Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ – 2024 ಆಚರಣೆ..!!

ರಕ್ತದಾನಿಗಳ ಪ್ರೇರಕರಿಗೆ ಸನ್ಮಾನ

Dhrishya News by Dhrishya News
14/06/2024
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಮಣಿಪಾಲ, ಜೂನ್ 14, 2024: “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ. ಈ ದಿನವು ಸ್ವಯಂಸೇವಕರು ಮತ್ತು ರಕ್ತದಾನಿಗಳಿಗೆ ಅವರ ಕೊಡುಗೆಗಳಿಗಾಗಿ ಧನ್ಯವಾದ ಹೇಳುವ ಅವಕಾಶವನ್ನು ಸೂಚಿಸುತ್ತದೆ. 2024 ರ ದ್ಯೇಯ ವಾಕ್ಯ “20 ವರ್ಷಗಳ ಕೂಡುಗೆಯನ್ನು ಆಚರಿಸುತ್ತಿದೆ: ರಕ್ತದಾನಿಗಳಿಗೆ ಧನ್ಯವಾದಗಳು!”

ಈ ಥೀಮ್ ಎರಡು ಪ್ರಮುಖ ಅಂಶಗಳನ್ನು ಎತ್ತಿ ತೋರಿಸುತ್ತದೆ: ರಕ್ತದಾನಿಗಳಿಗೆ ಮೆಚ್ಚುಗೆ: ಕಳೆದ ಎರಡು ದಶಕಗಳಿಂದ, ವಿಶ್ವ ರಕ್ತದಾನಿಗಳ ದಿನವು ಸ್ವಯಂಪ್ರೇರಿತ ರಕ್ತದಾನಿಗಳಿಗೆ ಅಪಾರ ಕೃತಜ್ಞತೆಯನ್ನು ವ್ಯಕ್ತಪಡಿಸಲು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ. ರಕ್ತ ನೀಡುವ ಅವರ ನಿಸ್ವಾರ್ಥ ಕಾರ್ಯವು ಅಸಂಖ್ಯಾತ ಜೀವಗಳನ್ನು ಉಳಿಸಿದೆ ಮತ್ತು ಸುರಕ್ಷಿತ ಮತ್ತು ಸುರಕ್ಷಿತ ರಕ್ತ ಪೂರೈಕೆಯ ಬೆನ್ನೆಲುಬಾಗಿ ಮುಂದುವರಿಯುತ್ತದೆ.

ಒಂದು ಮೈಲಿಗಲ್ಲು ವರ್ಷ: 2024 ಜಾಗೃತಿ ಮೂಡಿಸುವ ಮತ್ತು ರಕ್ತದಾನವನ್ನು ಉತ್ತೇಜಿಸುವ 20 ವರ್ಷಗಳನ್ನು ಸೂಚಿಸುತ್ತದೆ. ಈ ವಾರ್ಷಿಕೋತ್ಸವವು ಸಾಧಿಸಿದ ಪ್ರಗತಿಯನ್ನು ಪ್ರತಿಬಿಂಬಿಸಲು, ನಡೆಯುತ್ತಿರುವ ಸವಾಲುಗಳನ್ನು ಅಂಗೀಕರಿಸಲು ಮತ್ತು ಈ ಕ್ಷೇತ್ರದಲ್ಲಿ ದಣಿವರಿಯಿಲ್ಲದೆ ದುಡಿಯುತ್ತಿರುವ ರಕ್ತದಾನಿಗಳು, ರಕ್ತ ಕೇಂದ್ರಗಳು ಮತ್ತು ಸಂಸ್ಥೆಗಳ ಸಮರ್ಪಣೆಯನ್ನು ಆಚರಿಸಲು ಅವಕಾಶವನ್ನು ಒದಗಿಸುತ್ತದೆ.

ಶ್ರೀಮತಿ ರಶ್ಮಿ ಎಸ್‌ಆರ್ ಕೆಎಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆಎಂಸಿ ಮಣಿಪಾಲದ ಡೀನ್ ಡಾ ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಯ ಸಿಒಒ ಡಾ ಆನಂದ್ ವೇಣುಗೋಪಾಲ್ ಕಾರ್ಯಕ್ರಮದ ಗೌರವ ಅತಿಥಿಗಳಾಗಿದ್ದರು. ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ರಕ್ತ ಕೇಂದ್ರದ ಮುಖ್ಯಸ್ಥ ಡಾ.ಶಮೀ ಶಾಸ್ತ್ರಿ, ರಕ್ತ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಗಣೇಶ್ ಮೋಹನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀಮತಿ ರಶ್ಮಿ ಎಸ್.ಆರ್. ಮಾತನಾಡಿ,” ಈ ಸಂದರ್ಭದಲ್ಲಿ ಶ್ರೀಮತಿ ರಶ್ಮಿ ಎಸ್.ಆರ್. ಮಾತನಾಡಿ,” ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುತ್ತದೆ, ಭಾರತದಲ್ಲಿ ಯಾವಾಗಲೂ 1 ಮಿಲಿಯನ್ ಯುನಿಟ್ ರಕ್ತದ ಕೊರತೆಯಿದೆ. ರಕ್ತಕ್ಕೆ ಜಾತಿ, ಧರ್ಮ ಅಂತ ಇಲ್ಲ ಮತ್ತು ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ. ಅದನ್ನು ದಾನದ ಮೂಲಕವೇ ಅವಶ್ಯವಿದ್ದವರಿಗೆ ಪೂರೈಸಬೇಕಾಗಿದೆ. ಆದ್ದರಿಂದ ಎಲ್ಲಾ ಅರ್ಹ ದಾನಿಗಳು ರಕ್ತ ದಾನ ಮಾಡುವುದರ ಮೂಲಕ ಇತರರ ಜೀವ ಉಳಿಸಲು ಸಹಕರಿಸಬೇಕು “ ಎಂದು ಹೇಳಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ ಪದ್ಮರಾಜ್ ಹೆಗ್ಡೆ ಅವರು , “ಪ್ರತೀ ಎರಡು ಸೆಕೆಂಡ್ಸ್ ಗೆ ಒಬ್ಬರಿಗೆ ರಕ್ತದ ಅವಶ್ಯಕತೆ ಇದೆ. ಒಬ್ಬ ಆರೋಗ್ಯವಂತ 18ನೇ ವರ್ಷಕ್ಕೆ ರಕ್ತ ದಾನ ಮಾಡಲು ಆರಂಭಿಸಿ ವರ್ಷಕ್ಕೆ 3 ಬಾರಿ ದಾನ ಮಾಡಿದರೆ, ಅವನಿಗೆ 60 ವರ್ಷ ಆಗುವಾಗ 30 ಗ್ಯಾಲನ್ ನಷ್ಟು ರಕ್ತ ದಾನ ಮಾಡಿರುತ್ತಾರೆ. ಇದರಿಂದ ಕಡಿಮೆ ಪಕ್ಷ 500 ಜನರ ಜೀವ ಉಳಿಸಬಹುದು. ಆದ್ದರಿಂದ ತಾವೂ ರಕ್ತ ದಾನ ಮಾಡುವುದರೊಂದಿಗೆ ಇತರರಿಗೂ ದಾನ ಮಾಡುವಂತೆ ಪ್ರೇರೇಪಿಸಬೇಕು” ಎಂದರು.

ರಕ್ತದಾನಿಗಳ ಪ್ರೇರಕರನ್ನು, ಕಸ್ತೂರಬಾ ಆಸ್ಪತ್ರೆ ರಕ್ತ ಕೇಂದ್ರದ ಅತ್ಯುತ್ತಮ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು . ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ಹಾಗೂ ಕೆಎಂಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ಲೋಗನ್ ಬರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಡಾ ಅವಿನಾಶ್ ಶೆಟ್ಟಿ ಅವರು ಸಭೆಯನ್ನು ಸ್ವಾಗತಿಸಿ, ವಿಶ್ವ ರಕ್ತದಾನಿಗಳ ದಿನಾಚರಣೆಯ ಮಹತ್ವವನ್ನು ಒತ್ತಿ ಹೇಳಿದರು. ಡಾ.ಶಮೀ ಶಾಸ್ತ್ರಿ ಕಾರ್ಯಕ್ರಮದ ಅವಲೋಕನ ನೀಡಿದರು . ಡಾ.ಗಣೇಶ್ ಮೋಹನ್ ವಂದಿಸಿದರು. ಶ್ರೀ ವಿಶ್ವೇಶ ಎನ್ ಅವರು ರಕ್ತದಾನಿಗಳ ಪ್ರೇರಕರನ್ನು ಗೌರವಿಸಿದ ಪಟ್ಟಿಯನ್ನು ಓದಿದರು. ಡಾ. ಚೆನ್ನ ದೀಪಿಕಾ ಕಾರ್ಯಕ್ರಮ ನಿರೂಪಿಸಿದರು .

Previous Post

ಪಶುಪಾಲನ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ 400 ಪಶುವೈದ್ಯ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

Next Post

ಮಾಹೆಯ ಹಾಸ್ಟೆಲ್‌ನ ವಿದ್ಯಾರ್ಥಿಗಳ ಕ್ಷೇಮಪಾಲನೆಗಾಗಿ ಉಸ್ತುವಾರಿಗಳಲ್ಲಿ ಜಾಗೃತಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯ ಹಾಸ್ಟೆಲ್‌ನ ವಿದ್ಯಾರ್ಥಿಗಳ ಕ್ಷೇಮಪಾಲನೆಗಾಗಿ ಉಸ್ತುವಾರಿಗಳಲ್ಲಿ ಜಾಗೃತಿ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026

Recent News

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved