Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರಿಗೆ ಅಭಿನಂದನೆ..!!

Dhrishya News by Dhrishya News
11/06/2024
in ಸುದ್ದಿಗಳು
0
0
SHARES
7
VIEWS
Share on FacebookShare on Twitter

ಉಡುಪಿ : ಜೂನ್ 11:2ನೇ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಇವರನ್ನು ಜೂ. 10ರಂದು ಉಡುಪಿ ಜಿಲ್ಲಾ ಕ್ರೈಸ್ತ ಸಮುದಾಯದವರು ಡಾನ್ ಬಾಸ್ಕೋ ಸಭಾಭವನದಲ್ಲಿ ಅಭಿನಂದಿಸಿದರು.

ಅಭಿನಂದನಾ ಭಾಷಣ ಮಾಡಿದ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮಗುರು ಫಾ. ಚಾರ್ಲ್ಸ್ ಮಿನೇಜಸ್, ಐವನ್ ಡಿಸೋಜರವರು ಸಮಾಜ ಮತ್ತು ಪಕ್ಷಕ್ಕೆ ನೀಡಿದ ಸೇವೆಗೆ ಸಿಕ್ಕ ಪ್ರತಿಫಲ. ಸರ್ಕಾರ ನಮ್ಮ ಕ್ರೈಸ್ತ ಸಮಾಜಕ್ಕೆ ನೀಡಿದ ಕೊಡುಗೆ. ಐವನ್ ಡಿಸೋಜ ಇವರ ಸೇವೆಯು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಲಿ ಎಂದು ಶುಭ ಹಾರೈಸಿದರು.

 

 ಕ್ರೈಸ್ತ ಬಾಂಧವರ ಸನ್ಮಾನ ಸ್ವೀಕರಿಸಿ ಮಾತನಾಡಿದ ಐವನ್ ಡಿಸೋಜ, ಈ ಹುದ್ದೆಯು ಕ್ರೈಸ್ತ ಸಮುದಾಯದ ಕೊಡುಗೆಯನ್ನು ಗುರುತಿಸಿ ಕಾಂಗ್ರೆಸ್ ಸರಕಾರ ಈ ಹುದ್ದೆಯನ್ನು ನೀಡಿದೆ. ಈ ಹುದ್ದೆಯನ್ನು ಪಡೆದ ನಾನು ಧನ್ಯನು. ನನ್ನ ಅವಧಿಯಲ್ಲಿ ಸಮಾಜದ ಕುಂದು ಕೊರತೆಗಳನ್ನು ನನ್ನ ಕೈಲಾದ ಮಟ್ಟಿಗೆ ಸರಿಪಡಿಸಲು ಪ್ರಯತ್ನಿಸುತ್ತೇನೆ. ಹಾಗೇ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ. ಸಮಾಜದ ಎಲ್ಲಾ ವರ್ಗದ ಹಾಗೂ ಧರ್ಮದ ಜನರನ್ನು ಒಗ್ಗೂಡಿಸಿ ಅವರ ದ್ವನಿಯಾಗಿ ವಿಧಾನ ಪರಿಷತ್ ಮತ್ತು ಸರಕಾರದ ಮಟ್ಟದಲ್ಲಿ ನನ್ನ ಕೊಡುಗೆಯನ್ನು ಕೊಡಲು ಬದ್ದನಿದ್ದೇನೆ. ಕಳೆದ ಅವಧಿಯಲ್ಲಿ ಜಾತಿ ಧರ್ಮ ನೋಡದೆ ಮುಖ್ಯಮಂತ್ರಿ ನಿದಿಯಿಂದ ಧಾಖಲೆಯ ಮಟ್ಟದಲ್ಲಿ ಪರಿಹಾರ ನಿಧಿಯನ್ನು ಅಗತ್ಯವಿದ್ದವರಿಗೆ ತಲುಪಿಸಿದ್ದೇನೆ. ನನ್ನಿಂದ ಕೆಲಸ ತೆಗೆಸುವ ಜವಾಬ್ದಾರಿ ತಮ್ಮ ಮೇಲಿದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ಫಾ| ಚಾರ್ಲ್ಸ್ ಮಿನೆಜಸ್, ಸಂತ ಮೇರಿ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರಾದ ಫಾ| ವಿಜಯ್ ಡಿಸೋಜ, ಐವನ್ ಡಿಸೋಜರವರ ಧರ್ಮಪತ್ನಿ ಡಾ. ಕವಿತಾ, ಪಾಲನ ಮಂಡಳಿಯ ಉಪಾಧ್ಯಕ್ಷ ಮ್ಯಾಕ್ಷಿಮ್ ಡಿಸೋಜ ಮತ್ತಿತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಜಿತೇಂದ್ರ ಪುರ್ತಾಡೋ, ಮೇರಿ ಡಿಸೋಜ, ಗ್ರೇಸಿ ಕರ್ಡೊಜ,ವಿಲ್ಸನ್ ರೋಡ್ರಿಗಸ್ ಶಿರ್ವ, ಮೆಲ್ವಿನ್ ಅರಾನ್ಹ, ಚಾರ್ಲ್ಸ್ ಅಂಬ್ಲರ್, ಕಥೋಲಿಕ್ ಸಭಾ ಉಡುಪಿ ಜಿಲ್ಲಾ ಅಧ್ಯಕ್ಷ ಸಂತೋಷ್ ಕರ್ನೆಲಿಯೋ, ಲೆಸ್ಲಿ ಕರ್ನೆಲಿಯೋ, ಪ್ರಶಾಂತ್ ಜತ್ತನ್ನ, ರೋಜಾರಿಯೋ ಡಿಸೋಜ, ಅನಿತಾ ಡಿಸೋಜ ಬೆಲ್ಮಣ್ ಮತ್ತಿತರರು ಹಾಜರಿದ್ದರು.

 ಸಮಾರಂಭದಲ್ಲಿ ಹಾಜರಿದ್ದ ಪ್ರಮುಖರು ಐವನ್ ಡಿಸೋಜರಿಗೆ ಸರಕಾರ ತನ್ನ ಸಂಪುಟದಲ್ಲಿ ಉನ್ನತ ಹುದ್ದೆಯನ್ನು ನೀಡಬೇಕಾಗಿ ಅಭಿಪ್ರಾಯ ಮಂಡಿಸಿದರು. ಅಭಿನಂದನ ಸಮಾರಂಭದ ಬಳಿಕ ಐವನ್ ಡಿಸೋಜರು ಧರ್ಮಧ್ಯಕ್ಷರನ್ನು ಭೇಟಿ ಮಾಡಿ ಆಶೀರ್ವಾಚನ ಪಡೆದರು.

 ಶಿರ್ವ ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಡಿಸೋಜ ಕಾರ್ಯಕ್ರಮ ನಿರ್ವಹಿಸಿದರೆ ಇಫ್ಕಾ ಸಂಘಟನೆಯ ಮಾಜಿ ಅಧ್ಯಕ್ಷ ಲುವಿಸ್ ಲೋಬೊ ಧನ್ಯವಾದ ಸಮರ್ಪಿಸಿದರು.

Previous Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಾನವ ಎದೆಹಾಲು ನಿಧಿ ಉದ್ಘಾಟನೆ..!!

Next Post

ಶ್ರೀವ್ಯಾಸರಾಜರ ಕೊಡುಗೆ ಅಗಾಧ ಪುತ್ತಿಗೆ ಶ್ರೀಪಾದರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀವ್ಯಾಸರಾಜರ ಕೊಡುಗೆ ಅಗಾಧ ಪುತ್ತಿಗೆ ಶ್ರೀಪಾದರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026

Recent News

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved