Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಾಸಕ ಸುನೀಲ್ ಕುಮಾರ್ ಅವರಿಂದ ಹಿಂದೂ‌ ಭಾವನೆಗಳಿಗೆ ದಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ..!!

ನಕಲಿ ಪರಶುರಾಮ ಪ್ರತಿಮೆ ನಿರ್ಮಿಸಿದ ಶಾಸಕರ ವಿರುದ್ಧದ ಪ್ರತಿಭಟನೆಯಲ್ಲಿ ಸಚಿವರ ಭಾಗಿ: ಎಸ್ಐಟಿ ತನಿಖೆಗೆ ಒತ್ತಾಯಿಸಿ ಸಿಎಂಗೆ ಮನವಿ..!!

Dhrishya News by Dhrishya News
23/07/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಬೆಂಗಳೂರು :ಜುಲೈ 23:ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ಕುಮಾರ್‌ ಹಿಂದೂಗಳ ಭಾವನೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವರು, ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಸುಳ್ಳನ್ನ ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್ ಕುಮಾರ್ ಅವರಿಗಿದೆ. ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿರುವೆ, ನನಗೂ ಗೊತ್ತಿದೆ ಎಷ್ಟು ಸಮಯ ಬೇಕಾಗುತ್ತದೆ ಎಂದು. ಆದರೆ ಕೇವಲ 3 ತಿಂಗಳಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಲಾಗಿದೆ. ಇಂಥ ಪ್ರತಿಮೆಗಳನ್ನು ನಿರ್ಮಿಸುವಾಗ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತದೆ. ಚುನಾವಣೆಗಾಗಿ ಕೇವಲ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಸಿದ್ದು ಕೇಳಿ ಆಶ್ಚರ್ಯ ಉಂಟಾಯಿತು ಎಂದರು.

ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿಗರಿಗೆ ಕರಾವಳಿ ಜನತೆ ಮುಂದಿನ ದಿನಗಳಲ್ಲಿ ಪಾಠ ಕಲಿಸಬೇಕಿದೆ. ರಾಮಮಂದಿರ ನಿರ್ಮಾಣಗೊಂಡಿರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದ್ದು, ಕರಾವಳಿ ಜನರು ಕೂಡ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅಧಿವೇಶನದಲ್ಲಿ ಸುನೀಲ್ ಕುಮಾರ್ ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ನಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನೀಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು.

ಈ ವೇಳೆ ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ‌ಉದಯ್ ಕುಮಾರ್ ಶೆಟ್ಟಿ ಮುನಿಯಾಳ್, ಮಿಥುನ್ ರೈ, ದಿನೇಶ್ ಹೆಗ್ಡೆ ಮೊಳಹಳ್ಳಿ, ಸುಧೀರ್ ಕುಮಾರ್ ಮೊರಳ್ಳಿ, ಉಡುಪಿ‌ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಹರೀಶ್ ಕುಮಾರ್, ಕಿಶನ್ ಹೆಗ್ಡೆ, ಕಿರಣ್ ಹೆಗ್ಡೆ, ರಮೇಶ್ ಕಾಂಚನ್, ಕೃಪಾ ಆಳ್ವ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

  •  ಎಸ್ ಐಟಿ ತನಿಖೆಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ

ಪರಶುರಾಮ ಥೀಮ್ ನಿರ್ಮಾಣದಲ್ಲಿ ಆಗಿರುವ ಅವ್ಯವಹಾರ ಹಾಗೂ ನಕಲಿ ಪರಶುರಾಮ ಪ್ರತಿಮೆ ನಿರ್ಮಾಣದ ಪ್ರಕರಣವನ್ನು ವಿಶೇಷ ತನಿಖಾ ದಳ (ಎಸ್ ಐಟಿ)‌ ರಚಿಸಿ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರು ನಿಯೋಗದಲ್ಲಿ ಇದ್ದರು.

Previous Post

ಉಡುಪಿ :ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಖಂಡಿಸಿ ಪ್ರತಿಭಟನೆ..!!

Next Post

ಕೆಎಂಸಿಯಿಂದ ವಿಶೇಷ ಗಾಯ ನಿಭಾವಣೆಯ ಕಾರ್ಯಾಗಾರ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೆಎಂಸಿಯಿಂದ ವಿಶೇಷ ಗಾಯ ನಿಭಾವಣೆಯ ಕಾರ್ಯಾಗಾರ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026

Recent News

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved