Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಭಾರೀ ಮಳೆ, ಬಿರುಗಾಳಿಯಿಂದ ತತ್ತರಿಸಿದ ದುಬೈ : 28 ಭಾರತೀಯ ವಿಮಾನಗಳ ಹಾರಾಟ ಸ್ಥಗಿತ..!!

Dhrishya News by Dhrishya News
17/04/2024
in ಕರಾವಳಿ, ಸುದ್ದಿಗಳು
0
ಭಾರೀ ಮಳೆ, ಬಿರುಗಾಳಿಯಿಂದ ತತ್ತರಿಸಿದ ದುಬೈ : 28 ಭಾರತೀಯ ವಿಮಾನಗಳ ಹಾರಾಟ ಸ್ಥಗಿತ..!!
0
SHARES
36
VIEWS
Share on FacebookShare on Twitter

ಏಪ್ರಿಲ್ 17:ದುಬೈ(Dubai)ನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆಯಾಗುತ್ತಿದ್ದು ವಿಮಾನ ನಿಲ್ದಾಣ ಜಲಾವೃತಗೊಂಡಿದೆ. ಹತ್ತಾರು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡವು ಮತ್ತು ದುಬೈನಾದ್ಯಂತ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ. ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಹಲವು ವಿಮಾನಗಳು ರದ್ದಾಗಿದ್ದು, ಹಲವು ವಿಮಾನಗಳು ವಿಳಂಬಗೊಂಡಿದ್ದವು.

ಯುಎಇಯಾದ್ಯಂತ ವ್ಯಾಪಕ ಪ್ರವಾಹದಿಂದಾಗಿ ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವು ಭಾರಿ ಮಳೆ ಮತ್ತು ಚಂಡಮಾರುತದಿಂದ ನಿಷ್ಕ್ರಿಯಗೊಂಡಿರುವುದರಿಂದ ದುಬೈಗೆ ಹೋಗುವ 15 ಮತ್ತು ಭಾರತಕ್ಕೆ ಹೋಗುವ 13 ಸೇರಿದಂತೆ 28 ಭಾರತೀಯ ವಿಮಾನಗಳನ್ನ ರದ್ದುಪಡಿಸಲಾಗಿದೆ.

ವರದಿಯ ಪ್ರಕಾರ, ಇಂದು ಹೆಚ್ಚಿನ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆಯ ಮಧ್ಯೆ 500ಕ್ಕೂ ಹೆಚ್ಚು ವಿಮಾನಗಳನ್ನ ಬೇರೆಡೆಗೆ ತಿರುಗಿಸಲಾಗಿದೆ ಅಥವಾ ರದ್ದುಪಡಿಸಲಾಗಿದೆ, ಭಾರತೀಯ ವಾಯುಯಾನ ಅಧಿಕಾರಿಗಳು ದುಬೈಗೆ ಹೋಗುವ ಸುಮಾರು 15 ವಿಮಾನಗಳನ್ನ ಮತ್ತು ಭಾರತಕ್ಕೆ 13 ವಿಮಾನಗಳನ್ನ ರದ್ದುಗೊಳಿಸಿದ್ದಾರೆ.

ಭಾರೀ ಮಳೆಯಿಂದಾಗಿ, ಯುಎಇ ಆಡಳಿತವು ಮಂಗಳವಾರ ಜನರನ್ನು ತಮ್ಮ ಮನೆಗಳಲ್ಲಿ ಇರುವಂತೆ ವಿನಂತಿಸಿದೆ. ಶಾಲೆಗಳು ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸುತ್ತಿದ್ದವು. ಸರ್ಕಾರಿ ನೌಕರರಿಗೂ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಹೆದ್ದಾರಿಗಳು ಮತ್ತು ರಸ್ತೆಗಳಿಂದ ನೀರನ್ನು ತೆಗೆದುಹಾಕಲು ಆಡಳಿತವು ಬೃಹತ್ ಪಂಪ್‌ಗಳನ್ನು ಅಳವಡಿಸಬೇಕಾಗಿತ್ತು.

ರಾಷ್ಟ್ರೀಯ ಹವಾಮಾನ ಕೇಂದ್ರವು ದುಬೈ, ಅಬುಧಾಬಿ, ಶಾರ್ಜಾ ಮತ್ತು ಇತರ ಕೆಲವು ಎಮಿರೇಟ್‌ಗಳ ನಿವಾಸಿಗಳಿಗೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮತ್ತು ಆಲಿಕಲ್ಲು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಯುಎಇಯ ನೆರೆಯ ದೇಶಗಳಾದ ಬಹ್ರೇನ್, ಕತಾರ್ ಮತ್ತು ಸೌದಿ ಅರೇಬಿಯಾದಲ್ಲೂ ಭಾರೀ ಮಳೆಯಾಗಿದೆ.

ಒಮಾನ್‌ನಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ 18 ಜನರು ಸಾವನ್ನಪ್ಪಿದ್ದಾರೆ. ಇವರಲ್ಲಿ 10 ಶಾಲಾ ಮಕ್ಕಳ ವಾಹನ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಬಹ್ರೇನ್‌ನ ರಾಜಧಾನಿ ಮನಾಮದಲ್ಲಿ ಬೀದಿಗಳು ಜಲಾವೃತಗೊಂಡಿವೆ. ಬುಧವಾರ ಕುವೈತ್, ಸೌದಿ ಅರೇಬಿಯಾ ಮತ್ತು ಒಮಾನ್‌ನಲ್ಲಿ ಚಂಡಮಾರುತದ ಸಾಧ್ಯತೆ ಇದೆ.

Previous Post

ಬ್ರಹ್ಮಾವರ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಅಜ್ಜಿ ನಿಧನ ..!!

Next Post

ಕಾರ್ಕಳ : ನಗರ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ರೀನಾ ಜ್ಯೂಲಿಯೇಟ್ ಡಿಸೋಜ ಆಯ್ಕೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ : ನಗರ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ರೀನಾ ಜ್ಯೂಲಿಯೇಟ್ ಡಿಸೋಜ ಆಯ್ಕೆ.!!

ಕಾರ್ಕಳ : ನಗರ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ರೀನಾ ಜ್ಯೂಲಿಯೇಟ್ ಡಿಸೋಜ ಆಯ್ಕೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025

Recent News

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved