾಗಿತ್ವದಲ್ಲಿ ತೊಡಗಿತ್ತು. ಅದರಲ್ಲಿ ಪೇಟಿಎಂ ಪೇಮೆಮಟ್ಸ್ ಬ್ಯಾಂಕ್ ಒಂದು ಮುಖ್ಯ ಭಾಗವಾಗಿತ್ತು. ಈಗಿನಿಂದ ಪೇಟಿಎಂ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕುಗಳೊಂದಿಗೆ ಕೆಲಸ ಮಾಡಬೇಕೆಂಬ ಸ್ಪಷ್ಟತೆ ಸಿಕ್ಕಿದೆ. ಒನ್​97 ಕಮ್ಯೂನಿಕೇಶನ್ಸ್ ಮತ್ತು ಪಿಪಿಎಸ್​ಎಲ್ ಎರಡೂ ಕೂಡ ತಮ್ಮ ನೋಡಲ್ ಅಕೌಂಟ್​​ಗಳನ್ನು ಬೇರೆ ಬ್ಯಾಂಕುಗಳಿಗೆ ವರ್ಗಾಯಿಸುವ ಪ್ರಕ್ರಿಯೆ ಶುರು ಮಾಡಿವೆ,’ ಎಂದೂ ಶರ್ಮಾ ಸ್ಪಷ್ಟಪಡಿಸಿದ್ದಾರೆ.

 

 

Previous Post

ತಮಿಳು ನಟ ‘ವಿಜಯ್’ನೂತನ ರಾಜಕೀಯ ಪಕ್ಷದ ಸ್ಥಾಪನೆ “ತಮಿಳ ವೆಟ್ರಿ ಕಳಗಂ’ ಎಂದು ನಾಮಕರಣ..!!

Next Post

ಕೈಗೆಟಕುವ ಬೆಲೆಯಲ್ಲಿ ಐವಿಎಫ್‌ ಚಿಕಿತ್ಸೆ : SAR [ಎಸ್‌ಎಆರ್‌] ಹೆಲ್ತ್‌ಲೈನ್‌ ಮತ್ತು ಮಾಹೆ ಜಂಟಿ ಪ್ರಯತ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೈಗೆಟಕುವ ಬೆಲೆಯಲ್ಲಿ ಐವಿಎಫ್‌ ಚಿಕಿತ್ಸೆ : SAR [ಎಸ್‌ಎಆರ್‌] ಹೆಲ್ತ್‌ಲೈನ್‌ ಮತ್ತು ಮಾಹೆ ಜಂಟಿ ಪ್ರಯತ್ನ..!!

ಕೈಗೆಟಕುವ ಬೆಲೆಯಲ್ಲಿ ಐವಿಎಫ್‌ ಚಿಕಿತ್ಸೆ : SAR [ಎಸ್‌ಎಆರ್‌] ಹೆಲ್ತ್‌ಲೈನ್‌ ಮತ್ತು ಮಾಹೆ ಜಂಟಿ ಪ್ರಯತ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025

Recent News

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved