Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಲೂರು: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವತಿಯಿಂದ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆ..!!

Dhrishya News by Dhrishya News
18/05/2024
in ಸುದ್ದಿಗಳು
0
ಬೈಲೂರು: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವತಿಯಿಂದ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆ..!!
0
SHARES
6
VIEWS
Share on FacebookShare on Twitter

ಕಾರ್ಕಳ:ಮೇ 18:ನಕಲಿ ಪರಶುರಾಮನ ಪ್ರತಿಮೆ ಸ್ಥಾಪಿಸಿ ತುಳುನಾಡಿನ ಸೃಷ್ಟಿಕರ್ತ ಪರಶುರಾಮ ಹಾಗೂ ಹಿಂದೂ ಧಾರ್ಮಿಕ ಭಾವನೆಗಳಿಗೆ ಕಾರ್ಕಳ ಶಾಸಕರು ಅವಮಾನ ಮಾಡಿದ್ದಾರೆ. ಪ್ರತಿಮೆ ನೈಜತೆ ಕುರಿತು ಬೈಲೂರಿನ ಮಾರಿಗುಡಿ ಎದುರು ಪ್ರಮಾಣ ಮಾಡಲು ಸಿದ್ಧರಿದ್ದೀರಾ ಎಂದು ನ್ಯಾಯವಾದಿ ಸುಧೀರ್ ಮರೋಳಿ ಸುನಿಲ್ ಕುಮಾರ್ ಅವರಿಗೆ ಸವಾಲೆಸೆದರು. 

ಅವರು ಮೇ 18 ರಂದು ಶನಿವಾರ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವತಿಯಿಂದ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆಯನ್ನುದ್ದೇಶಿಸಿ ಮಾತನಾಡಿ, ಕಾರ್ಕಳ ಶಾಸಕರು ಕಾರ್ಕಳದ ಜನರನ್ನು ವಂಚಿಸಿದ ರೀತಿಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ವಂಚಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ತಪ್ಪಿತಸ್ಥರಲ್ಲ ಅದರೆ ಅವರು ತಪ್ಪಿತಸ್ಥರ ಗುಂಪಿನಲ್ಲಿದ್ದಾರೆ ಎಂದು ಸುಧೀರ್ ಮರೋಳಿ ಹೇಳಿದರು.ಪರಶುರಾಮ ಥೀಮ್ ಪಾರ್ಕ್ ಯೋಜನೆಗೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ಎನ್ನುವ ಶಾಸಕರೇ ನಿಮ್ಮದೇ ಸರ್ಕಾರದ ಅವಧಿಯಲ್ಲಿ ಅನುದಾನ ಮಂಜೂರುಗೊಳಿಸಿ ಕಾಮಗಾರಿ ಪೂರ್ಣಗೊಳಿಸಿ ಮುಖ್ಯಮಂತ್ರಿಯವರಿಂದ ಉದ್ಘಾಟನೆ ಮಾಡಿಸಿದ್ದಿರಲ್ಲವೇ? ಈಗ ಈ ಯೋಜನೆಗೆ ಕಾಂಗ್ರೆಸ್ ಅಡ್ಡಗಾಲು ಹಾಕಿದೆ ಎನ್ನುವ ಸುಳ್ಳು ಆರೋಪ ಯಾಕೆ ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಪರಶುರಾಮ ಥೀಮ್ ಪಾರ್ಕಿಗೆ ಭೂಮಿ ಮಂಜೂರಾತಿ ಕುರಿತು ಸಚಿವರು ಸಲ್ಲಿಸಿದ ಪ್ರಸ್ತಾವನೆ ಅವರದೇ ಸರ್ಕಾರದಿಂದ ತಿರಸ್ಕಾರವಾದರೂ ಕಾನೂನು ಉಲ್ಲಂಘಿಸಿ ನಕಲಿ ಪರಶುರಾಮನ ಪ್ರತಿಮೆ ನಿರ್ಮಿಸಿ ಪರಶುರಾಮನಿಗೆ ದ್ರೋಹ ಮಾಡಿದ್ದೀರಿ ಎಂದು ವಾಗ್ದಾಳಿ ನಡೆಸಿದರು. ಇದಲ್ಲದೇ ಈ ಯೋಜನೆಗೆ ಭೂಮಿ ಮಂಜೂರಾತಿ ಸಾಧ್ಯವಿಲ್ಲ ಎನ್ನುವ ಸರ್ಕಾರದ ಆದೇಶದ ವಿರುದ್ಧ ಸಕ್ಷಮ ಪ್ರಾಧಿಕಾರ ಅಥವಾ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಬೇಕಿತ್ತು. ಇದನ್ನೂ ಮಾಡದೇ ಈಗ ಕಾಂಗ್ರೆಸ್ ಮೇಲೆ ಆರೋಪ ಹೊರಿಸುವ ನಿಮಗೆ ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ ಪರಶುರಾಮ ಥೀಮ್ ಪಾರ್ಕ್ ಬೇಕಿತ್ತೇ ಹೊರತಾಗಿ ಬೇರೆ ಯಾವ ಉದ್ದೇಶವೂ ಇರಲಿಲ್ಲ ಎಂದು ಮರೋಳಿ ಆರೋಪಿಸಿದರು.

 ಅವರಿಗೆ ನೈತಿಕತೆ ಇದ್ದರೆ ಜನ್ಮ ನೀಡಿದ ತಂದೆ ತಾಯಿ ಪಾದಮುಟ್ಟಿ ಈ ಪ್ರತಿಮೆ ಕಂಚಿನದ್ದು ಎಂದು ಹೇಳಲು ಸಿದ್ದರೇ ಎಂದು ಸವಾಲು ಎಸೆದರು. ಪ್ರತಿಮೆ ವಿಚಾರ ಸದನದಲ್ಲಿ ಚರ್ಚೆಯಾದಾಗ ಬಿಜೆಪಿಯ ಯಾವ ಶಾಸಕರು ಕೂಡ ಸುನಿಲ್ ಕುಮಾರ್ ಪರವಾಗಿ ಯಾಕೆ ನಿಂತಿಲ್ಲ ಎನ್ನುವುದು ಸ್ಪಷ್ಟವಾಗಿದೆ‌. ದುರಂಹಕಾರಿ ಶಾಸಕರು ಧಾರ್ಮಿಕ ಭಾವನೆಗಳನ್ನು ದುರುಪಯೋಗಪಡಿಸಿಕೊಂಡು ಶಂಖ,ಜಾಗಟೆ, ತಾಳಗಳ ಸಹಿತ ಭಜನೆಗಳನ್ನು ಅಪಹಾಸ್ಯ ಮಾಡಿರುವವರಿಗೆ ಕ್ಷಮೆಯಿಲ್ಲ ಎಂದರು.

ಪ್ರತಿಮೆಯ ನೈಜತೆ ಪರಿಶೀಲನೆಗೆ ಪ್ರತಿಮೆಗೆ ಸುತ್ತಿಗೆಯಲ್ಲಿ ಹೊಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕತೆಗೆ ಸುತ್ತಿಗೆಯಿಂದ ಹೊಡೆದಂತಾಗಿದೆ ಮಾತ್ರವಲ್ಲದೇ ಸುತ್ತಿಗೆಯಿಂದ ಹೊಡೆದವರು ಸಂಸ್ಕೃತಿ ಭಂಜಕರು ಹಾಗೂ ಧರ್ಮದ್ರೋಹಿಗಳು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮಾತನಾಡಿ,ಪರಶುರಾಮ ಥೀಮ್ ಪಾರ್ಕ್ ಮೋಜುಮಸ್ತಿಯ ತಾಣವಾಗಬಾರದು ಅದು ಧಾರ್ಮಿಕ ಶ್ರದ್ಧಾಕೇಂದ್ರವಾಗಬೇಕು. ಬೈಲೂರಿನ ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಮಾಡಿದ ಧರ್ಮ ದ್ರೋಹದ ಕಾರ್ಯ ಪಕ್ಷದ ಮುಖಂಡರಿಗೂ ಗೊತ್ತಾಗಬೇಕು.ಕೇವಲ ಅಭಿವೃದ್ಧಿ ಚಟುವಟಿಕೆಗಳು ನಡೆದರೆ ಸಾಲದು ಇದರ ಜತೆಗೆ ಜನರ ಬದುಕು ಕಟ್ಟುವ ಕೆಲಸವಾಗಬೇಕು. ಶಾಸಕರು ಕಾರ್ಕಳದಲ್ಲಿ ಜಾತಿಯ ವಿಷಬೀಜ‌ ಬಿತ್ತಿ ರಾಜಕಾರಣದ ಪರಂಪರೆಯ ಆರಂಭಿಸಿದವರು ಜಾತಿಗಳ ನಡುವೆ ದ್ವೇಷ ಹರಡಿಸಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಕೇವಲ ಚುನಾವಣಾ ವಿಷಯವಾಗಬಾರದು ಬದಲಾಗಿ ನಮಸ್ತ ತುಳುನಾಡಿನ ಹೆಮ್ಮೆಯಾಗಬೇಕು ಎಂದರು.

Previous Post

ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ..!!

Next Post

ಕಾರ್ಕಳ :ಚಾಲಕನ ನಿಯಂತ್ರಣ ತಪ್ಪಿ ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ :ಇಬ್ಬರು ಕಾರ್ಮಿಕರು ಮೃತ್ಯು.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ಚಾಲಕನ ನಿಯಂತ್ರಣ ತಪ್ಪಿ ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ :ಇಬ್ಬರು ಕಾರ್ಮಿಕರು ಮೃತ್ಯು.!!

ಕಾರ್ಕಳ :ಚಾಲಕನ ನಿಯಂತ್ರಣ ತಪ್ಪಿ ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ :ಇಬ್ಬರು ಕಾರ್ಮಿಕರು ಮೃತ್ಯು.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

27/07/2025
ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

26/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

26/07/2025

Recent News

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

27/07/2025
ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

26/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

26/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved