Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕರ್ನಾಟಕದಲ್ಲಿ ಕಲರ್ ಮಿಶ್ರಿತ ಗೋಬಿ,ಬಾಂಬೆ ಮಿಠಾಯಿ ಬ್ಯಾನ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶ..!!

Dhrishya News by Dhrishya News
11/03/2024
in ಮುಖಪುಟ, ಸುದ್ದಿಗಳು
0
0
SHARES
49
VIEWS
Share on FacebookShare on Twitter

ಬೆಂಗಳೂರು :ಮಾರ್ಚ್ 11: ಇನ್ಮುಂದೆ ರಾಜ್ಯದಲ್ಲಿ ಕಲರ್ ಮಿಶ್ರಿತ ಗೋಬಿ, ಕಾಟನ್ ಕ್ಯಾಂಡಿಯನ್ನು ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮಗಳ ಪರಿಗಣಿಸಿದ ಆರೋಗ್ಯ ಇಲಾಖೆ ರಾಸಾಯನಿಕಯುಕ್ತ ಕಲರ್ ಬಳಸಿ ಮಾಡುವ ಗೋಬಿ, ಬಾಂಬೆ ಮಿಠಾಯಿ ಎಂದು ಕರೆಯುವ ಕಾಟನ್ ಕ್ಯಾಂಡಿ ಮಾರಾಟ ಬ್ಯಾನ್ ಮಾಡಿದೆ.

ಕರ್ನಾಟಕದಲ್ಲಿಯೂ ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ) ಮಾರಾಟವನ್ನು ರಾಜ್ಯ ಸರ್ಕಾರದಿಂದ ಬ್ಯಾನ್ ಮಾಡಲಾಗಿದೆ. ಆದರೆ, ವೈಟ್ ಕ್ಯಾಂಡಿ ಮಾರಾಟಕ್ಕೆ ಅವಕಾಶವಿದೆ. ಇನ್ನು ಗೋಬಿ ಮಂಚೂರಿ ನಿಷೇಧ ಮಾಡದಿದ್ದರೂ, ಕೃತಕ ಬಣ್ಣ ಮಿಶ್ರಣ ನಿಷೇಧಿಸಲಾಗಿದೆ. ಒಂದು ವೇಳೆ ಸರ್ಕಾರದ ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಗೋಬಿ ಮಂಚೂರಿಯನ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ, ಸಂಜೆಯಾದರೆ ಸಾಕು ಬೀದಿ ಬದಿಯ ಎಲ್ಲಾ ಗಾಡಿಗಳು ಫುಲ್ ರಷ್ ಆಗಿರುತ್ತವೆ. 20 ರೂಪಾಯಿ ಗೋಬಿಯಿಂದ ಸಾವಿರ ರೂಪಾಯಿ ವರೆಗಿನ ಗೋಬಿ ಸಹ ಈ ಗ ಮಾರುಕಟ್ಟೆಯಲ್ಲಿ ಸಿಗುತ್ತಿದೆ. ಆದ್ರೆ ಇತ್ತೀಚಿಗೆ ಆರೋಗ್ಯದ ಮೇಲೆ ಈ ಗೋಬಿ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂಬ ವರದಿಯೊಂದು ಹೊರಬಿದ್ದಿತ್ತು. ಹೀಗಾಗಿ ಗೋವಾದಲ್ಲಿ ಗೋಬಿ ಮಾರಾಟ ನಿಷೇಧ ಮಾಡಲಾಗಿತ್ತು. ಇದೀಗ ರಾಜ್ಯದಲ್ಲೂ ಕಲರ್ ಮಿಶ್ರಿತ ಗೋಬಿ, ಕಾಟನ್ ಕ್ಯಾಂಡಿಯನ್ನು ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮಗಳ ಪರಿಗಣಿಸಿದ ಆರೋಗ್ಯ ಇಲಾಖೆ ರಾಸಾಯನಿಕಯುಕ್ತ ಕಲರ್ ಬಳಸಿ ಮಾಡುವ ಗೋಬಿ, ಬಾಂಬೆ ಮಿಠಾಯಿ ಎಂದು ಕರೆಯುವ ಕಾಟನ್ ಕ್ಯಾಂಡಿ ಮಾರಾಟ ಬ್ಯಾನ್ ಮಾಡಿದೆ. ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕಾಟನ್ ಕ್ಯಾಂಡಿ ಮಾಡಲು ಬಳಸು ರಾಸಾಯನಿಕವು ಆರೋಗ್ಯ ಸಮ್ಯಸ್ಯೆಗೆ ಕಾರಣವಾಗಿದೆ. ಹೀಗಾಗಿ ಅದನ್ನು ಬ್ಯಾನ್ ಮಾಡಲಾಗಿದೆ. ಇನ್ನು ಗೋಬಿ ತಯಾರಿಸಲು ಬಳಸು ಕಲರ್‌ನಿಂದಲೂ ಅನಾರೋಗ್ಯಕ್ಕೆ ಒಳಗಾಗುತ್ತೇವೆ, ಹೀಗಾಗಿ ರಾಸಾಯನಿಕ ಕಲರ್ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಕಾಟನ್ ಕ್ಯಾಂಡಿಯನ್ನೂ ಬಣ್ಣ ಬಳಸದೆ ತಯಾರಿಸಿ ಮಾರಾಟ ಮಾಡಬಹುದು ಎಂದಿದ್ದಾರೆ.

ರಾಜ್ಯದಲ್ಲಿ ಒಟ್ಟು 171 ರೀತಿಯ ಗೋಬಿಯ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು, ಇದನ್ನು ಪರೀಕ್ಷೆಗೊಳಪಡಿಸಿದಾಗ 107ರಲ್ಲಿ ಕೃತಕ ಬಣ್ಣ ಹಾಗೂ ಅನಾರೋಗ್ಯ ಉಂಟುಮಾಡಲು ಬೇಕಾದ ರಾಸಾಯನಿಕ ಪತ್ತೆಯಾಗಿದೆ. ಇದರಲ್ಲಿ ಟಾರ್ ಟ್ರಸೈನ್, ಸನ್ಸೆಟ್ ಎಲ್ಲೋ, ಕಾರ್ಮಿಸನ್ ರಾಸಾಯನಿಕ ಬಳಸುತ್ತಿರುವುದು ಕಂಡು ಬಂದಿದೆ ಎಂದು ಸಚಿವರು ತಿಳಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ಗೋಬಿ ತಯಾರಿಕೆಗೆ ಕೃತಕ ಬಣ್ಣ ಬಳಸುವಂತಿಲ್ಲ, ಇಂದು ವೇಳೆ ಬಣ್ಣ ಬಳಸಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದರೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದಲ್ಲದೆ 25 ವಿಧದ ಕಾಟನ್ ​ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. 15 ಮಾದರಿಗಳಲ್ಲಿ ಕೃತಕ ಬಣ್ಣ ಬಳಸಿರುವುದು ಕಂಡುಬಂದಿದೆ. 10ರಲ್ಲಿ ಕೃತಕ ಬಣ್ಣ ಬಳಸಿಲ್ಲ. ಕೃತಕ ಬಣ್ಣ ಬಳಕೆ ಮಾಡಿ ಕ್ಯಾಂಡಿ ತಯಾರು ಮಾಡಬಹುದು. ಆದರೆ ರೊಡಮೈನ್ ಬಿ, ಟಾರ್ಟ್ರಾಜಿನ್​ನಂತಹ ಯಾವುದೇ ಬಣ್ಣ ಬಳಸಬಾರದು. ಇದು ಆರೋಗ್ಯಕ್ಕೆ ಹಾನಿಕಾರಕ. ಈ ರೊಡಮೈನ್ ಬಿ ಬಳಸಿದ್ದು ಕಂಡು ಬಂದರೆ ಜೈಲು ಶಿಕ್ಷೆ ಜೊತೆಗೆ 10 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದಿದ್ದಾರೆ.

ಗೋಬಿ ರುಚಿಯಾಗಬೇಕೆಂದರೆ ಸಾಸ್‌ ಪಾತ್ರ ಪ್ರಮುಖವಾದದ್ದು, ಚಿಲ್ಲಿ ಸಾಸ್, ಸೋಯ ಸಾಸ್‌, ಟೊಮೆಟೊ ಸಾಸ್ ಹಾಕಿ ಮಾಡುವ ಈ ಗೋಬಿಯನ್ನು ಬಾಯಿಗಿಟ್ಟರೆ ಅದರೆ ರುಚಿಗೆ ಕರಗಿ ಹೋಗುತ್ತೇವೆ, ಆದರೆ ಆ ರುಚಿ ನಮ್ಮ ಆರೋಗ್ಯವನ್ನೂ ಕರಗಿಸುತ್ತದೆ ಎಂಬ ಆಘಾತಕಾರಿ ಅಂಶ ತಿಳಿದು ಬಂದಿದೆ. ಗೋಬಿ ಮಾಡಲು ತುಂಬಾ ವ್ಯಾಪಾರಿಗಳು ತುಂಬಾನೇ ಕಳಪೆ ಗುಣಮಟ್ಡದ ಸಾಸ್‌ಗಳನ್ನೂ ಬಳಸುತ್ತಿದ್ದಾರೆ.

ಈ ರೊಡ್‌ಮೈನ್ ಬಿ ಎಂಬ ರಾಸಾಯನಿಕವು ಕ್ಯಾನ್ಸರ್ ಕಾರಕವಾಗಿದ್ದು, ಇದರ ನಿರಂತರ ಸೇವನೆಯು ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ವೈದ್ಯಕೀಯ ಪರೀಕ್ಷೆಗಳು ದೃಢಪಡಿಸಿವೆ. ಹೀಗಾಗಿ ಇದನ್ನು ಬಳಸಿ ಮಾಡಲಾಗುವ ಕಾಟನ್ ಕ್ಯಾಂಡಿ ಈಗ ದೇಶದ ಹಲವು ರಾಜ್ಯಗಳಲ್ಲಿ ನಿಷೇಧ ಮಾಡಲಾಗಿದೆ. ಇಂದು ರಾಜ್ಯದಲ್ಲೂ ನಿಷೇಧಗೊಂಡಿದೆ.

Previous Post

ಉಡುಪಿಯಲ್ಲಿ ಮಾರ್ಚ್ 13 ರಂದು ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ…!!

Next Post

ಮಂಗಳೂರು: ವೃದ್ದ ಮಾವನಿಗೆ ವಾಕಿಂಗ್ ಸ್ಟಿಕ್ ನಿಂದ  ಅಮಾನವೀಯವಾಗಿ ಥಳಿಸಿ ಹಲ್ಲೆ ನಡೆಸಿದ ಸೊಸೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು: ವೃದ್ದ ಮಾವನಿಗೆ ವಾಕಿಂಗ್ ಸ್ಟಿಕ್ ನಿಂದ  ಅಮಾನವೀಯವಾಗಿ ಥಳಿಸಿ ಹಲ್ಲೆ ನಡೆಸಿದ ಸೊಸೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved