Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೀದಿ ನಾಯಿಗಳ ಕಾಟಕ್ಕೆ ಕಡಿವಾಣ ಹಾಕಲು ಪಣ ತೊಟ್ಟ ಕಾರ್ಕಳ ಪುರಸಭೆ..!!

Dhrishya News by Dhrishya News
28/06/2024
in ಸುದ್ದಿಗಳು
0
ಬೀದಿ ನಾಯಿಗಳ ಕಾಟಕ್ಕೆ ಕಡಿವಾಣ ಹಾಕಲು ಪಣ ತೊಟ್ಟ ಕಾರ್ಕಳ ಪುರಸಭೆ..!!
0
SHARES
33
VIEWS
Share on FacebookShare on Twitter

ಕಾರ್ಕಳ :ಜೂನ್ 27:ಕಳೆದ ಕೆಲವಾರು ವರುಷಗಳಿಂದ ಬೀದಿ ನಾಯಿಗಳ ಉಪಟಳಕ್ಕೆ ಬೇಸತ್ತು ಹಲವಾರು ಮಂದಿ ಬೀದಿ ನಾಯಿಗಳ ಕಡಿತದಿಂದ ಸಾಕಷ್ಟು ಕಷ್ಟ ಅನುಭವಿಸಿ ಪುರಸಭೆಗೆ ಹಿಡಿಶಾಪ ಹಾಕುತಿದ್ದ ಸಾರ್ವಜನಿಕರು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟು ರಸ್ತೆಯಲ್ಲಿ ರಾಜರೋಷದಿಂದ ನಡೆದಾಡುವಂತಾಗಿದೆ

ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಹಲವಾರು ಬಾರಿ ಬೀದಿ ನಾಯಿಗಳ ಕಡಿತದಿಂದ ಸಾರ್ವಜನಿಕರಿಗೆ ಆದ ಸಮಸ್ಯೆ ಬಗ್ಗೆ ಚರ್ಚೆಗೆ ಹಾಗೂ ಪ್ರತಿಪಕ್ಷ, ಆಡಳಿತ ಪಕ್ಷದ ಪ್ರಶ್ನೆ ಮತ್ತು ಟೀಕೆಗಳಿಗೆ ಗುರಿಯಾಗಿದ್ದ ಅಧಿಕಾರಿಗಳು ಹಲವಾರು ಬಾರಿ ಬೀದಿನಾಯಿಗಳ ಕಾಟ ತಪ್ಪಿಸಲು ಮಾಡಿದ ಹೋರಾಟ, ಪ್ರಯತ್ನ ಪ್ರಾಣಿ ಪ್ರೇಮಿಗಳು ಹಾಗೂ ಕಾನೂನಿನ ತೊಡಕಿನಿಂದ ಪುರಸಭೆಗೆ ಹಿನ್ನಡೆಯಾಗಿತ್ತು ಬೀದಿ ನಾಯಿಗಳಿಂದ ತೊಂದರೆ ಅನುಭವಿಸಿದ ಕುಟುಂಬಗಳ ನೋವು ಹಾಗೂ ಸಾರ್ವಜನಿಕರ ಆಕ್ರೋಶ ಪುರಸಭೆ ಅಧಿಕಾರಿಗಳ ನೆಮ್ಮದಿ ಕೆಡಿಸಿದ್ದಂತು ನಿಜ.

ಹಲವಾರು ಸಮಸ್ಯೆಗಳು ಎದುರಾದರೂ ಕಾನೂನಿನ ತೊಡಕನ್ನು ವಿಕ್ರಮಾದಿತ್ಯನನ್ನು ಬೆಂಬಿಡದ ಬೆತಾಳನಂತೆ ಬೆನ್ನಟ್ಟಿ ಕಾನೂನಿನ ಚೌಕಟ್ಟಿನಲ್ಲಿ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮಹತ್ತರವಾದ ಹೆಜ್ಜೆಯನ್ನು ಇಟ್ಟಿದೆ 

ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ರೂಪ ಟಿ ಶೆಟ್ಟಿ ಹಾಗೂ ಹಿರಿಯ ಆರೋಗ್ಯ ಅಧಿಕಾರಿ ಲೈಲಾ ಥಾಮಸ್ ಅವರ ನೇತೃತ್ವದಲ್ಲಿ ಕಾರ್ಕಳ ಪುರಸಭೆ ಆಶ್ರಯದಲ್ಲಿ ಕ್ಯಾಪ್ಟನ್ ಅನಿಮಲ್ ಕೇರ್ ಟ್ರಸ್ಟ್ ಮಣಿಪಾಲ ಇದರ ಸಹಯೋಗದೊಂದಿಗೆ ಕಾರ್ಕಳ ನಗರ ವ್ಯಾಪ್ತಿಯ ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ಹಾಗೂ ರೇಬಿಸ್ ರೋಗ ನಿರೋಧಕ ಲಸಿಕೆಗಳನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಾರ್ಯಪ್ರವೃತ್ತವಾಗಿದೆ 

ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಡಂಪಿಂಗ್ ಯಾರ್ಡ್ ಪಕ್ಕದಲ್ಲಿ ಶ್ವಾನಗಳ ಶಸ್ತ್ರಚಿಕಿತ್ಸೆಗಾಗಿ ಪ್ರತ್ಯೇಕ ಶಸ್ತ್ರಚಿಕಿತ್ಸಾ ಕೊಠಡಿ, ಶಸ್ತ್ರಚಿಕಿತ್ಸಾ ಪೂರ್ವ ಕೊಠಡಿ , ಶ್ವಾನಗಳ ಶಸ್ತ್ರಚಿಕಿತ್ಸಾ ನಂತರದ ವಿಶ್ರಾಂತಿ ಕೊಠಡಿ ನಿರ್ಮಿಸಿ , ನುರಿತ ಪಶುವೈದ್ಯರುಗಳಿಂದ ಬೀದಿ ನಾಯಿಗಳ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯಕೀಯ ಆರೋಗ್ಯ ನಡೆಸಿ ಮರಳಿ ತಂದಂತಹ ಜಾಗಗಳಿಗೆ ಬಿಡಲಾಗುತ್ತಿದೆ

ಈಗಾಗಲೇ ಸುಮಾರು 80ರಷ್ಟು ಬೀದಿ ನಾಯಿಗಳನ್ನು ಶಸ್ತ್ರಚಿಕಿತ್ಸೆ ನಡೆಸಿ ಹೊರ ಬಿಡಲಾಗಿದ್ದು ದಿನವೊಂದಕ್ಕೆ ಸುಮಾರು 20ರಿಂದ 30ರಷ್ಟು ಬೀದಿ ನಾಯಿಗಳ ಶಸ್ತ್ರಚಿಕಿತ್ಸೆ ನಡೆಸಿ 3 ದಿನಗಳ ಶುಶ್ರೂಷೆ ನೀಡಿ ಅವುಗಳ ಚಲನ ವಲನಗಳ ಬಗ್ಗೆ ನಿಗಾ ಇಡಲಾಗುತ್ತಿದೆ

ಕ್ಯಾಪ್ಟನ್ ಅನಿಮಲ್ ಕೇರ್ ಟ್ರಸ್ಟ್ ನ ಪಶು ವೈದ್ಯರು , ಪುರಸಭಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಕಾರ್ಕಳ ಪುರಸಭಾ ವ್ಯಾಪ್ತಿಯ 23 ವಾರ್ಡ್ ಗಳಲ್ಲಿ ಬೆಳಗ್ಗಿನ ಜಾವ ಪುರಸಭಾ ವಾಹನಗಳಲ್ಲಿ ಬೀದಿ ನಾಯಿಗಳನ್ನು ಬಲೆ ಬೀಸಿ ಹಿಡಿದು ಹಾಕಿ ಕರಿಯಕಲ್ಲು ಡಂಪಿಂಗ್ ಯಾರ್ಡ್ ಪಕ್ಕದಲ್ಲಿರುವ ಪುರಸಭಾ ಶ್ವಾನ ಸಂತಾನ ಹರಣ ಶಸ್ತ್ರಚಿಕಿತ್ಸೆ ಕೇಂದ್ರಕ್ಕೆ ತಂದು ಗಂಡು ಹಾಗೂ ಹೆಣ್ಣು ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸುವುದರ ಜೊತೆಗೆ ರೇಬಿಸ್ ಲಸಿಕೆ ಹಾಕಲಾಗುತ್ತಿದೆ

ಕಳೆದ ಒಂದು ವಾರದಿಂದ ವಿವಿಧ ವಾರ್ಡ್ಗಳಿಂದ ಸುಮಾರು ನೂರರಷ್ಟು ಬೀದಿ ನಾಯಿಗಳನ್ನು ಹಿಡಿದು ತಂದು ಶಸ್ತ್ರಚಿಕಿತ್ಸೆ ನಡೆಸಲಾಗಿದೆ ವಾರ್ಡುಗಳಲ್ಲಿ ಮುಂಚಿತವಾಗಿಯೇ ಸಾರ್ವಜನಿಕರಿಗೆ ಪುರಸಭೆ ಮಾಹಿತಿ ನೀಡಿ ಸಾಕು ನಾಯಿಗಳನ್ನು ಬೀದಿಗೆ ಬಿಡದಂತೆ ವಿನಂತಿಸಲಾಗುತ್ತದೆ. ಹಿಡಿದ ಬೀದಿ ನಾಯಿಗಳ ಮಾಹಿತಿ ಸಂಖ್ಯೆಗಳನ್ನು ಸ್ಥಳದಲ್ಲೇ ಸಾರ್ವಜನಿಕರಿಗೆ ಆಯಾ ದಿನ ನೀಡುವ ಕೆಲಸ ಕೂಡ ಪುರಸಭೆಯ ಹಿರಿಯ ಆರೋಗ್ಯಾಧಿಕಾರಿ ಲೈಲಾ ಥಾಮಸ್ ಮಾಡುತ್ತಿದ್ದಾರೆ

ನಿರಂತರವಾಗಿ ಸುಮಾರು ಒಂದು ತಿಂಗಳ ಕಾಲ ಈ ಪ್ರಕ್ರಿಯೆ ನಡೆಯಲಿಕ್ಕಿದ್ದು ಸುಮಾರು 300 ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಸುವ ಗುರಿ ಪುರಸಭೆ ಹೊಂದಿದೆ 

ನಾಯಿಯನ್ನು ಹಿಡಿದು ತಂದು ಅವುಗಳ ಆರೈಕೆ, ಶಸ್ತ್ರಚಿಕಿತ್ಸೆ, ಲಸಿಕೆ, ಶಸ್ತ್ರಚಿಕಿತ್ಸೆ ನಂತರ ಮೂರು ದಿನದ ಆರೈಕೆ ಹಾಗೂ ನಾಯಿಗಳನ್ನು ಪುನ ತಮ್ಮ ತಮ್ಮ ಸ್ವಸ್ಥಾನಕ್ಕೆ ಬಿಟ್ಟು ಬಿಡಲು ಪುರಸಭೆ ಪ್ರತಿಯೊಂದು ನಾಯಿಗಳ ಮೇಲೆ 1650 ರೂಪಾಯಿಗಳನ್ನು ವ್ಯಯಿಸುತ್ತಿದ್ದು ಕ್ಯಾಪ್ಟನ್ ಅನಿಮಲ್ ಕೇರ್ ಟ್ರಸ್ಟ್ ಟೆಂಡರ್ ಪಡೆದು ಕೊಂಡು ಪಶು ವೈದ್ಯ ಡಾ. ವಿಜಯ್ ಹಾಗೂ ಅವರ ತಂಡ ಶಸ್ತ್ರಚಿಕಿತ್ಸೆಯ ಜವಾಬ್ದಾರಿ ವಹಿಸಿಕೊಂಡು ಕಾರ್ಕಳ ತಾಲೂಕು ಪಶು ವೈದ್ಯಾಧಿಕಾರಿ ಡಾ. ವಾಸುದೇವ್ ಪೈಯವರ ಮೇಲುಸ್ತುವಾರಿ ಹಾಗೂ ಮಾರ್ಗದರ್ಶನ ನೀಡುತ್ತಿದ್ದಾರೆ

ಪ್ರತಿ ವರ್ಷ ಕೂಡ ಇದೇ ರೀತಿ ಪುರಸಭೆ ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಸಂಹರಿಸದೆ ಬೀದಿನಾಯಿಗಳ ಸಂಖ್ಯೆ ಹಾಗೂ ಉಪಟಳ ಕಡಿಮೆಗೊಳಿಸುವಲ್ಲಿ ಮಹತ್ತರವಾದ ಪಾತ್ರ ವಹಿಸಲಿದೆ ಎಂದು ಕಾರ್ಕಳ ಪುರಸಭಾ ಮುಖ್ಯಧಿಕಾರಿ ರೂಪ ಟಿ ಶೆಟ್ಟಿ ಮಾಹಿತಿ ನೀಡಿದ್ದಾರೆ 

ಅರುಣ್ ಭಟ್ ಕಾರ್ಕಳ 

Previous Post

ನಾಳೆಯಿಂದ ವಾರ್ಷಿಕ ಅಮರನಾಥ ಯಾತ್ರೆ ಬಿಗಿಭದ್ರತೆಯೊಂದಿಗೆ ಆರಂಭ..!!

Next Post

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿ..!!

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved