Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ವೆಲ್‌ಕಮ್‌ಗ್ರೂಪ್‌ ಗ್ರಾಜ್ಯುಯೇಟ್‌ ಸ್ಕೂಲ್‌ ಆಫ್‌ ಹೊಟೇಲ್‌ ಎಡ್ಮಿನಿಸ್ಟ್ರೇಶನ್‌ [ವಾಗ್ಷ]ದಿಂದ ಕೌಶಲ ತರಬೇತಿಯ ಕೇಂದ್ರ ಆರಂಭ..!!

Dhrishya News by Dhrishya News
17/05/2024
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಮಣಿಪಾಲ,:ಮೇ 16: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ವೆಲ್‌ಕಮ್‌ಗ್ರೂಪ್‌ ಗ್ರಾಜ್ಯುಯೇಟ್‌ ಸ್ಕೂಲ್‌ ಆಫ್‌ ಹೊಟೇಲ್‌ ಎಡ್ಮಿನಿಸ್ಟ್ರೇಶನ್‌ [ಡಬ್ಲ್ಯುಜಿಎಸ್‌ಎಚ್‌ಎ ಅಥವಾ ವಾಗ್ಷ] ಸಂಸ್ಥೆಯು ಕೌಶಲ ತರಬೇತಿಯ ಉತ್ಕೃಷ್ಟ ಕೇಂದ್ರ [ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಫಾರ್‌ ಸ್ಕಿಲ್‌ ಟ್ರೈನಿಂಗ್‌] ವನ್ನು ಆರಂಭಿಸಿದ್ದು ಇದರ ಉದ್ಘಾಟನೆಯು ಮೇ 15, 2024 ರಂದು ನಡೆಯಿತು. ಅತಿಥಿ ಗಣ್ಯರು ಉದ್ಘಾಟನ ಸಮಾರಂಭದಲ್ಲಿ ಭಾಗವಹಿಸಿದ್ದು, ಈ ಕಾರ್ಯಕ್ರಮದಲ್ಲಿ ಆತಿಥೇಯ ಉದ್ಯಮದಲ್ಲಿ ಕೌಶಲಾಭಿವೃದ್ಧಿಯ ಪ್ರಾಮುಖ್ಯವು ಗಮನಸೆಳೆಯಿತು. 

ಪ್ರವಾಸೋದ್ಯಮ ಮತ್ತು ಆತಿಥೇಯ ಉದ್ಯಮದ ಕೌಶಲ ಮಂಡಳಿ [ಟೂರಿಸಂ ಆ್ಯಂಡ್‌ ಹಾಸ್ಪಿಟಾಲಿಟಿ ಸ್ಕಿಲ್‌ ಕೌನ್ಸಿಲ್‌ ಅಥವಾ ಟಿಎಚ್‌ಎಸ್‌ಸಿ] ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜನ್‌ ಬಹದೂರ್‌ ಅವರು ಕೇಂದ್ರವನ್ನು ಉದ್ಘಾಟಿಸುತ್ತ ಮಾತನಾಡಿ, ‘ ಆತಿಥೇಯ ಸಂಸ್ಕೃತಿಯ ಭವಿಷ್ಯವನ್ನು ರೂಪಿಸುವಲ್ಲಿ ವಾಗ್‌ಶದಂಥ ಸಂಸ್ಥೆಗಳ ಪಾತ್ರವನ್ನು ಒತ್ತಿಹೇಳಿದರು. ವಾಗ್ಷದ ಕೊಡುಗೆಗಳನ್ನು ಶ್ಲಾಘಿಸಿದರಲ್ಲದೆ, ಅಂಥ ಸಂಸ್ಥೆಯೊಂದಿಗೆ ತಾವು ಸಹಭಾಗಿತ್ವವನ್ನು ಹೊಂದಿರುವುದಕ್ಕಾಗಿ ಹೆಮ್ಮೆಯನ್ನು ವ್ಯಕ್ತಪಡಿಸಿದರು. ಪ್ರವಾಸೋದ್ಯಮ ಮತ್ತು ಆತಿಥೇಯ ಕೌಶಲ ಮಂಡಳಿ [ಟೂರಿಸಂ ಆ್ಯಂಡ್‌ ಹಾಸ್ಪಿಟಾಲಿಟಿ ಸ್ಕಿಲ್‌ ಕೌನ್ಸಿಲ್‌-ಟಿಎಚ್‌ಎಸ್‌ಸಿ], ರಾಷ್ಟ್ರೀಯ ಕೌಶಲಾಭಿವೃದ್ಧಿ ನಿಗಮ [ನೇಶನಲ್‌ ಸ್ಕಿಲ್‌ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌-ಎನ್‌ಎಸ್‌ಡಿಸಿ] ಮತ್ತು ವಾಗ್ಷದ ನಡುವಿನ ಸಹಭಾಗಿತ್ವವು ಆತಿಥೇಯ ವಲಯದಲ್ಲಿ ಕೌಶಲದ ಗುಣಮಟ್ಟವನ್ನು ವೃದ್ಧಿಸಲಿದೆ ಎಂದರು.   

ತಮ್ಮ ಮಾತನ್ನು ಮುಂದುವರಿಸುತ್ತ, ‘ನಾವಿಂದು ಆತಿಥೇಯ ಉದ್ಯಮದ ನಿರ್ಣಾಯಕ ಸಂಧಿಕಾಲದಲ್ಲಿ ಇದ್ದೇವೆ. ಈ ಕ್ಷೇತ್ರದಲ್ಲಿ ಕೌಶಲಪೂರ್ಣ ವೃತ್ತಿಪರರ ಅಗತ್ಯ ಹೆಚ್ಚುತ್ತಿದೆ. ಈ ಬೇಡಿಕೆಯನ್ನು ಪೂರೈಸುವಲ್ಲಿ ವಾಗ್ಷದಂಥ ಸಂಸ್ಥೆಯು ಗುಣಮಟ್ಟದ ಶಿಕ್ಷಣ ಮತ್ತು ಪ್ರಾಯೋಗಿತ ತರಬೇತಿಯನ್ನು ನೀಡುವುದರ ಮೂಲಕ ಪ್ರಧಾನ ಪಾತ್ರ ವಹಿಸುತ್ತಿದೆ. ವಾಗ್ಷದೊಂದಿಗೆ ಸಹಭಾಗಿತ್ವವನ್ನು ಹೊಂದಿರಲು ಮತ್ತು ಸೆಂಟರ್‌ ಆಫ್ ಎಕ್ಸಲೆನ್ಸ್‌ ಎಂದು ಮಾನ್ಯ ಮಾಡಲು ಅಭಿಮಾನ ಎನಿಸುತ್ತಿದೆ. ಈ ಯೋಜನೆಯ ಗುರಿ ಕೇವಲ ವೃತ್ತಿಪರರ ಕೌಶಲ ಅಭಿವೃದ್ದಿ ಪಡಿಸುವುದು ಅಲ್ಲ, ಆತಿಥೇಯ ಉದ್ಯಮದಲ್ಲಿ ಅಭಿವೃದ್ಧಿ ಮತ್ತು ನಾವೀನ್ಯವನ್ನು ಪ್ರೋತ್ಸಾಹಿಸಿ, ಉದ್ಯೋಗವಕಾಶಗಳನ್ನು ಹೆಚ್ಚಿಸುವುದು ಕೂಡ ಆಗಿದೆ. ಟಿಎಚ್‌ಎಸ್‌ಸಿ ಮತ್ತು ಎನ್‌ಎಸ್‌ಡಿಸಿ ಸಂಸ್ಥೆಗಳ ಬೆಂಬಲದೊಂದಿಗೆ ವಾಗ್ಷವು ಶಿಕ್ಷಣ ಮತ್ತು ತರಬೇತಿಯಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಲಿದೆ’ ಎಂದರು.  

ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ಯ ಸಹ-ಕುಲಾಧಿಪತಿಗಳಾದ ಡಾ. ಎಚ್‌. ಎಸ್‌. ಬಲ್ಲಾಳ್‌ ಅವರು ಮಣಿಪಾಲ ಸಂಸ್ಥೆಗಳ ಸಂಸ್ಥಾಪಕ ಕೀರ್ತಿಶೇಷ ಡಾ. ಟಿ. ಎಂ. ಎ. ಪೈಯವರು 1950 ರಲ್ಲಿಯೇ ಹುಟ್ಟು ಹಾಕಿದ ಕೌಶಲಾಭಿವೃದ್ಧಿಯ ಪರಂಪರೆಯನ್ನು ನೆನಪಿಸಿಕೊಂಡರು. ಟಿಎಚ್‌ಎಸ್‌ಸಿ ಮತ್ತು ಎನ್‌ಎಸ್‌ಡಿಸಿ ಸಂಸ್ಥೆಗಳು ವಾಗ್ಷವನ್ನು ಸೆಂಟರ್‌ ಆಫ್ ಎಕ್ಸಲೆನ್ಸ್‌ ಎಂದು ಮಾನ್ಯತೆ ಮಾಡಿರುವುದಕ್ಕೆ ಕೃತಜ್ಞತೆ ಹೇಳಿದರಲ್ಲದೆ, ವ್ಯಕ್ತಿ ಸಬಲೀಕರಣ ಮತ್ತು ಕ್ಷೇಮಾಭಿವೃದ್ಧಿಯಲ್ಲಿ ಈ ಸಂಸ್ಥೆಗಳು ವಹಿಸುತ್ತಿರುವ ಪಾತ್ರದ ಕುರಿತು ಗಮನ ಸೆಳೆದರು. 

ವಾಗ್ಷದ ಪ್ರಾಂಶುಪಾಲರಾದ ಚೆಫ್‌. ಕೆ. ತಿರುಗ್ನಾನಸಂಬಂಧಂ ಅವರು ಮಾತನಾಡುತ್ತ, ‘ಟಿಎಚ್‌ಎಸ್‌ಸಿ ಮತ್ತು ಎನ್‌ಎಸ್‌ಡಿಎಸ್‌ನಿಂದ ವಾಗ್ಷಕ್ಕೆ ಮಾನ್ಯತೆ ದೊರೆತಿರುವುದು ಮಹತ್ತ್ವದ ಹೆಜ್ಜೆಯಾಗಿದೆ. ಇಂಥ ಮಾನ್ಯತೆಯಿಂದ ಕರ್ನಾಟಕದ ಆತಿಥೇಯ ವಲಯದಲ್ಲಿ ಯುವಕರಿಗೆ ಹೊಸ ಉದ್ಯೋಗವಕಾಶಗಳನ್ನು ಸೃಷ್ಡಿಸುವ ಸಾಧ್ಯತೆಗಳಿವೆ’ ಎಂದರು.  

ಸೆಂಟರ್‌ ಫಾರ್‌ ಎಕ್ಸಲೆನ್ಸ್‌ನಲ್ಲಿ ಆರು ತಿಂಗಳು ಬೋಧನೆ ಮತ್ತು ಪ್ರಾಯೋಗಿಕ ತರಗತಿಗಳು ಮತ್ತು ಉಳಿದ ಆರು ತಿಂಗಳಿನಲ್ಲಿ ಉದ್ಯೋಗ-ಪೂರ್ವ ಶಿಕ್ಷಣ [ಇಂಟರ್ನ್‌ಶಿಪ್‌] ದ ಮೂಲಕ ಅನುಭವ ಪಡೆಯಲು ಅವಕಾಶವಿದೆ. ಇಂಟರ್ನ್‌ಶಿಪ್‌ನ ಅವಧಿಯಲ್ಲಿ ವಿದ್ಯಾರ್ಥಿಗಳು ಹೊಟೇಲ್‌ ನಿರ್ವಹಣೆಯ ನೇರ ಅನುಭವವನ್ನು ಪಡೆಯಲಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಆತಿಥೇಯ ಶಿಕ್ಷಣದಲ್ಲಿ ಪ್ರಾವೀಣ್ಯವನ್ನು ಪಡೆದ ದ್ಯೋತಕವಾಗಿ ಟಿಎಚ್‌ಎಸ್‌ಸಿ ಮತ್ತು ಡಬ್ಲ್ಯುಜಿಎಸ್‌ಎಚ್‌ಎ [ವಾಗ್ಷ] ದಿಂದ ಜಂಟಿಯಾಗಿ ಪ್ರಮಾಣ ಪತ್ರವನ್ನು ಪಡೆಯಲಿದ್ದಾರೆ.  

ಈ ಕೌಶಲ ಕೇಂದ್ರದ ಉದ್ಘಾಟನೆಯು ಭಾರತದ ಪ್ರವಾಸೋದ್ಯಮದಲ್ಲಿ ಕೌಶಲಪೂರ್ಣ ವೃತ್ತಿಪರರ ಬೇಡಿಕೆ ಅಧಿಕವಾಗುತ್ತಿರುವ ಸಂದರ್ಭದಲ್ಲಿಯೇ ನಡೆದಿರುವುದು ಗಮನಾರ್ಹವಾಗಿದೆ. ಈ ಯೋಜನೆಯು 2033 ರಲ್ಲಿ 19.4 ಮಿಲಿಯನ್‌ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿವೆ ಮತ್ತು 8.4 % ಸಂಯುಕ್ತ ವಾರ್ಷಿಕ ಅಭಿವೃದ್ಧಿ ದರ [ಕಂಪೌಂಡ್‌ ಆ್ಯನುವಲ್‌ ಗ್ರೋತ್‌ ರೇಟ್‌-ಸಿಎಜಿಆರ್‌] ಹೊಂದಿರುವ ಗುರಿಯನ್ನು ಹೊಂದಿದೆ. ಆತಿಥೇಯ ಉದ್ಯಮದಲ್ಲಿ ಇರುವ ಕೌಶಲದ ಕೊರತೆಯನ್ನು ಪ್ರಸ್ತುತ ವಾಗ್ಷ ಮತ್ತು ಇತರ ಸಂಸ್ಥೆಗಳು ಕೈಗೊಂಡ ಉಪಕ್ರಮ[ಇನಿಶಿಯೇಟಿವ್‌] ವು ನಿವಾರಿಸಲಿದೆ. 

ವಾಗ್ಷದಲ್ಲಿ ಆರಂಭವಾಗಿರುವ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಫಾರ್‌ ಸ್ಕಿಲ್‌ ಟ್ರೈನಿಂಗ್‌ ಆತಿಥೇಯ ಉದ್ಯಮದ ಮಹತ್ವಾಕಾಂಕ್ಷಿ ವೃತ್ತಿಪರರಿಗೆ ಭರವಸೆಯ ಬೆಳಕಾಗಲಿದೆ ಮತ್ತು ಈ ವಲಯದಲ್ಲಿ ಉದ್ಯೋಗ ಸಾಧ್ಯತೆಯ ಹೊಸ ಹಾದಿಯನ್ನು ತೆರೆಯಲಿದೆ. 

Previous Post

ಉಡುಪಿ : ಬಾಲ ಕೃಷ್ಣನ ಮುಂದೆ ಪುಟ್ಟ ಕಲಾವಿದೆಯ ಕಲಾಸಿರಿಯ ಅನಾವರಣ..!!

Next Post

ಮಾಹೆ ಮಣಿಪಾಲದ ಹವಾನಿಯಂತ್ರಣ ವಿಭಾಗವು ಮಕ್ಕಳ ಕ್ಯಾನ್ಸರ್ ರೋಗಿಗಳಿಗೆ ನಿಧಿಯನ್ನು ಸಂಗ್ರಹಿಸಲು ಯಶಸ್ವಿ ಸ್ಪಂದನ ಟ್ರೋಫಿ 2024 ಆಯೋಜನೆ : 6 ಲಕ್ಷ ರೂಪಾಯಿಗಳ ಸಂಗ್ರಹ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ ಮಣಿಪಾಲದ ಹವಾನಿಯಂತ್ರಣ ವಿಭಾಗವು ಮಕ್ಕಳ ಕ್ಯಾನ್ಸರ್ ರೋಗಿಗಳಿಗೆ ನಿಧಿಯನ್ನು ಸಂಗ್ರಹಿಸಲು ಯಶಸ್ವಿ ಸ್ಪಂದನ ಟ್ರೋಫಿ 2024 ಆಯೋಜನೆ : 6 ಲಕ್ಷ ರೂಪಾಯಿಗಳ ಸಂಗ್ರಹ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026

Recent News

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved