Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಂದೂರು : ವಿಶೇಷ ಚೇತನ ಮಕ್ಕಳ ಸಂಕಷ್ಟಕ್ಕೆ  ಶಾಸಕ ಗುರುರಾಜ್ ಗಂಟಿಹೊಳೆ ಸ್ಪಂದನೆ : ಸ್ಥಳಕ್ಕೆ ಭೇಟಿ, ಪರಿಶೀಲನೆ ..!!

Dhrishya News by Dhrishya News
03/07/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಬೈಂದೂರು: ಜುಲೈ 03:ತಂದೆ ತನ್ನ ವಿಶೇಷ ಚೇತನ ಮಗುವನ್ನು ಹೆಗಲಮೇಲೆ ಕೂರಿಸಿಕೊಂಡು ತೋಡು ದಾಟುವ ದೃಶ್ಯ ಕಂಡ ತಕ್ಷಣವೇ ಇದು ಕ್ಷೇತ್ರವ್ಯಾಪ್ತಿಯ ಯಳಜಿತ್ ನಲ್ಲಿ ನಡೆದಿರುವುದು ಎಂಬುದನ್ನು ಖಚಿತಪಡಿಸಿಕೊಂಡು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸ್ಥಳಕ್ಕೆ ಧಾವಿಸಿ, ಮಕ್ಕಳನ್ನು, ಅವರ ಪಾಲಕ ಪೋಷಕರನ್ನು ಭೇಟಿ ಮಾಡಿ ತುರ್ತು ಅಗತ್ಯಗಳಿಗೆ ಸ್ಪಂದಿಸಿ, ತಾತ್ಕಾಲಿಕ ವ್ಯವಸ್ಥೆ ರೂಪಿಸಿದರು.

ಸರಿಯಾದ ಕಾಲು ಸಂಕ ವ್ಯವಸ್ಥೆ ಇಲ್ಲದೆ ಕ್ಷೇತ್ರದ ಕೆಲವು ಭಾಗದಲ್ಲಿ ಆಗುತ್ತಿರುವ ಸಮಸ್ಯೆ ಗಮನಕ್ಕೆ ಬಂದಿದೆ. ತುರ್ತಾಗಿ ಅಲ್ಲೆಲ್ಲ ಏನು ಮಾಡಬೇಕು ಎಂಬುದನ್ನು ಕಾರ್ಯಕರ್ತರಿಗೆ ನಿರ್ದೇಶನಗಳನ್ನು ನೀಡಲಾಗಿದೆ. ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿಯಲ್ಲಿನ ಸಮಸ್ಯೆಯನ್ನು ಹತ್ತಿರದಿಂದ ಬಲ್ಲೇನು. ತಾತ್ಕಾಲಿಕ ನೆಲೆಯಲ್ಲೇ ಏನೆಲ್ಲ ಪರಿಹಾರ ಕಾರ್ಯ ಸೂಚಿಸಲು ಸಾಧ್ಯವೋ ಅದನ್ನು ತುರ್ತಾಗಿ ಮಾಡುತ್ತಿದ್ದೇವೆ. ಶಾಶ್ವತ ವ್ಯವಸ್ಥೆಯನ್ನು(ಕಾಲುಸಂಕ) ರೂಪಿಸಲು ಯೋಜನೆ ಸಿದ್ಧಪಡಿಸಲಾಗುವುದು ಎಂದು ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಹೇಳಿದರು.

ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿಯಲ್ಲಿ ವಾಸಿಸುತ್ತಿರುವ ಕುಟುಂಬದವರ 2 ವಿಶೇಷ ಚೇತನ ಮಕ್ಕಳಿಗೆ ಶಾಲೆಗೆ ಹೋಗಲು ಮಾರ್ಗ ಮಧ್ಯದಲ್ಲಿ ತೋಡಿನಿಂದ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ತಂದೆ ತನ್ನ ಮಗನನ್ನು ಎತ್ತಿಕೊಂಡು ಆ ಹೊಳೆಯನ್ನು ದಾಟುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ನಿಜಕ್ಕೂ ಇದು ಮನಕಲುಕುವ ದೃಶ್ಯ. ವಾಸ್ತವವೆಂದರೆ ಇಷ್ಟು ವರ್ಷಗಳಿಂದ ಜನಪ್ರತಿನಿಧಿಗಳು ಅಲ್ಲಿನ ಕಡೆ ಗಮನ ಹರಿಸದೇ ಇದ್ದಿದ್ದು ಸಮಸ್ಯೆಗೆ ಮೂಲ ಕಾರಣ. ಹೊಳೆ ದಾಟಿ ಶಾಲೆಗೆ ತೆರಳಲು ಕಾಲುಸಂಕವಿಲ್ಲದೆ ಪರದಾಡುತ್ತಿರುವ ಈ ದೃಶ್ಯವನ್ನು ನೋಡಿದ ಬೈಂದೂರಿನ ಶಾಸಕರಾದ ಗುರುರಾಜ್‌ ಗಂಟಿಹೊಳೆ ಅವರು ತಕ್ಷಣವೇ ಆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಅಲ್ಲಿನ ಕುಟುಂಬದವರನ್ನು ಭೇಟಿ ಮಾಡಿ ಮಳೆಗಾಲ ನಿಲ್ಲುವವರೆಗೆ ಮತ್ತು ಕಾಲುಸಂಕ ನಿರ್ಮಾಣ ಆಗುವವರೆಗೆ ಆ ಮಕ್ಕಳಿಗೆ ತೊಂದರೆ ಆಗಬಾರದೆಂದು ತಕ್ಷಣವೇ ಸ್ಥಳೀಯ ಕಾರ್ಯಕರ್ತರ ನೆರವಿನೊಂದಿಗೆ ಪ್ರತ್ಯೇಕ ಮನೆ ವ್ಯವಸ್ಥೆ ಮಾಡಲು ಯೋಜನೆ ರೂಪಿಸಿದರು. ಸ್ಥಳೀಯ ಕಾರ್ಯಕರ್ತರು ಹಾಗೂ ಪ್ರಮುಖರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

*ಸ್ವಂತ ಮನೆಯಲ್ಲಿಯೇ ವ್ಯವಸ್ಥೆಗೆ ಸಿದ್ಧ*

ಇದು ಸಾಧ್ಯವಾಗದೇ ಇದ್ದಲ್ಲಿ ಶಾಸಕರು ಸ್ವತಃ ತಮ್ಮ ಮನೆಗೇ ಬಂದು ವಾಸಿಸಬಹುದು ಎಂದು ಮಕ್ಕಳಿಗೆ ಧೈರ್ಯ ತುಂಬಿದರು ಮತ್ತು ಯಾವುದೇ ಕಾರಣಕ್ಕೂ ಶಿಕ್ಷಣ ನಿಲ್ಲಿಸಬಾರದು ಎಂದು ಮನವಿ ಮಾಡಿದರು.

*ಮಕ್ಕಳ ಆರೋಗ್ಯ ವ್ಯವಸ್ಥೆ*

ಈ ಭಾಗದಲ್ಲಿ ಶೀಘ್ರದಲ್ಲೇ ಕಾಲು ಸಂಕ ನಿರ್ಮಿಸುವುದರೊಂದಿಗೆ, ಆ ಮಕ್ಕಳ ಆರೋಗ್ಯದ ಬಗ್ಗೆಯೂ ಮುಂದಿನ ದಿನಗಳಲ್ಲಿ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

*ವಿಶೇಷ ಮಾದರಿ ಕಾಲುಸಂಕ*

ಬೈಂದೂರು ಕ್ಷೇತ್ರದಲ್ಲಿ ಕಾಲು ಸಂಕಗಳ ತುರ್ತು ಅಗತ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸಮೃದ್ಧ ಬೈಂದೂರು ಟ್ರಸ್ಟ್ ಹಾಗೂ ಬೆಂಗಳೂರಿನ ಅರುಣಾಚಲಂ ಟ್ರಸ್ಟ್ ಸಹಯೋಗದಲ್ಲಿ ಈಗಾಗಲೇ ಹಲವು ಕಡೆಗಳಲ್ಲಿ ಜಾಗ ಗುರುತಿಸಿ ವಿಶೇಷ ಮಾದರಿಯಲ್ಲಿ ಕಾಲು ಸಂಕ ನಿರ್ಮಾಣ ಮಾಡಲಾಗುತ್ತಿದೆ. ಎರಡು ಕಾಲು ಸಂಕಗಳು ಶೀಘ್ರ ಬಳಕೆಗೂ ಲಭ್ಯವಾಗಲಿದೆ.

Previous Post

ಜುಲೈ 9ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ :ಹವಾಮಾನ ಇಲಾಖೆ ಮುನ್ಸೂಚನೆ..!!

Next Post

ಮಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಏಕಾಏಕಿ ಕುಸಿದ ಮಣ್ಣು  : ಅವಶೇಷಗಳಡಿ ಸಿಲುಕಿರುವ ಇಬ್ಬರು ಕಾರ್ಮಿಕರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಏಕಾಏಕಿ ಕುಸಿದ ಮಣ್ಣು  : ಅವಶೇಷಗಳಡಿ ಸಿಲುಕಿರುವ ಇಬ್ಬರು ಕಾರ್ಮಿಕರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved