Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ :ಕೆಎಂಸಿ ವೈದ್ಯಕೀಯ ತಳಿಶಾಸ್ತ್ರ ವಿಭಾಗದಿಂದ ಯಶಸ್ವಿ ಸಂವಾದಾತ್ಮಕ “ಓಪನ್ ಡೇ” ಕಾರ್ಯಕ್ರಮ..!!

Dhrishya News by Dhrishya News
27/05/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಮಣಿಪಾಲ, 27 ಮೇ 2024: – ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮತ್ತು ಆಸ್ಪತ್ರೆಯ ವೈದ್ಯಕೀಯ ತಳಿಶಾಸ್ತ್ರ (ಮೆಡಿಕಲ್ ಜೆನೆಟಿಕ್ಸ್ ) ವಿಭಾಗದಿಂದ ತಳಿಶಾಸ್ತ್ರವನ್ನು ವಿಸ್ತ್ರತವಾಗಿ ಪರಿಚಯಿಸುವ ಉದ್ದೇಶದಿಂದ ಯಶಸ್ವಿ ಅರ್ಧ ದಿನದ ಓಪನ್ ಡೇ ಕಾರ್ಯಕ್ರಮವನ್ನು ಆಯೋಜಿಸಿತ್ತು . ಕಾರ್ಯಕ್ರಮದಲ್ಲಿ ಎಲ್ಲಾ ವಯಸ್ಸಿನವರು ಪಾಲ್ಗೊಂಡು ಕಲಿಕಾ ಸಂವಾದ ನಡೆಸಿದರು . ಭಾಗವಹಿಸಿದವರಿಗೆ ವಿವಿಧ ಸಂವಾದಾತ್ಮಕ ಆಟಗಳು ಮತ್ತು ರಸಪ್ರಶ್ನೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಹೆ ಮಣಿಪಾಲದ ಸಹ ಕುಲಪತಿ (ಆರೋಗ್ಯ ವಿಜ್ಞಾನಗಳು) ಡಾ. ಶರತ್ ಕೆ ರಾವ್ ಅವರು, ಹೊಸ ತಂತ್ರಜ್ಞಾನಗಳು ಮತ್ತು ಸಂಶೋಧನೆಯಿಂದ ವೈದ್ಯಕೀಯ ಕ್ಷೇತ್ರದಲ್ಲಿ ತ್ವರಿತ ಪ್ರಗತಿ ಕಾಣುತ್ತಿದೆ . ಮೂಲ ವಿಜ್ಞಾನ, ಸಂಶೋಧನೆ ಮತ್ತು ವೈದ್ಯಕೀಯ ಸೇವೆಗಳನ್ನು ಸಂಪರ್ಕಿಸುವ ಸೇತುವೆಯಾಗಿ ತಳಿಶಾಸ್ತ್ರ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದರು.

ಉದ್ಘಾಟನಾ ಕಾರ್ಯಕ್ರಮದ ಮೊದಲು ಹೈದರಾಬಾದ್‌ನ ಡಿಎನ್‌ಎ ಫಿಂಗರ್‌ಪ್ರಿಂಟಿಂಗ್ ಮತ್ತು ಡಯಾಗ್ನೋಸ್ಟಿಕ್ಸ್ ಸೆಂಟರ್‌ನಲ್ಲಿ ಡಯಾಗ್ನೋಸ್ಟಿಕ್ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿನ್ ದಲಾಲ್ ಅವರು “ಎ ಟಿ ಜಿ ಎಸ್ : ಕ್ರ್ಯಾಕಿಂಗ್ ದಿ ಜೆನೆಟಿಕ್ ಕೋಡ್ ಆಫ್ ಹ್ಯೂಮನ್ ಜೀನೋಮ್” ಎಂಬ ವಿಷಯದಲ್ಲಿ ಭಾಷಣ ಮಾಡಿದರು. ನಂತರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಾ. ದಲಾಲ್ ಅವರು ಮಾನವ ಜೀನೋಮ್‌ನ ಜಟಿಲತೆಗಳು ಮತ್ತು ಜೆನೆಟಿಕ್ ಸಂಶೋಧನೆಯಲ್ಲಿನ ಪ್ರಗತಿಗಳ ಬಗ್ಗೆ ಬೆಳಕು ಚೆಲ್ಲಿದರು . ಅವರು ಮಾತನಾಡುತ್ತಾ , “ಕೆಎಂಸಿಯ ವೈದ್ಯಕೀಯ ಜೆನೆಟಿಕ್ಸ್ ವಿಭಾಗವು ಅಪರೂಪದ ಅನುವಂಶಿಕ ಪರಿಸ್ಥಿತಿಗಳಿಂದ ಪೀಡಿತ ರೋಗಿಗಳಿಗೆ ಮತ್ತು ಕುಟುಂಬಗಳಿಗೆ ಸಮಗ್ರ ಸೇವೆಗಳನ್ನು ನೀಡಲು ಮೀಸಲಾಗಿರುವ ಭಾರತದ ಕೆಲವೇ ಕೇಂದ್ರಗಳಲ್ಲಿ ಒಂದಾಗಿದೆ. ಅದರ ಕ್ಲಿನಿಕಲ್ ಸೇವೆಗಳ ಹೊರತಾಗಿ, ಪ್ರವರ್ತಕ ಸಂಶೋಧನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಮತ್ತು ವೈದ್ಯಕೀಯ ತಳಿಶಾಸ್ತ್ರ ಕ್ಷೇತ್ರಕ್ಕೆ ಗಣನೀಯವಾಗಿ ಕೊಡುಗೆ ನೀಡುತ್ತಿದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಕೆಎಂಸಿ ಮಣಿಪಾಲದ ಡೀನ್ ಡಾ.ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಕೆಎಂಸಿ ಮಣಿಪಾಲದ ಸಹ ಡೀನ್ ಡಾ.ನವೀನ್ ಎಸ್ ಸಾಲಿನ್ಸ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ವೈದ್ಯಕೀಯ ತಳಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅಂಜು ಶುಕ್ಲಾ, ಅವರು ಓಪನ್ ಡೇ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅನೇಕ ಮಕ್ಕಳು/ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂವಾದಾತ್ಮಕ ಆಟಗಳು ಮತ್ತು ರಸಪ್ರಶ್ನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು . ಅದು ಆನಂದದಾಯಕ ಕಲಿಕೆಯ ಅನುಭವವನ್ನು ನೀಡಿತು.

 

Previous Post

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ರಂಗ ಪೂಜಾ ಸಹಿತ ಬಲಿ ಉತ್ಸವ ಸಂಪನ್ನ..!!

Next Post

ಉಡುಪಿ ಗ್ಯಾಂಗ್‌ವಾರ್‌ ಪ್ರಕರಣ :ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಗ್ಯಾಂಗ್‌ವಾರ್‌ ಪ್ರಕರಣ :ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved