Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ : ಜೀವನ ಸಂಗಮ’ ಪೋರ್ಟಲ್ ಆರಂಭ..!!

Dhrishya News by Dhrishya News
07/07/2024
in मौसम
0
0
SHARES
87
VIEWS
Share on FacebookShare on Twitter

ಉತ್ತರ ಕನ್ನಡ : ಜುಲೈ 07:ವಿವಾಹ ಬಯಸುವ ಯುವಕ – ಯುವತಿಯರಿಗೆ ನೆರವಾಗುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲಾಡಳಿತವು ವಿನೂತನ ವೇದಿಕೆ ಕಲ್ಪಿಸುತ್ತಿದೆ.ʼಜೀವನ ಸಂಗಮʼ ಎಂಬ ಪೋರ್ಟಲ್‌ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ವಿನೂತನ ಪ್ರಯೋಗ ಕೈಗೊಂಡಿದೆ. ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆರಿಸಲು ಹಾಗೂ ಹೆಚ್‌ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆದು ಅವರು ವಿವಾಹವಾಗಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.

ಉತ್ತರಕನ್ನಡ ಜಿಲ್ಲಾಡಳಿತದ ವೆಬ್​​ಸೈಟ್ https://uttarakannada.nic.in/ನಲ್ಲಿ ‘ಜೀವನ ಸಂಗಮ’ ಎಂಬ ಪೋರ್ಟಲ್ ಅನ್ನು ಆರಂಭಿಸಲಾಗಿದೆ. ಜಿಲ್ಲೆಯಲ್ಲಿನ ಯುವ ರೈತರು, ವಿಕಲಚೇತನರು ಹಾಗೂ ವಿಧವೆಯರಿಗೆ ಸೂಕ್ತ ಸಂಗಾತಿಯ ಆಯ್ಕೆಯನ್ನು ಪರಿಚಯಿಸಲು ಹಾಗೂ ಹೆಚ್​ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧಗಳನ್ನು ಬೆಸೆದು, ಅವರು ವಿವಾಹವಾಗಲು ವೇದಿಕೆ ಸಿಗಲಿದೆ. ಈ ಮೂಲಕ ಅವರ ಬದುಕಿನಲ್ಲಿ ಸುಗಮ, ಅರ್ಥಪೂರ್ಣ ಸಂಬಂಧಗಳು ಏರ್ಪಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ.

ನೋಂದಣಿಗೆ ಶುಲ್ಕವಿಲ್ಲ: ಜೀವನ ಸಂಗಮ ಪೋರ್ಟಲ್​ಗೆ ಅರ್ಜಿ ಸಲ್ಲಿಸುವ ಎಲ್ಲ ಅರ್ಹ ಬಳಕೆದಾರರಿಗೆ ಅವರ ವಿವಾಹ ಸಂಬಂಧಗಳಲ್ಲಿ ಸುರಕ್ಷಿತ ಮತ್ತು ಗೌರವಾನ್ವಿತ ವಾತಾವರಣವನ್ನು ಖಾತ್ರಿಪಡಿಸುವ ಜೊತೆಗೆ, ವ್ಯಕ್ತಿಯ ಹಿನ್ನೆಲೆಯನ್ನು ಲೆಕ್ಕಿಸದೆ, ಸಂಬಂಧಗಳನ್ನು ಬಯಸುವ ವ್ಯಕ್ತಿಗಳಿಗೆ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ. ಈ ಪೋರ್ಟಲ್ ಸೇವೆ ಪಡೆಯಲು ಬಳಕೆದಾರರು ಯಾವುದೇ ಶುಲ್ಕಗಳಿಲ್ಲದೇ ನೋಂದಾಯಿಸಿಕೊಳ್ಳಬಹುದು.

ಆರ್ಥಿಕವಾಗಿ ಹಿಂದುಳಿದ ವರ್ಗದವರೂ ಒಳಗೊಂಡಂತೆ, ಶಿಕ್ಷಣದ ಕೊರತೆ ಮತ್ತು ಯಾವುದೇ ಉದ್ಯೋಗವಿಲ್ಲದ ಕಾರಣ ಸೂಕ್ತ ಜೀವನ ಸಂಗಾತಿ ಸಿಗದ ರೈತ ಯುವಕರಿಗೆ ಉತ್ತಮ ವೇದಿಕೆ ಒದಗಿಸಲಿದೆ.ಇದು ಎಲ್ಲ ಬಳಕೆದಾರರಿಗೆ ಅತ್ಯಂತ ಸುರಕ್ಷಿತ ಪೋರ್ಟಲ್ ಆಗಿದ್ದು, ಹೊಂದಾಣಿಕೆಯ ಪ್ರಕ್ರಿಯೆಯಲ್ಲಿ ಎಲ್ಲರ ಗೌಪ್ಯತೆ ಮತ್ತು ಘನತೆಗೆ ಆದ್ಯತೆ ನೀಡಲಾಗಿದೆ. ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ. ವಿವಾಹವಾಗಲು ಸಲ್ಲಿಸುವ ಅರ್ಜಿ ಮತ್ತು ಪ್ರೊಫೈಲ್​ಗಳನ್ನು ವ್ಯಕ್ತಿಯು ವಾಸವಾಗಿರುವ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸೇರಿದಂತೆ ಉತ್ತರ ಕನ್ನಡ ಜಿಲ್ಲಾಡಳಿತದ ವಿವಿಧ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಅರ್ಜಿದಾರರ ಪ್ರೊಫೈಲ್​ಗಳಲ್ಲಿನ ನೈಜತೆ ಮತ್ತು ವಿಶ್ವಾಸಾರ್ಹತೆಯನ್ನು ಅವರು ಖಚಿತಪಡಿಸುತ್ತಾರೆ.

ವಿವಾಹವಾಗಲು ಅರ್ಜಿ ಸಲ್ಲಿಸುವ ವ್ಯಕ್ತಿಯ ಹಿನ್ನೆಲೆ, ವಾಸಸ್ಥಳ, ಉದ್ಯೋಗ, ಕೌಟುಂಬಿಕ ಪರಿಸ್ಥಿತಿ, ಆತನ ಆದಾಯ, ಮಾನಸಿಕ ಮತ್ತು ದೈಹಿಕ ಆರೋಗ್ಯ ಸ್ಥಿತಿಗತಿ ಬಗ್ಗೆ ಜಿಲ್ಲೆಯ ವಿವಿಧ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ. ಅರ್ಹ ವ್ಯಕ್ತಿಗಳಿಗೆ ಮಾತ್ರ ಹೊಂದಾಣಿಕೆಯ ಮುಂದಿನ ಪ್ರಕ್ರಿಯೆಯಲ್ಲಿ ಮುಂದುವರೆಯಲು ಅವಕಾಶ ನೀಡಲಾಗುತ್ತದೆ.

ಉತ್ತರ ಕನ್ನಡದವರಿಗೆ ಮಾತ್ರ:ಈ ಸೇವೆಯು ಎಲ್ಲ ಧರ್ಮದವರಿಗೂ ಮುಕ್ತವಾಗಿದ್ದು, ಸಾರ್ವಜನಿಕರು ತಮ್ಮ ಧಾರ್ಮಿಕ ಅದ್ಯತೆಗಳನ್ನು ಮ್ಯಾಚ್ ಮೇಕಿಂಗ್‌ಗೆ ನಿರ್ದಿಷ್ಟಪಡಿಸಲು ಅವಕಾಶ ನೀಡುವುದರ ಜೊತೆಗೆ, ತಮ್ಮದೇ ಆದ ಜಾತಿಯೊಳಗೆ ಹೊಂದಾಣಿಕೆಗಳನ್ನು ಆಯ್ಕೆ ಮಾಡಬಹುದು. ಜೊತೆಗೆ, ಅಂತರ್ಜಾತಿ ಆಯ್ಕೆಗಳಿಗೂ ಅವಕಾಶವಿದ್ದು, ವೈಯಕ್ತಿಕ ಆದ್ಯತೆಗಳ ಆಧಾರದ ಮೇಲೆ ತಮಗೆ ಇಚ್ಚಿಸುವ ಹೊಂದಾಣಿಕೆಯನ್ನು ಆಯ್ಕೆ ಮಾಡಬಹುದು. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ – ಯುವತಿಯರಿಗೆ ಮಾತ್ರ ಈ ವಿವಾಹ ಹೊಂದಾಣಿಕೆಗೆ ಅವಕಾಶವಿದೆ.

 

ಅಂತರ್ಜಾತಿ ಮತ್ತು ವಿಕಲಚೇತನರನ್ನು ವಿವಾಹವಾಗುವವರಿಗೆ ಸರ್ಕಾರದಿಂದ ದೊರೆಯುವ ಪ್ರೋತ್ಸಾಹ ಧನ ಸೇರಿದಂತೆ ಎಲ್ಲ ರೀತಿಯ ನೆರವು ಒದಗಿಸಲಾಗುವುದು. 10ಕ್ಕಿಂತ ಹೆಚ್ಚು ಜೋಡಿಗಳು ಒಪ್ಪಿಗೆ ನೀಡಿದಲ್ಲಿ ವಿವಿಧ ಸಂಘ – ಸಂಸ್ಥೆಗಳ ನೆರವಿನಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಚಿಂತನೆ ಇದೆ. ಜಿಲ್ಲೆಯ ಅನಾಥಾಶ್ರಮಗಳಲ್ಲಿನ ಯುವತಿಯರಿಗೂ ಸಹ ಈ ಪೋರ್ಟಲ್ ಮೂಲಕ ಸೂಕ್ತ ಜೀವನ ಸಂಗಾತಿ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Previous Post

ಉದ್ಯೋಗಾವಕಾಶ :ಮಣಿಪಾಲದಲ್ಲಿ ಜುಲೈ 9ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

Next Post

ಬ್ರಹ್ಮಾವರ:ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘ ಉಡುಪಿ ವಲಯ ಸಮ್ಮೇಳನ : ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಒತ್ತಾಯ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ:ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘ ಉಡುಪಿ ವಲಯ ಸಮ್ಮೇಳನ : ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಒತ್ತಾಯ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved