Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ಉಡುಪಿ ಜಿಲ್ಲೆಗೆ ಸರಕಾರಿ ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹ..!!

Dhrishya News by Dhrishya News
21/06/2024
in ಸುದ್ದಿಗಳು
0
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ಉಡುಪಿ ಜಿಲ್ಲೆಗೆ ಸರಕಾರಿ ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹ..!!
0
SHARES
52
VIEWS
Share on FacebookShare on Twitter

ಕಾರ್ಕಳ : ಜೂನ್ 21:ಬುದ್ದಿವಂತರ ಜಿಲ್ಲೆಯೆಂದೇ ಕರೆಯಲ್ಪಡುವ, ಶಿಕ್ಷಣ ಕಾಶಿಯಾಗಿರುವ, ಐತಿಹಾಸಿಕವಾಗಿ ಜ್ಞಾನ ಪರಂಪರೆಯನ್ನು ವೈಭವಕ್ಕೇರಿಸಿದ ಶ್ರೀಕೃಷ್ಣನ ನೆಲೆವೀಡಾದ ಉಡುಪಿ ಜಿಲ್ಲೆಯಲ್ಲಿ ಒಂದು ಸರಕಾರಿ ತಾಂತ್ರಿಕ ಕಾಲೇಜು ಮತ್ತು ವೈದ್ಯಕೀಯ ಕಾಲೇಜು ಇಲ್ಲದೇ ಇರುವುದು ಬಹಳ ಆಶ್ಚರ್ಯಕರ ಹಾಗೂ ದುಃಖದಾಯಕ ವಿಷಯವಾಗಿದೆ. ಉಡುಪಿ ಜಿಲ್ಲೆಯಲ್ಲಿ ಪ್ರತೀ ವರ್ಷ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು CET ಮತ್ತು NEET ಪರೀಕ್ಷೆಯನ್ನು ಬರೆದು, ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದ ಅಪೇಕ್ಷಿಯಾಗಿರುತ್ತಾರೆ.

ಎಲ್ಲಾ ದಿಸೆಯಿಂದ ಪ್ರತಿಯೊಂದು ವ್ಯವಸ್ಥೆಯನ್ನು ಹೊಂದಿರುವ ಜಿಲ್ಲೆಯ ಜನತೆ ಸಾಮಾನ್ಯವಾಗಿ ಹೊರ ಜಿಲ್ಲೆಗಳಿಗೆ ತಮ್ಮ ಮಕ್ಕಳನ್ನು ಶಿಕ್ಷಣಕ್ಕಾಗಿ ಕಳುಹಿಸುವುದಾಗಲಿ ಅಥವಾ ಪ್ರೋತ್ಸಾಹಿಸುವುದು. ತುಲನಾತ್ಮಕವಾಗಿ ಕಡಿಮೆಯಾಗಿರುತ್ತದೆ. ಈ ಕಾರಣಗಳಿಂದ ಅದೆಷ್ಟೋ ಬಡ ಪ್ರತಿಭಾವಂತ ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣವನ್ನು ಪಡೆಯಬೇಕೆಂದು ಅಪೇಕ್ಷೆ ಹೊಂದಿರುವ ವಿದ್ಯಾರ್ಥಿ ತಾವು ಇಚ್ಚಿಸಿರುವ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಮತ್ತು ಇದರಿಂದಾಗಿ ಜಿಲ್ಲೆಯಲ್ಲಿನ ಪ್ರತಿಭೆಗೆ ಸರಿಯಾದ ವೇದಿಕೆ ಒದಗಿಸುವಲ್ಲಿ ಸರಕಾರ ವಿಫಲವಾಗುತ್ತಿದೆ ಎನ್ನುವುದು ಬಹಳ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಅನೇಕ ವರ್ಷಗಳಿಂದ ಎಬಿವಿಪಿ ಈ ವಿಚಾರವಾಗಿ ಸಂಬಂಧಪಟ್ಟ ಇಲಾಖೆಗೆ ಆಗ್ರಹವನ್ನು ಇರಿಸುತ್ತ ಬಂದಿದೆ ಕಳೆದ ಸರಕಾರ ಇದ್ದಂತಹ ಸಂದರ್ಭದಲ್ಲಿ ಅಂದಿನ ವೈದ್ಯಕೀಯ ಸಚಿವ ಡಾ| ಸುಧಾಕರ್ ಅವರು ಎಬಿವಿಪಿ ಮನವಿಗೆ ಸ್ಪಂದಿಸಿ ಪೂರಕವಾಗಿ ಸರಕಾರದಿಂದ ಉಪ್ಪೂರು ಭಾಗದಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸಲು 30 ಎಕರೆ ಜಮೀನನ್ನು ಮಂಜೂರಾತಿ ಮಾಡುವುದಾಗಿ ಭರವಸೆಯನ್ನು ನೀಡಿದ್ದರು ಆದರೆ ಇದುವರೆಗೆ ಆ ವಿಷಯವಾಗಿ ಯಾವುದೇ ರೀತಿಯ ಬೆಳವಣಿಗೆ ಆಗದೆ ಇರುವುದು ಬಹಳ ಖಂಡನಾರ್ಹ ವಿಷಯವಾಗಿದೆ. ಈಗಾಗಲೇ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಇಂತಹ ಕಾಲೇಜು ಇದ್ದು ಉಡುಪಿಯ ವಿದ್ಯಾರ್ಥಿಗಳಿಗಾಗಿ ಸರಕಾರ ಶೀಘ್ರವಾಗಿ ಮುಂದೆ ಬರುವ ಅಧಿವೇಶನದ ಸಂದರ್ಭದಲ್ಲಿ ಈ ವಿಷಯದ ಕುರಿತು ಸೂಕ್ತ ಜಮೀನಿನ ವ್ಯವಸ್ಥೆ ಹಾಗೂ ಹಣಕಾಸಿನ ಬಿಡುಗಡೆಯನ್ನು ಮಾಡಬೇಕು ಎಂದು ಎಬಿವಿಪಿ ಆಗ್ರಹಿಸುತ್ತದೆ ಒಂದು ವೇಳೆ ತಪ್ಪಿದ್ದಲ್ಲಿ ಮುಂದೆ ಬರುವಂತಹ ದಿನಗಳಲ್ಲಿ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸುತ್ತೇವೆ ಎಂದು ಮನವಿ ನೀಡಲಾಯಿತು

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಶ್ರೇಯಸ್ ಅಂಚನ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಪವನ್ ಕುಲಾಲ್, ತಾಲೂಕು ವಿದ್ಯಾರ್ಥಿನಿ ಪ್ರಮುಖ್ ಸೌಮ್ಯ ಜಿ ನಾಯಕ್, ತಾಲೂಕು ಸಹ ವಿದ್ಯಾರ್ಥಿನಿ ಪ್ರಮುಖ್ ಮನ್ವಿತಾ ಕುಲಾಲ್, ನಗರ ಸಹ ಕಾರ್ಯದರ್ಶಿ ಯಾದ ದೀಕ್ಷಿತ್ ಹಾಗೂ ಪ್ರಮುಖ ಕಾರ್ಯಕರ್ತರಾದ ಮನೋಜ್,ವಿಜೇಂದ್ರ, ಯುವರಾಜ್, ಸುದೀಪ್, ತನುಶ್ರೀ, ಪ್ರಜ್ವಲ್, ಶಿವಪ್ರಸಾದ್,ಶ್ರೀಧರ್, ಮನ್ವಿತ್, ಶಿವಾನಂದ ರವರು ಉಪಸ್ಥಿತರಿದ್ದರು.

Previous Post

ಕಾರ್ಕಳ : ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಬ್ರಹತ್ ಪ್ರತಿಭಟನೆ..!!

Next Post

ಮಣಿಪಾಲ : ಚಾಕು ತೋರಿಸಿ ವ್ಯಕ್ತಿಯ ಅಪಹರಣ,ಹಣ ಲೂಟಿ : ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ : ಚಾಕು ತೋರಿಸಿ ವ್ಯಕ್ತಿಯ ಅಪಹರಣ,ಹಣ ಲೂಟಿ : ಪ್ರಕರಣ ದಾಖಲು

ಮಣಿಪಾಲ : ಚಾಕು ತೋರಿಸಿ ವ್ಯಕ್ತಿಯ ಅಪಹರಣ,ಹಣ ಲೂಟಿ : ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ ಜಾಗತಿಕ ಶ್ರೇಯಾಂಕದಲ್ಲಿ ಏರಿಕೆ, ಸುಸ್ಥಿರತೆ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠತೆ..!!

ಮಾಹೆ ಜಾಗತಿಕ ಶ್ರೇಯಾಂಕದಲ್ಲಿ ಏರಿಕೆ, ಸುಸ್ಥಿರತೆ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠತೆ..!!

20/06/2025
ಉಡುಪಿ :ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೊಸ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ..!!

ಉಡುಪಿ :ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೊಸ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ..!!

20/06/2025
ಉಡುಪಿ :ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ..!!

ಉಡುಪಿ :ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ..!!

20/06/2025
ಮೊಬೈಲ್‌ ವಿಚಾರವಾಗಿ ಪತ್ನಿಯನ್ನು ಹತ್ಯೆಗೈದ ಪತಿಯ ಬಂಧನ.!!

ಮೊಬೈಲ್‌ ವಿಚಾರವಾಗಿ ಪತ್ನಿಯನ್ನು ಹತ್ಯೆಗೈದ ಪತಿಯ ಬಂಧನ.!!

20/06/2025

Recent News

ಮಾಹೆ ಜಾಗತಿಕ ಶ್ರೇಯಾಂಕದಲ್ಲಿ ಏರಿಕೆ, ಸುಸ್ಥಿರತೆ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠತೆ..!!

ಮಾಹೆ ಜಾಗತಿಕ ಶ್ರೇಯಾಂಕದಲ್ಲಿ ಏರಿಕೆ, ಸುಸ್ಥಿರತೆ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠತೆ..!!

20/06/2025
ಉಡುಪಿ :ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೊಸ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ..!!

ಉಡುಪಿ :ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೊಸ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ..!!

20/06/2025
ಉಡುಪಿ :ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ..!!

ಉಡುಪಿ :ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ..!!

20/06/2025
ಮೊಬೈಲ್‌ ವಿಚಾರವಾಗಿ ಪತ್ನಿಯನ್ನು ಹತ್ಯೆಗೈದ ಪತಿಯ ಬಂಧನ.!!

ಮೊಬೈಲ್‌ ವಿಚಾರವಾಗಿ ಪತ್ನಿಯನ್ನು ಹತ್ಯೆಗೈದ ಪತಿಯ ಬಂಧನ.!!

20/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved