Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮನೋಹರ ಪ್ರಸಾದ್ ಮಾನವೀಯ ಸ್ಪಂದನೆಯ ಚತುರ್ಮುಖ ಪ್ರತಿಭೆ – ರಾಜೇಂದ್ರ ಭಟ್ ಕೆ..!!

Dhrishya News by Dhrishya News
07/03/2024
in ಕರಾವಳಿ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಕಾರ್ಕಳ :ಮಾರ್ಚ್ 07:ಮನೋಹರ ಪ್ರಸಾದ್ ಅವರು ಮಾನವೀಯ ಸ್ಪಂದನೆಯ ಚತುರ್ಮುಖ ಪ್ರತಿಭೆ ಆಗಿದ್ದರು. ಅವರು ಸಾಹಿತ್ಯ, ಭಾಷಣ, ಬರವಣಿಗೆ ಮತ್ತು ಪತ್ರಿಕಾರಂಗ ಈ ನಾಲ್ಕೂ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದು ತನ್ನ ಮಾನವೀಯ ಸ್ಪಂದನೆಯ ಮೂಲಕ. ಅವರೊಬ್ಬ ಅಭಿಜಾತ ಪ್ರತಿಭೆ. ಇಂದು ಸ್ಪರ್ಧಾತ್ಮಕವಾಗಿರುವ ಪತ್ರಿಕಾರಂಗದಲ್ಲಿ ಕೂಡ ಅವರಿಗೆ ಶತ್ರುಗಳು ಇರಲಿಲ್ಲ. ಅವರು ಯಾವ ಇಸಂಗೂ ಶರಣಾಗಲೇ ಇಲ್ಲ. ಅದರಿಂದ ಅವರು ಲೆಜೆಂಡ್ ಆದರು ಎಂದು ವಿಕಸನ ತರಬೇತುದಾರ ರಾಜೇಂದ್ರ ಭಟ್ ಕೆ ಅವರು ಹೇಳಿದರು. 

ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಹೋಟೆಲ್ ಪ್ರಕಾಶದ ಸಂಭ್ರಮ ಸಭಾಂಗಣದಲ್ಲಿ ನಡೆದ ಪತ್ರಕರ್ತ, ಸಾಹಿತಿ, ವಾಗ್ಮಿ ಮನೋಹರ್ ಪ್ರಸಾದ್ ಅವರ ಸಾರ್ವಜನಿಕ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಸಂಸ್ಮರಣ ಭಾಷಣವನ್ನು ಮಾಡುತ್ತಿದ್ದರು. ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತಾಡಿ ಕಾರ್ಕಳ ತಾಲೂಕಿನ 17ನೆಯ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿ ಮೆರೆದ ಮನೋಹರ ಪ್ರಸಾದ್ ಅವರ ಅಗಾಧವಾದ ವ್ಯಕ್ತಿತ್ವಕ್ಕೆ ನಾವೆಲ್ಲರೂ ತಲೆಬಾಗಿದ್ದೇವೆ ಎಂದರು. 

ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಸ್ಥಾಪಕರಲ್ಲಿ ಓರ್ವರಾದ ಅಶ್ವತ್ ಅವರು ದೀಪ ಬೆಳಗಿಸಿ ಈ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಅವರು ಮಾತಾಡಿ ಮನೋಹರ್ ಪ್ರಸಾದ್ ಅವರು ಏರಿದ ಎತ್ತರವು ಅಸಾಮಾನ್ಯ ಆದದ್ದು. ಅದರ ಹಿಂದೆ ಅವರ ಅಪಾರ ಪರಿಶ್ರಮ ಇದೆ ಎಂದು ಹೇಳಿದರು.  

ಕವಿ ಮತ್ತು ಅಂಕಣಕಾರರಾದ ಜ್ಯೋತಿ ಗುರುಪ್ರಸಾದ್ ಅವರು ಮನೋಹರ್ ಪ್ರಸಾದ್ ಅವರ ಸೃಜನಶೀಲ ಸಾಹಿತ್ಯ ಸೇವೆಯ ಬಗ್ಗೆ ಮಾತಾಡಿದರು. ಎಸ್ ವಿ ಟಿ ಪದವಿ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರಾದ ಮಿತ್ರಪ್ರಭಾ ಹೆಗ್ಡೆ, ಕಾರ್ಕಳ ತಾಲೂಕಿನ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಶಿಕ್ಷಕಿ ಶೈಲಜಾ ಹೆಗ್ಡೆ, ಮನೋಹರ್ ಪ್ರಸಾದ್ ಅವರ ನಿಕಟ ಒಡನಾಡಿ ಮಾಧವ ಸುವರ್ಣ, ಸಂಬಂಧಿಕರಾದ ಲಕ್ಷ್ಮೀಕಾಂತ್ ರಾವ್, ಹರಿಶ್ಚಂದ್ರ ರಾವ್ ಮೊದಲಾದವರು ಮಾತಾಡಿ ನುಡಿ ನಮನ ಸಲ್ಲಿಸಿದರು. ಅಗಲಿದ ಆತ್ಮಕ್ಕೆ ಕಾರ್ಯಕ್ರಮದಲ್ಲಿ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. 

ಧಾರಿಣಿ ಉಪಾಧ್ಯಾಯ ಪ್ರಾರ್ಥನೆ ಸಲ್ಲಿಸಿದರು. ಸಾಹಿತ್ಯ ಪರಿಷದ್ ತಾಲೂಕು ಕಾರ್ಯದರ್ಶಿ ದೇವದಾಸ್ ಕೆರೆಮನೆ ಸ್ವಾಗತ ಮಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಮೊಹಮದ್ ಷರೀಫ್ ಅವರು ಧನ್ಯವಾದ ನೀಡಿದರು. ಶಿಕ್ಷಕ ಗಣೇಶ್ ಜಾಲ್ಸೂರು ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ಮನೋಹರ ಪ್ರಸಾದ್ ಅವರ ಅಪಾರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಷ್ಪಾರ್ಚನೆ ಮಾಡಿದರು.

Previous Post

ಕೇರಳ : ಶಾಲೆಯ ಕ್ಲಾಸ್‌ ರೂಂಗೂ ಲಗ್ಗೆಯಿಟ್ಟಿತು AI ರೋಬೊಟ್ ಟೀಚರ್‌..!!

Next Post

ಗ್ರಹಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ 100ರೂಪಾಯಿ ಇಳಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗ್ರಹಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ 100ರೂಪಾಯಿ ಇಳಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026

Recent News

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved