Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ:ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ..!!

Dhrishya News by Dhrishya News
08/02/2024
in ರಾಜ್ಯ/ ರಾಷ್ಟ್ರೀಯ
0
0
SHARES
20
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 08:ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧಿಸಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಫೆಬ್ರವರಿ 07 ಅಧಿಕೃತ ಆದೇಶ ಹೊರಡಿಸಿದೆ.ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹುಕ್ಕಾ ಬಾರ್‌ಗಳ ಪರಿಣಾಮವನ್ನು ಅಧ್ಯಯನ ಮಾಡಿದ ಆರೋಗ್ಯ ತಜ್ಞರು ನಿಷೇಧಕ್ಕೆ ಶಿಫಾರಸು ಮಾಡಿದ್ದರು. ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ ಹುಕ್ಕಾ ಉತ್ಪನ್ನ ಹಾಗೂ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ COTPA 2003, 2015 ಕಾಯ್ದೆ ಅನ್ವಯ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹಿಂದಿನ ಸರ್ಕಾರಗಳು ಕ್ರಮಗಳನ್ನು ಕೈಗೊಂಡು ಕಾಲಕಾಲಕ್ಕೆ ಬದಲಾವಣೆಗಳನ್ನು ತರಲು ಪ್ರಯತ್ನಿಸಿದವು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲೂ ಹುಕ್ಕಾ ನಿಷೇಧ ಮತ್ತು ನಗರ ಪ್ರದೇಶಗಳಲ್ಲಿ ಧೂಮಪಾನ ನಿಷೇಧ ವಲಯಗಳನ್ನು ರಚಿಸುವ ಪ್ರಯತ್ನಗಳು ನಡೆದಿದ್ದವು. ಈ ಉಪಕ್ರಮಕ್ಕಾಗಿ ನಾವು ವಿಶ್ವಸಂಸ್ಥೆಯಿಂದ ಪ್ರಶಸ್ತಿಯನ್ನು ಸಹ ಪಡೆದಿದ್ದೇವೆ. ಇಂತಹ ಉತ್ಪನ್ನಗಳನ್ನು ನಿಷೇಧಿಸುವಲ್ಲಿ ಕರ್ನಾಟಕ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ದಿನೇಶ್ ಗುಂಡೂರಾವ್ ಇತ್ತೀಚೆಗೆ ಹೇಳಿದ್ದರು.

ಹುಕ್ಕಾ ಬಾರ್‌ಗಳು ಜನರ ಮೇಲೆ ವಿಶೇಷವಾಗಿ ಯುವಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ. 13 ವರ್ಷದಿಂದ 28-29 ರವರೆಗಿನ ಯುವಕರು ತಂಬಾಕು ಬಳಸುವ ಹುಕ್ಕಾಗೆ ಬಲಿಯಾಗುತ್ತಿದ್ದಾರೆ. ಈಗಿರುವ COPTA ಕ್ಕೆ ನಾವು ಕೆಲವು ತಿದ್ದುಪಡಿಗಳನ್ನು ಮಾಡಿದ್ದೇವೆ ಮತ್ತು ಸಾರ್ವಜನಿಕವಾಗಿ ಸಿಗರೇಟ್ ಮಾತ್ರವಲ್ಲದೆ ಇತರ ಎಲ್ಲಾ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಿದ್ದೇವೆ. ದಂಡದ ಮೊತ್ತ ಹೆಚ್ಚಿಸಲು ಮುಂದಾಗಿದ್ದೇವೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು

 

Previous Post

ಮಾರ್ಚ್ 9ರಂದು ರಾಜ್ಯಾದ್ಯಂತ ʻರಾಷ್ಟ್ರೀಯ ಲೋಕ್ ಅದಾಲತ್’..!!

Next Post

ಕಾರ್ಕಳ:ಪರಶುರಾಮ ಥೀಮ್ ಪಾರ್ಕ್ ತನಿಖೆಗೆ ಹೆಚ್ಚಿದ ಒತ್ತಡ:ತನಿಖೆ ಆರಂಭಿಸದೇ ಇದ್ದರೆ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರ ಎಚ್ಚರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ:ಪರಶುರಾಮ ಥೀಮ್ ಪಾರ್ಕ್ ತನಿಖೆಗೆ ಹೆಚ್ಚಿದ ಒತ್ತಡ:ತನಿಖೆ ಆರಂಭಿಸದೇ ಇದ್ದರೆ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರ ಎಚ್ಚರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved