Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಖಿಲ ಭಾರತ ಅಂತರ್‌ ವಲಯ ಅಂತರ್ ವಿಶ್ವವಿದ್ಯಾನಿಲಯ ಚೆಸ್‌ ಛಾಂಪಿಯನ್‌ ಶಿಪ್‌-2024 ಗೆದ್ದ ಎಸ್‌ಆರ್‌ಎಂ ಚೆನ್ನೈ..!!

Dhrishya News by Dhrishya News
19/02/2024
in ರಾಜ್ಯ/ ರಾಷ್ಟ್ರೀಯ
0
ಅಖಿಲ ಭಾರತ ಅಂತರ್‌ ವಲಯ ಅಂತರ್ ವಿಶ್ವವಿದ್ಯಾನಿಲಯ ಚೆಸ್‌ ಛಾಂಪಿಯನ್‌ ಶಿಪ್‌-2024 ಗೆದ್ದ ಎಸ್‌ಆರ್‌ಎಂ ಚೆನ್ನೈ..!!
0
SHARES
13
VIEWS
Share on FacebookShare on Twitter

ಮಣಿಪಾಲ ಫೆಬ್ರವರಿ 19, 2024 – ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ಆಶ್ರಯದಲ್ಲಿ ಜರಗಿದ ದ ಅಖಿಲ ಭಾರತ ಅಂತರ್‌ ವಲಯ ಅಂತರ್‌ ವಿಶ್ವವಿದ್ಯಾನಿಲಯ ಚೆಸ್‌ ಛಾಂಪಿಯನ್‌ಶಿಪ್‌ 2024 ಪಂದ್ಯವು ಇಂದು ಮುಕ್ತಾಯಗೊಂಡಿದ್ದು ಚೆನ್ನೈನ ಎಸ್‌ಆರ್‌ಎಂ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ & ಟೆಕ್ನಾಲಜಿ ತಂಡವು ಪ್ರಥಮಸ್ಥಾನ ಗಳಿಸಿ ವಿಜಯಶಾಲಿಯಾಗಿದೆ. ಎರಡನೆಯ ಸ್ಥಾನವನ್ನು ಚೆನ್ನೈಯ ಅಣ್ಣಾ ವಿಶ್ವವಿದ್ಯಾನಿಲಯ ಗೆದ್ದುಕೊಂಡಿದೆ. ಕೊಲ್ಕತಾದ ಅದ್ಮಾಸ್ ವಿಶ್ವವಿದ್ಯಾನಿಲಯವು ಮೂರನೆಯ ಸ್ಥಾನವನ್ನು ಪಡೆದುಕೊಂಡಿದೆ. 

ಫೆಬ್ರವರಿ 16 ರಿಂದ 18ರ ವರೆಗೆ ಮೂರು ದಿನಗಳ ಕಾಲ ಜರಗಿದ ಈ ಚೆಸ್‌ ಛಾಂಪಿಯನ್‌ಶಿಪ್‌ನಲ್ಲಿ ಭಾರತದಾದ್ಯಂತದ ವಿಶ್ವವಿದ್ಯಾನಿಲಯಗಳ ಸುಮಾರು 100 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು ಮತ್ತು ಇವರಲ್ಲಿ ಆರು ಮಂದಿ ಅಂತಾರಾಷ್ಟ್ರೀಯ ಮಾಸ್ಟರ್‌ಗಳು ಮತ್ತು ನಾಲ್ಕು ಮಂದಿ ಗ್ರ್ಯಾಂಡ್‌ಮಾಸ್ಟರ್‌ಗಳಿದ್ದರು. ಈ ಒಟ್ಟೂ ಚೆಸ್‌ಸ್ಪರ್ಧೆಯು ಚದುರಂಗದ ಆಟಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳಲ್ಲಿರುವ ಆಳವಾದ ಬೌದ್ಧಿಕ ಜ್ಞಾನ ಮತ್ತು ವ್ಯೂಹಾತ್ಮಟ ತಂತ್ರಗಾರಿಕೆಯ ಕೌಶಲವನ್ನು ಸಂಕೀರ್ಣತೆಯನ್ನು ಅನಾವರಣಗೊಳಿಸಿತು. ಚೆಸ್‌ ಆಟದ ರಾಷ್ಟ್ರೀಯ ಮಟ್ಟದ ಸ್ಫರ್ಧೆಗೆ ಆಶ್ರಯ ನೀಡಿ ಸಮರ್ಥವಾಗಿ ಆಯೋಜಿಸಿದ ಮಾಹೆಯ ಆತಿಥ್ಯವನ್ನು ಕ್ರೀಡಾಳುಗಳು ಶ್ಲಾಘಿಸಿದರು.  

ಈ ಚಾಂಪಿಯನ್‌ಶಿಪ್ ವಿವಿಧ ವಿಶ್ವವಿದ್ಯಾನಿಲಯಗಳ ಯುವ ಮನಸ್ಸುಗಳಿಗೆ ಬೌದ್ಧಿಕ ಸ್ಪರ್ಧೆಯಲ್ಲಿ ತೊಡಗಿಸಿಕೊಳ್ಳಲು ವೇದಿಕೆಯಾಗಿ ಕಾರ್ಯನಿರ್ವಹಿಸಿತು, ಚೆಸ್ ಆಟದ ಮೂಲಕ ಅವರ ಶೈಕ್ಷಣಿಕ ಮತ್ತು ಜೀವನ ಕೌಶಲ್ಯವನ್ನು ಹೆಚ್ಚಿಸಿತು. ಎಸ್ ಆರ್ ಎಂ ಚೆನ್ನೈ, ಅಣ್ಣಾ ವಿಶ್ವವಿದ್ಯಾನಿಲಯ ಚೆನ್ನೈ, ಮತ್ತು ಅದ್ಮಾಸ್ ವಿಶ್ವವಿದ್ಯಾನಿಲಯದಿಂದ ಭಾಗವಹಿಸುವವರ ಸಾಧನೆಗಳು ಈ ಸಂಸ್ಥೆಗಳಲ್ಲಿ ಉನ್ನತ ಮಟ್ಟದ ಚೆಸ್ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಎತ್ತಿ ತೋರಿಸುತ್ತವೆ.

ಸ್ಪರ್ಧೆಯ ಸಮಾರೋಪದಲ್ಲಿ ಸ್ಪರ್ಧಾ ಆಯೋಜನ ಸಮಿತಿಯು ಸಹಭಾಗಿತ್ವವನ್ನು ನೀಡಿದ ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘಟನೆಯ ಜೊತೆಗೆ ಭಾಗಿಗಳಿಗೆ, ಪ್ರೋತ್ಸಾಹಕರಿಗೆ, ವೀಕ್ಷಕರಿಗೆ ಕೃತಜ್ಞತೆಗಳನ್ನು ಸಮರ್ಪಿಸಿತು. ಶೈಕ್ಷಣಿಕ ಮಟ್ಟದ ಕ್ರೀಡೆಯಾಗಿರುವ ಚೆಸ್‌ನ ಮುಂದಿನ ಅಖಿಲ ಭಾರತ ಅಂತರ್‌ ವಲಯ ಅಂತರ್‌ ವಿಶ್ವವಿದ್ಯಾನಿಲಯ ಛಾಂಪಿಯನ್‌ಶಿಪ್‌ನ ಆಯೋಜನೆಯ ಬಗ್ಗೆಯೂ ಪೂರ್ವಭಾವಿ ಪ್ರಸ್ತಾವನೆಯನ್ನು ಇದೇ ಸಂದರ್ಭದಲ್ಲಿ ಮುಂದಿಡಲಾಯಿತು. 

Previous Post

ಖ್ಯಾತ ಕಾದಂಬರಿಕಾರ,ಹಿರಿಯ ಸಾಹಿತಿ ಕೆ.ಟಿ.ಗಟ್ಟಿ ನಿಧನ..!!

Next Post

ಯುಗಾದಿ’ ನಂತರ ರಾಜ್ಯದಲ್ಲಿ ಒಳ್ಳೆ ಮಳೆ, ಬೆಳೆ ಜೊತೆಗೆ ಧಾರ್ಮಿಕ ಮುಖಂಡನ ಸಾವಾಗಲಿದೆ : ಕೋಡಿ ಶ್ರೀ ಭವಿಷ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯುಗಾದಿ’ ನಂತರ ರಾಜ್ಯದಲ್ಲಿ ಒಳ್ಳೆ ಮಳೆ, ಬೆಳೆ ಜೊತೆಗೆ ಧಾರ್ಮಿಕ ಮುಖಂಡನ ಸಾವಾಗಲಿದೆ : ಕೋಡಿ ಶ್ರೀ ಭವಿಷ್ಯ..!!

ಯುಗಾದಿ' ನಂತರ ರಾಜ್ಯದಲ್ಲಿ ಒಳ್ಳೆ ಮಳೆ, ಬೆಳೆ ಜೊತೆಗೆ ಧಾರ್ಮಿಕ ಮುಖಂಡನ ಸಾವಾಗಲಿದೆ : ಕೋಡಿ ಶ್ರೀ ಭವಿಷ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved