Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಪಿ.ಎಂ.ವಿಶ್ವಕರ್ಮ ಯೋಜನೆ : ಕುಶಲಕರ್ಮಿಗಳಿಂದ ನೋಂದಣಿಗೆ ಸೂಚನೆ ..!!

Dhrishya News by Dhrishya News
22/06/2024
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಡುಪಿ, ಜೂನ್ .22: ಕೇಂದ್ರ ಸರಕಾರವು ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಈವರೆಗೂ ನೋಂದಣಿ ಮಾಡದೇ ಇರುವ ಕುಶಲಕರ್ಮಿಗಳೂ  ನೋಂದಣಿ ಇದೀಗ ಮಾಡಿಕೊಳ್ಳಬಹುದಾಗಿದೆ.

ಬಡಗಿತನ/ ಮರಗೆಲಸ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ, ಕಮ್ಮಾರಿಕೆ, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಬೀಗ ತಯಾರಕರು, ಆಭರಣ ತಯಾರಿಕೆ, ಕುಂಬಾರಿಕೆ, ಶಿಲ್ಪಿ ಪಾದರಕ್ಷೆ ತಯಾರಿಕೆ /ಚರ್ಮಗಾರಿಕೆ, ಗಾರೆ ಕೆಲಸದವರು / ಕಲ್ಲು ಕುಟ್ಟಿಗ, ಬುಟ್ಟಿ / ಚಾಪೆ / ಕಸಪೊರಕೆ ತಯಾರಕರು / ತೆಂಗಿನ ನಾರಿನ ಕೆಲಸಗಾರರು, ಗೊಂಬೆ/ಆಟಿಕೆ ತಯಾರಕರು, ಕ್ಷೌರಿಕ, ಹೂ-ಮಾಲೆ ತಯಾರಕರು, ಅಗಸರು, ಟೈಲ‌ರ್, ಮೀನಿನ ಬಲೆಗಳನ್ನು ನೇಯ್ದೆ ಮಾಡುವವರು ಮುಂತಾದ ವೃತ್ತಿಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದು, ಜಿಲ್ಲೆಯಲ್ಲಿ ಸುಮಾರು 13,500 ವಿವಿಧ ಕುಶಲ ಕರ್ಮಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ.

ಮೇಲ್ಕಂಡ ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿ ಯಾಗಿರುವ, 18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟವರಾಗಿರುವವರು ಕಳೆದ 5 ವರ್ಷಗಳಲ್ಲಿ ಸ್ವಯಂ ಉದ್ಯೋಗ / ವ್ಯಾಪಾರ ಅಭಿವೃದ್ಧಿಗಾಗಿ ಕ್ರೆಡಿಟ್ ಆಧಾರಿತ ಯೋಜನೆಗಳ ಅಡಿಯಲ್ಲಿ ಸಾಲವನ್ನು ಪಡೆದಿರಬಾರದು.

ಆದಾಗ್ಯೂ ತಮ್ಮ ಸಾಲವನ್ನು ಮರುಪಾವತಿ ಮಾಡಿದ ಮುದ್ರಾ ಮತ್ತು ಪಿ.ಎಂ ಸ್ವನಿಧಿಯ ಫಲಾನುಭವಿಗಳು ಪಿ.ಎಂ ವಿಶ್ವಕರ್ಮ ಯೋಜನೆ ಯಡಿಯಲ್ಲಿ ನೋಂದಣಿಗೆ ಅರ್ಹರಾಗಿರುತ್ತಾರೆ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೋಂದಣಿಗೆ ಅರ್ಹರಾಗಿದ್ದು, ಕುಟುಂಬದಲ್ಲಿ ಯಾವುದೇ ಸದಸ್ಯರು ಸರಕಾರಿ ಉದ್ಯೋಗದಲ್ಲಿರಬಾರದು.

ಕುಶಲಕರ್ಮಿಗಳು ಸಂಬಂಧಿಸಿದ ಗ್ರಾಮ ಪಂಚಾಯತ್ / ನಗರಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಸ್ಥಾಪಿತವಾಗಿರುವ ಸಾಮಾನ್ಯ ಸೌಲಭ್ಯ ಕೇಂದ್ರದಲ್ಲಿ ಮತ್ತು ಆಧಾರ ಆಧಾರಿತ ಬಯೋಮೆಟ್ರಿಕ್ ದೃಢೀಕೃತ ಪಿ.ಎಂ ವಿಶ್ವಕರ್ಮ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾ‌ರ್ ಕಾರ್ಡ್, ಮೊಬೈಲ್ ಸಂಖ್ಯೆ (ಆಧಾ‌ರ್ ಲಿಂಕ್, ಬ್ಯಾಂಕ್‌ ಖಾತೆ ವಿವರಗಳು, ರೇಷನ್ ಕಾರ್ಡ್‌ಗಳನ್ನು ಹಾಜರು ಪಡಿಸುವುದು ಕಡ್ಡಾಯವಾಗಿರುತ್ತದೆ. ನೊಂದಣಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ.

ನೋಂದಣಿಗೆ ಸಂಬಂಧಿಸಿದಂತೆ ಸಾಮಾನ್ಯ ಸೇವಾ ಕೇಂದ್ರಗಳ ಜಿಲ್ಲಾ ವ್ಯವಸ್ಥಾಪಕ ಗೋವರ್ಧನ ಎಚ್‌. ಮೊ.ಸಂಖ್ಯೆ: 7217623877, 8217840512 ಅಧಿಕಾರಿ ಪ್ರಸನ್ನಕುಮಾರ ಮೊಬೈಲ್ ಸಂಖ್ಯೆ: 7019032011 ಇವರನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಶಿವಳ್ಳಿ ಕೈಗಾರಿಕಾ ಕೇಂದ್ರ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2575650 ಅಥವಾ ಉಡುಪಿ, ಕುಂದಾಪುರ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕುಗಳಿಗೆ ಸಂಬಂಧಿಸಿದಂತೆ ಉಪ ನಿರ್ದೇಶಕ ಸೀತಾರಾಮ ಶೆಟ್ಟಿ ಮೊ.ಸಂಖ್ಯೆ: 9448623952 , ಕಾಪು ತಾಲೂಕುಗಳಿಗೆ ಸಂಬಂಧಿಸಿದಂತೆ ಸಹಾಯಕ ನಿರ್ದೇಶಕ ಜಿ. ವಾಮನ ನಾಯ್ಕ .: 9448409488 ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕಾರ್ಕಳದಲ್ಲಿ ಅಲ್ಟ್ರಾಟೆಕ್ ಗ್ರೀನ್ ಕ್ಯಾಂಪ್..!!

Next Post

ಕಮಲಶಿಲೆ ದೇವಸ್ಥಾನದ ಗೋಶಾಲೆಯ ಬಳಿ ದನ ಕಳವು ಯತ್ನ ಪ್ರಕರಣ:ಇಬ್ಬರು ಆರೋಪಿಗಳ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಮಲಶಿಲೆ ದೇವಸ್ಥಾನದ ಗೋಶಾಲೆಯ ಬಳಿ ದನ ಕಳವು ಯತ್ನ ಪ್ರಕರಣ:ಇಬ್ಬರು ಆರೋಪಿಗಳ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved