Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: 174 ಗ್ರಾಂ ತೂಕದ ಚಿನ್ನಾಭರಣ,ವಜ್ರದ ಸರ ಸಹಿತ 11.50 ಲಕ್ಷ ರೂ.ಮೌಲ್ಯದ ಸೊತ್ತುಗಳಿದ್ದ ಟ್ರಾಲಿ ಬ್ಯಾಗನ್ನು ಮಹಿಳೆಗೆ ಮರಳಿಸಿದ ಕೊಂಕಣ ರೈಲ್ವೆ ಸಿಬ್ಬಂದಿ..!!

Dhrishya News by Dhrishya News
28/05/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ : ಮೇ 28:ಮುಂಬೈಗೆ ತೆರಳುವ ರೈಲನ್ನು ಏರುವ ಅವಸರದಲ್ಲಿ ಅಮೂಲ್ಯ ವಸ್ತುಗಳಿದ್ದ ಟ್ರಾಲಿ ಬ್ಯಾಗ್‌ನ್ನು ಸುರತ್ಕಲ್ ರೈಲು ನಿಲ್ದಾಣದಲ್ಲಿ ಮರೆತು ಹೋಗಿದ್ದ ಮಹಿಳೆಗೆ ಕೊಂಕಣ ರೈಲ್ವೆಯ ಸಿಬ್ಬಂದಿ ಅದನ್ನು ಸುರಕ್ಷಿತವಾಗಿ ಹಿಂದಿರುಗಿಸಿದ ಘಟನೆ ಮೇ 26ರಂದು ಇಲ್ಲಿ ವರದಿಯಾಗಿದೆ.

ಟ್ರಾಲಿ ಬ್ಯಾಗ್ 174 ಗ್ರಾಂ ತೂಕದ ಚಿನ್ನಾಭರಣ ಹಾಗೂ ಅಮೂಲ್ಯವಾದ ವಜ್ರದ ಒಂದು ಸರ ಸೇರಿದಂತೆ 11.50ಲಕ್ಷ ರೂ.ಮೌಲ್ಯದ ಸೊತ್ತುಗಳನ್ನು ಹೊಂದಿತ್ತು. ಬ್ಯಾಗನ್ನು ಮರೆತು ಮುಂಬೈಗೆ ತೆರಳಿದ್ದ ಮಹಿಳೆ ನಿನ್ನೆ ಖುದ್ದಾಗಿ ಉಡುಪಿ ರೈಲು ನಿಲ್ದಾಣಕ್ಕೆ ಬಂದು ಬ್ಯಾಗ್ ಹಾಗೂ ಅದರಲ್ಲಿದ್ದ ಸೊತ್ತುಗಳನ್ನು ಮರಳಿ ಪಡೆದರು. 

ಘಟನೆ ವಿವರ: ಮೇ 24ರಂದು ಕಾರ್ಕಳದ ಚಿತ್ರಾವತಿ ಅವರು ತನ್ನ ಮಕ್ಕಳೊಂದಿಗೆ ರೈಲು ನಂ.12620 ಮತ್ಸ್ಯಗಂಧ ದಲ್ಲಿ ಸುರತ್ಕಲ್‌ನಿಂದ ಕುರ್ಲಾಗೆ ಪ್ರಯಾಣಿಸಲು ಟಿಕೆಟ್ ಕಾದಿರಿಸಿದ್ದರು. ರೈಲು ನಿಲ್ದಾಣಕ್ಕೆ ಬಂದಾಗ ಜನರ ನೂಕು ನುಗ್ಗಲು, ಸುರಿಯುತಿದ್ದ ಮಳೆಯ ನಡುವೆ ಮಕ್ಕಳೊಂದಿಗೆ ರೈಲನ್ನೇರುವ ಗಡಿಬಿಡಿಯಲ್ಲಿ ಒಂದು ಟ್ರಾಲಿ ಬ್ಯಾಗ್‌ನ್ನು ನಿಲ್ದಾಣದಲ್ಲೇ ಮರೆತುಬಿಟ್ಟಿದ್ದರು. 

ರೈಲು ಹೋದ ಬಳಿಕ ನಿಲ್ದಾಣವನ್ನು ಪರಿಶೀಲಿಸುತಿದ್ದ ವೇಳೆ ಕರ್ತವ್ಯದಲ್ಲಿದ್ದ ಪಾಯಿಂಟ್‌ಮನ್‌ಗಳಾದ ಜಗದೀಶ್ ಹಾಗೂ ಸಂಕೇತ್ ಅವರ ಕಣ್ಣಿಗೆ ನೀಲಿ ಬಣ್ಣದ ಟ್ರಾಲಿ ಬ್ಯಾಗ್ ಕಾಣಿಸಿತು. ಅವರು ಸುರತ್ಕಲ್‌ನ ಸೀನಿಯರ್ ಸ್ಟೇಶನ್ ಮಾಸ್ಟರ್ ಕಾರ್ಲ್‌ ಕೆ.ಪಿ. ಅವರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಕಾರ್ಲ್‌ ಅವರು ತಕ್ಷಣ ಉಡುಪಿಯ ಆರ್‌ಪಿಎಫ್ ಇನ್‌ಸ್ಪೆಕ್ಟರ್ ಪಿ.ವಿ.ಮಧುಸೂದನ್ ಅವರಿಗೆ ವಿಷಯ ತಿಳಿಸಿದರು. 

ಮಧುಸೂದನ್ ಅವರು ಸಿಸಿಟಿವಿಯನ್ನು ಪರಿಶೀಲಿಸಿ, ರೈಲಿನಲ್ಲಿ ಪ್ರಯಾಣಿಸಲು ಬಂದ ಪ್ರಯಾಣಿಕರು ಬ್ಯಾಗ್ ಮರೆತು ಹೋಗಿರುವುದನ್ನು ಖಚಿತಪಡಿಸಿಕೊಂಡು ಟ್ರಾಲಿ ಬ್ಯಾಗ್‌ಗೆ ಸ್ಟೇಶನ್ ಮಾಸ್ಟರ್ ಸೀಲ್ ಹಾಕಿ ಸುಭದ್ರವಾಗಿ ಮುಂದಿನ ರೈಲಿನಲ್ಲಿ ಉಡುಪಿಗೆ ಕಳುಹಿಸುವಂತೆ ಸೂಚಿಸಿದರು. ಅದರಂತೆ ಸುರತ್ಕಲ್‌ನ ಸ್ಟೇಶನ್ ಮಾಸ್ಟರ್ ಅದನ್ನು ಉಡುಪಿಗೆ ಕಳುಹಿಸಿದರು. 

ಚಿತ್ರಾವತಿ ಅವರಿಗೆ ಮುಂಬೈಗೆ ತೆರಳಿದ ಬಳಿಕವಷ್ಟೇ ಬ್ಯಾಗ್ ಇಲ್ಲದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಸಂಬಂಧಿ ಯನ್ನು ಸುರತ್ಕಲ್ ನಿಲ್ದಾಣಕ್ಕೆ ಕಳುಹಿಸಿ ವಿಚಾರಿಸಿದಾಗ ಅದು ಉಡುಪಿ ನಿಲ್ದಾಣದಲ್ಲಿದ್ದು, ಸ್ವತಹ ಬಂದು ಗುರುತು ಹೇಳಿ ಕೊಂಡೊಯ್ಯುವಂತೆ ತಿಳಿಸಲಾಯಿತು. 

ಅದರಂತೆ ಚಿತ್ರಾವತಿ ಅವರು ಮೇ 26ರಂದು ಉಡುಪಿ ನಿಲ್ದಾಣಕ್ಕೆ ಬಂದು ಬ್ಯಾಗ್‌ನ ಗುರುತು ತಿಳಿಸಿ, ರೈಲ್ವೆಯವರ ವಿಧಿ ವಿಧಾನಗಳನ್ನು ಪೂರ್ಣಗೊಳಿಸಿ ಚಿನ್ನಾಭರಣಗಳ ಸಹಿತ ಬ್ಯಾಗ್‌ನ್ನು ಮರಳಿ ಪಡೆದರು. ಚಿತ್ರಾವತಿ ಅವರು ಉಡುಪಿಯ ಆರ್‌ಪಿಎಫ್ ಪಡೆಗೆ ಹಾಗೂ ಸುರತ್ಕಲ್ ನಿಲ್ದಾಣಕ್ಕೆ ತೆರಳಿ ಅಲ್ಲಿನ ಸ್ಟೇಶನ್ ಮಾಸ್ಟರ್ ಹಾಗೂ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

Previous Post

ಉಡುಪಿ ಗ್ಯಾಂಗ್‌ವಾರ್‌ ಪ್ರಕರಣ :ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ..!!

Next Post

ತಾಯಿ ಎದೆ ಹಾಲು ಮಗುವಿಗೆ ಮಾತ್ರ ಮೀಸಲು: ಮಾರಾಟ ಮಾಡುವಂತಿಲ್ಲ: FSSAI ಎಚ್ಚರಿಕೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತಾಯಿ ಎದೆ ಹಾಲು ಮಗುವಿಗೆ ಮಾತ್ರ ಮೀಸಲು: ಮಾರಾಟ ಮಾಡುವಂತಿಲ್ಲ: FSSAI ಎಚ್ಚರಿಕೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026

Recent News

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved