Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

22 ದಿನದಲ್ಲಿ 20 ಲಕ್ಷ ಸಂಗ್ರಹಿಸಿ ಕಸ್ತೂರ್ಬಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕನ ಚಿಕಿತ್ಸೆಗೆ ನೇರವಾದ ಹೋಮ್ ಡಾಕ್ಟರ್ ಫೌಂಡೇಶನ್..!!

Dhrishya News by Dhrishya News
20/07/2024
in ಸುದ್ದಿಗಳು
0
0
SHARES
34
VIEWS
Share on FacebookShare on Twitter

ಮಣಿಪಾಲ, 20 ಜುಲೈ 2024:ಅಪ್ಲಾಸ್ಟಿಕ್ ಅನೀಮಿಯಾ ದಿಂದ ಬಳಲುತ್ತಿರುವ 15 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿಯೊಂದೆ ಪರಿಹಾರ ವಾಗಿತ್ತು. ಇದಕ್ಕೆ ಸುಮಾರು 20 ರಿಂದ 20 ಲಕ್ಷ ಖರ್ಚು ಹಾಗಬಹುದೆಂದು ಚಿಕಿತ್ಸೆ ನೀಡುತ್ತಿರುವ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯರು ತಿಳಿಸಿದ್ದರು.

 ಬಡವರಾಗಿದ್ದ ಕುಟುಂಬಸ್ಥರಿಗೆ ಇದನ್ನು ಭರಿಸುವುದು ಕಷ್ಟವಾಗಿತ್ತು. ಈ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದ ನೇತೃತ್ವವಹಿಸಿದ್ದ ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಜಿ ವಿಭಾಗದ ಮುಖ್ಯಸ್ಥರಾದ ಡಾ ವಾಸುದೇವ್ ಭಟ್ ತಂಡದವರು ಹೋಂ ಡಾಕ್ಟರ್ ಫೌಂಡೇಶನ್ ನ ನೇತೃತ್ವ ವಹಿಸಿರುವ ಡಾ. ಶಶಿಕಿರಣ್ ಶೆಟ್ಟಿ ಅವರಿಗೆ ಸಹಕರಿಸುವಂತೆ ಮನವಿ ಮಾಡಿದರು.

 ಅವರು ತಮ್ಮ ಫೌಂಡೇಶನ್ ನ ಸದಸ್ಯರು ಮತ್ತು ದಾನಿಗಳ ಸಹಕಾರದೊಂದಿಗೆ 22 ದಿನದಲ್ಲಿ 20 ಲಕ್ಷ ಸಂಗ್ರಹಿಸಿ ಬಾಲಕನ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಇದರ ಕುರಿತು ನಿಧಿ ಹಸ್ತಾಂತರ ಮತ್ತು ಶುಭ ಕೋರುವ ಕಾರ್ಯಕ್ರಮವು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಹಕಾರದೊಂದಿಗೆ ಮಹಿಳಾ ಮತ್ತು ಮಕ್ಕಳ ವಿಭಾಗದ ಸಭಾಂಗಣದಲ್ಲಿ ಶುಕ್ರವಾರದಂದು ನಡೆಯಿತು.

 

 ಈ ಸಂದರ್ಭದಲ್ಲಿ ಮಾತನಾಡಿದ ಡಾ ಶಶಿಕಿರಣ್ ಶೆಟ್ಟಿ” ನಾವು ಈಗಾಗಲೇ ಸಣ್ಣ ಮೊತ್ತದ ನೆರವು ನೀಡುವ ಮೂಲಕ ಹಲವಾರು ನೊಂದವರಿಗೆ, ಅಶಕ್ತರಿಗೆ ಸಹಾಯ ಮಾಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಸಂಗ್ರಹಣಾ ಉದ್ದೇಶದೊಂದಿಗೆ ಯಶಸ್ವಿಯಾಗಿದ್ದೇವೆ” ಎಂದರು. ಸಣ್ಣ ಮೊತ್ತದಿಂದ ದೊಡ್ಡ ಮೊತ್ತ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದರು. 

ಈ ಸಂದರ್ಭದಲ್ಲಿ ಮಾತನಾಡಿದ ಕೆ ಎಂ ಸಿ ಮಣಿಪಾಲದ ಸಹ ಡೀನ್ ಡಾ ನವೀನ್ ಸಾಲಿನ್ಸ್ ಅವರು ಹೋಂ ಡಾಕ್ಟರ್ ಫೌಂಡೇಶನ್ ಸಂಸ್ಥೆಯ ಈ ನಿಸ್ವಾರ್ಥ ಸೇವೆಯನ್ನು ಅಭಿನಂದಿಸಿದರು. “ಇದು ಇಡೀ ಸಮಾಜಕ್ಕೆ ಮಾದರಿಯಾಗಿದೆ ಇನ್ನಷ್ಟು ದಾನಿಗಳು ಮತ್ತು ಸಂಸ್ಥೆಗಳು ಬಡ ಮಕ್ಕಳ ಚಿಕಿತ್ಸೆಗೆ ಸಹಕರಿಸಬೇಕು” ಎಂದರು. 

 

ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ ವಾಸುದೇವ್ ಭಟ್ ಅವರು, ” ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿದರೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಯಲ್ಲಿ ಮಾತ್ರ ಮಕ್ಕಳ ಬೋನ್ ಮ್ಯಾರೋ ಟ್ರಾನ್ಸಪ್ಲಾಂಟೇಷನ್ ಮಾಡುತ್ತಿದ್ದೇವೆ.” ಎಂದರು.

ಈ ಸಂದರ್ಭದಲ್ಲಿ ಹಣ ಸಂಗ್ರಹಣೆಗೆ ಸಹಕರಿಸಿದ ನಿಸ್ವಾರ್ಥ ದಾನಿಗಳನ್ನು ಅಭಿನಂದಿಸಲಾಯಿತು. ಡಾ ಶಶಿಕಿರಣ್ ಶೆಟ್ಟಿ ಅವರನ್ನು ಆಸ್ಪತ್ರೆ ಪರವಾಗಿ ಅಭಿನಂದಿಸಲಾಯಿತು.

ಸಹಾಯಕ ವೈದ್ಯರು, ಹೋಂ ಡಾಕ್ಟರ್ ಫೌಂಡೇಶನ್ ನ ಸದಸ್ಯರು, ಪತ್ರಕರ್ತ ಜನಾರ್ದನ್ ಕೊಡವೂರು, ಮೋಹನ್ ಶೆಟ್ಟಿ ಹಾಗೂ ದಾನಿಗಳು ಉಪಸ್ಥಿತರಿದ್ದರು.

Previous Post

ಶಾಸನೋಕ್ತ ಆಶಯ ‘ಕ್ಷಿತಿರೂಹ ನೋಂಪಿ’ (ಒಪ್ಪಿಕೋ ಪಚ್ಚೆವನಸಿರಿ ಜಾಗೃತಿ)ಮೂಡಬಿದಿರೆ ಜೈನ ಕಾಶಿಯಲ್ಲಿ ಅನುಷ್ಠಾನ – ಹಸುರು ಕಣಜ ಸ್ಥಾಪನೆಗೆ ಚಾಲನೆ..!!

Next Post

ಬೈಂದೂರು :ವಿಪರೀತ ಮಳೆ ಮತ್ತು ನೆರೆ ಹಲವಾರು ಎಕರೆ ಭತ್ತದ ಕೃಷಿ ನಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು :ವಿಪರೀತ ಮಳೆ ಮತ್ತು ನೆರೆ ಹಲವಾರು ಎಕರೆ ಭತ್ತದ ಕೃಷಿ ನಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

23/03/2026
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

23/03/2026
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

23/03/2026
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

23/03/2026

Recent News

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

23/03/2026
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

23/03/2026
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

23/03/2026
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

23/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved