Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯ ಮಣಿಪಾಲದ ಕಾಲೇಜ್ ಆಫ್ ನರ್ಸಿಂಗ್ ಮತ್ತು ಸ್ಕೂಲ್ ಆಫ್‌ ನರ್ಸಿಂಗ್‌, ವತಿಯಿಂದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ..!!

Dhrishya News by Dhrishya News
11/05/2024
in ಸುದ್ದಿಗಳು
0
ಮಾಹೆಯ ಮಣಿಪಾಲದ ಕಾಲೇಜ್ ಆಫ್ ನರ್ಸಿಂಗ್ ಮತ್ತು ಸ್ಕೂಲ್ ಆಫ್‌ ನರ್ಸಿಂಗ್‌, ವತಿಯಿಂದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ..!!
0
SHARES
28
VIEWS
Share on FacebookShare on Twitter

ಮಣಿಪಾಲ, ಮೇ 11, 2024 : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ಮಣಿಪಾಲ್‌ ಕಾಲೇಜ್‌ ಆಫ್‌ ನರ್ಸಿಂಗ್‌ ಮತ್ತು ಮಣಿಪಾಲ್‌ ಸ್ಕೂಲ್‌ ಆಫ್‌ ನರ್ಸಿಂಗ್‌ ಸಂಸ್ಥೆಗಳು ಅಂತರಾಷ್ಟ್ರೀಯ ದಾದಿಯರ ದಿನ-2024 ನ್ನು ವಿವಿಧ ಚಟುವಟಿಕೆಗಳೊಂದಿಗೆ ಇತ್ತೀಚೆಗೆ ಆಚರಿಸಿದವು. ಇದು ಫ್ಲೋರೆನ್ಸ್‌ ನೈಟಿಂಗೇಲ್‌ ಅವರ ಜನ್ಮದಿನವೂ ಆಗಿದ್ದು 2024ರ ಅಂತಾರಾಷ್ಟ್ರೀಯ ದಾದಿಯರ ಮಂಡಳಿ [ಇಂಟರ್‌ನೇಶನಲ್‌ ಕೌನ್ಸಿಲ್‌ ಆಫ್‌ ನರ್ಸಸ್‌ ಫಾರ್‌ 2024] ಯು ಈ ಸಲದ ಘೋಷ ವಾಕ್ಯ ‘ನಮ್ಮ ದಾದಿಯರು, ನಮ್ಮ ಭವಿಷ್ಯ; ಆರೈಕೆಯ ಆರ್ಥಿಕ ಶಕ್ತಿ”ಸಭಾಕಾರ್ಯಕ್ರಮವು ಮಣಿಪಾಲ ಕೆಎಂಸಿಯ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಮೇ 10. 2024 ರಂದು ಜರಗಿದ್ದು ಮಣಿಪಾಲ್‌ ಕಾಲೇಜ್‌ ಆಫ್‌ ನರ್ಸಿಂಗ್‌ನ ಡೀನ್‌ ಡಾ. ಜುಡಿತ್‌ ಎ. ನೊರೊನ್ಹ ಅವರು ಸ್ವಾಗತಿಸಿದರು.

ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯ ಸಂಯೋಜಕಿ ರಂಜನಿ ಪಿ. ಅವರು ಅಂತಾರಾಷ್ಟ್ರೀಯ ದಾದಿಯರ ದಿನದ ಚಟುವಟಿಕೆಗಳ ಕುರಿತ ಸಮಗ್ರ ವರದಿಯನ್ನು ಪ್ರಸ್ತುತಪಡಿಸಿದರು. ಈ ಚಟುವಟಿಕೆಗಳು ಕವಿತೆ ರಚನೆ, ಭಾಷಣ ಸ್ಪರ್ಧೆ, ಕೊಲಾಜ್‌ ಮತ್ತು ಭಿತ್ತಿಚಿತ್ರ ಸ್ಪರ್ಧೆಗಳನ್ನು ಒಳಗೊಂಡಿದ್ದು ಕಾರ್ಯಾಗಾರಗಳನ್ನು ಕೂಡ ಹಮ್ಮಿಕೊಳ್ಳಲಾಗಿತ್ತು..

ಮಣಿಪಾಲ್‌ ಕಾಲೇಜ್‌ ಆಫ್‌ ನರ್ಸಿಂಗ್‌ನ ಎಸೋಸಿಯೇಟ್‌ ಡೀನ್‌ ಡಾ. ಟೆಸ್ಸಿ ಟ್ರೀಸಾ ಜೋಸ್‌ ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಾಹೆಯ ಮಣಿಪಾಲದ ಬೋಧಕ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್‌ ವೇಣುಗೋಪಾಲ್‌ ಅವರು, ರೋಗಿಗಳ ಆರೈಕೆಯಲ್ಲಿ ದಾದಿಯರು ವಹಿಸುವ ಮೌಲಿಕ ಸೇವೆ ಮತ್ತು ಅವರು ರೋಗಿಗಳೊಂದಿಗೆ ಕಳೆಯುವ ಮಹತ್ತ್ವದ ಸಮಯದ ಕುರಿತು ಮಾತನಾಡಿದರು. ಮಣಿಪಾಲ್‌ ಕಾಲೇಜ್‌ ಆಫ್‌ ನರ್ಸಿಂಗ್‌ ಶಿಸ್ತು ಮತ್ತು ಅತ್ಯುತ್ತಮ ತರಬೇತಿಯ ಬದ್ಧತೆಯನ್ನು ಹೊಂದಿದೆ. ಕಸ್ತೂರ್ಬಾ ಆಸ್ಪತ್ರೆಯು ಅತ್ಯುತ್ತಮವಾದ ಬಹುಶಿಸ್ತೀಯ ಕಲಿಕಾ ವಾತಾವರಣವನ್ನು ಒದಗಿಸುತ್ತಿದೆ ಎಂದು ಶ್ಲಾಘಿಸಿದರು. ದಾದಿಯರಿಗೆ ಆವಶ್ಯಕವಾದ ಸೌಕರ್ಯ ಮತ್ತು ಸಂಪನ್ಮೂಲಗಳು ಲಭ್ಯವಾಗುವ ಅಗತ್ಯತೆಯನ್ನು ಒತ್ತಿಹೇಳಿದರು

ಕಸ್ತೂರ್ಬಾ ಆಸ್ಪತ್ರೆಯ ನಿವೃತ್ತ ಸ್ಟಾಫ್‌ ನರ್ಸ್‌ ವಿವಿಯನ್‌ ವಿಲ್‌ಫ್ರೆಡ್‌ ಸೋನ್ಸ್‌ ಮತ್ತು ಕಡೆಕಾರಿನ ಗ್ರಾಮೀಣ ಹೆರಿಗೆ ಮತ್ತು ಶಿಶುಪಾಲನಾ ಕೇಂದ್ರದ ನಿವೃತ್ತ ಎನ್‌ಎನ್‌ಎಂ ಸಿಬ್ಬಂದಿ ಸಾಕಮ್ಮ ಅವರನ್ನು ರೋಗಿಗಳ ಕ್ಷೇಮಪಾಲನೆ, ಸಾಮುದಾಯಿಕ ಆರೋಗ್ಯ ಕ್ಷೇತ್ರದ ಕೊಡುಗೆ ಮತ್ತು ವಿದ್ಯಾರ್ಥಿ ಕಲಿಕೆಗೆ ನೀಡಿದ ಪ್ರೋತ್ಸಾಹಕ್ಕಾಗಿ ಸನ್ಮಾನಿಸಲಾಯಿತು.

ಮಣಿಪಾಲ್‌ ಸ್ಕೂಲ್‌ ಆಫ್‌ ನರ್ಸಿಂಗ್‌ನ ಪ್ರಿನ್ಸಿಪಾಲ್‌ ಡಾ. ಲೀನಾ ಸೀಕ್ವೆರಾ ಅವರು ಸನ್ಮಾನಿತರ ಸಾಧನೆಯ ಕುರಿತು ಮಾತನಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಸಹಸಂಯೋಜಕರಾದ ಡಾ. ಸವಿತಾ ಪ್ರಭು ಧನ್ಯವಾದ ಸಮರ್ಪಣೆ ಮಾಡಿದರು

ಮಂಗಳೂರಿನ ಫಾದರ್‌ ಮುಲ್ಲರ್ಸ್‌ ಕಾಲೇಜ್‌ ಆಫ್‌ ನರ್ಸಿಂಗ್‌ನ ಸಾಮುದಾಯಿಕ ಆರೋಗ್ಯ ಆರೈಕೆ ವಿಭಾಗದ ಪ್ರಾಧ್ಯಾಪಕರಾದ ಡಾ. ದೆವಿನಾ ಇ. ರೊಡ್ರಿಗಸ್‌ ಆವರು ‘”ನಮ್ಮ ದಾದಿಯರು. ನಮ್ಮ ಭವಿಷ್ಯ. ಆರೈಕೆಯ ಆರ್ಥಿಕ ಶಕ್ತಿ “ಎಂಬ ವಿಷಯದ ಕುರಿತು ಪರಿಣಾಮಕಾರಿಯಾದ ಕಲಾಪವನ್ನು ನಡೆಸಿಕೊಟ್ಟರು. ಅವರು ಆರೋಗ್ಯಪಾಲನೆಯ ಕ್ಷೇತ್ರದಲ್ಲಿ ದಾದಿಯರ ಪಾತ್ರವನ್ನು ಮತ್ತೊಮ್ಮೆ ಸಮರ್ಪಕವಾಗಿ ಪರಿಗಣಿಸುವ ಅಗತ್ಯವಿದೆ ಎಂದರು. ದಾದಿಯರ ಶಿಕ್ಷಣ, ತರಬೇತಿ, ಉದ್ಯೋಗ ಇತ್ಯಾದಿಗಳ ಹಲವು ವಿಷಯಗಳ ಕುರಿತು ಅವರು ಬೆಳಕು ಚೆಲ್ಲಿದರು. ದಾದಿಯರ ಸ್ಪರ್ಶದ ಹಿಂದೆ ಇರುವ ಅಮಿತವಾದ ಶ್ರದ್ಧೆ, ಅವಿಚ್ಚಿನ್ನವಾದ ಸಮರ್ಪಣಾಭಾವ, ರೋಗಿಗಳ ಅಗತ್ಯಕ್ಕೆ ಎಲ್ಲ ಸಂದರ್ಭದಲ್ಲಿ ಸ್ಪಂದಿಸುವ ಮನೋಭಾವವನ್ನು ಅರ್ಥಮಾಡಿಕೊಳ್ಳುವ ಆವಶ್ಯಕತೆಯನ್ನು ಒತ್ತಿ ಹೇಳಿದರು.

ದಾದಿಯರ ಸೇವೆಯ ಪ್ರಾಮುಖ್ಯದ ಕುರಿತ ಒಂದು ವಿಡಿಯೋ ಮತ್ತು ಸಂವಾದದೊಂದಿಗೆ ಈ ಕಲಾಪವು ಮುಕ್ತಾಯಗೊಂಡಿತು.

 ಮಾಹೆಯ ಕಾಲೇಜ್‌ ಆಫ್‌ ನರ್ಸಿಂಗ್‌ ಮ್ತು ಮಣಿಪಾಲ್‌ ಕಾಲೇಜ್ ಸ್ಕೂಲ್‌ ಆಫ್‌ ನರ್ಸಿಂಗ್‌ನ ವಿದ್ಯಾರ್ಥಿಗಳು ಮತ್ತು ಬೋಧಕರಿಂದ ಸಾಂಸ್ಕೃತಿಕ ವಿವಿಧ ವಿನೋದಾವಳಿಗಳು ನಡೆದವು. ಪ್ರಸ್ತುತ ಕಾರ್ಯಕ್ರಮವು ಸುಸ್ಥಿರ ಅಭಿವೃದ್ಧಿಯ ಗುರಿ [ಸಸ್ಟೇನೇಬಲ್‌ ಡೆವಲಪ್‌ಮೆಂಟ್‌ ಗೋಲ್‌-4 ಗೆ ಹೊಂದಿಕೆಯಾಗುತ್ತಿದ್ದು ಎಲ್ಲರನ್ನು ಒಳಗೊಳ್ಳುವ ಮತ್ತು ಸಮಾನವಾಗಿರುವ ಗುಣಮಟ್ಟದ ಶಿಕ್ಷಣ ನೀಡಲು ಬದ್ಧವಾಗಿದೆ.

Previous Post

ಕೇರಳದ ದೇವಸ್ಥಾನ ಗಳಲ್ಲಿ ಇನ್ಮುಂದೆ ಕಣಗಲೆ ಹೂವು ಬಳಕೆಗೆ ನಿಷೇಧ..!!

Next Post

ಇಂದು ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದು ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved