Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೆಎಂಸಿಯಿಂದ ವಿಶೇಷ ಗಾಯ ನಿಭಾವಣೆಯ ಕಾರ್ಯಾಗಾರ ಆಯೋಜನೆ..!!

Dhrishya News by Dhrishya News
23/07/2024
in ಸುದ್ದಿಗಳು
0
ಕೆಎಂಸಿಯಿಂದ ವಿಶೇಷ ಗಾಯ ನಿಭಾವಣೆಯ ಕಾರ್ಯಾಗಾರ ಆಯೋಜನೆ..!!
0
SHARES
40
VIEWS
Share on FacebookShare on Twitter

ಮಣಿಪಾಲ 23, ಜುಲೈ 2024 : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ಕಸ್ತೂರ್ಬಾ ಮೆಡಿಕಲ್‌ ಹಾಸ್ಪಿಟಲ್‌ [ಕೆಎಂಸಿ] ಯಲ್ಲಿ ಕಾರ್ಯನಿರ್ವಹಿಸುವ ದ ಮಣಿಪಾಲ್‌ ಸೆಂಟರ್‌ ಫಾರ್‌ ಇಂಟರ್‌ಪ್ರೊಫೆಶನಲ್‌ ಅಡ್ವಾನ್ಸ್‌ಡ್‌ ಹೆಲ್ತ್‌ ಕೇರ್‌, ಸೆಂಟರ್‌ ಫಾರ್‌ ರೀ-ಸಸ್ಸಿಟೇಶನ್‌, ಅಕ್ಯೂಟ್‌ ಕೇರ್‌ ಮತ್ತು ಸೆಮಲ್ಟೇಶನ್‌ ಟ್ರೆನಿಂಗ್‌ [ಸಿಆರ್‌ಇಎಸ್‌ಟಿ], ಸೆಂಟರ್‌ ಫಾರ್‌ ಕ್ಲಿನಿಕಲ್‌ ಆ್ಯಂಡ್‌ ಇನ್ನೋವೇಟಿವ್‌ ಫೋರೆನ್ಸಿಕ್ಸ್‌-ಇವುಗಳ ಸಹಭಾಗಿತ್ವದಲ್ಲಿ ವಿವಿಧ ರೀತಿಯ ಆಘಾತ ಮತ್ತು ಗಾಯಗಳ ನಿರ್ವಹಣೆಯ ಕುರಿತ ಕಾರ್ಯಾಗಾರಗಳನ್ನು ಜುಲೈ 19, 2024 ರಂದು ಆಯೋಜಿಸಲಾಗಿದ್ದು, ವ್ರಣಗಳಿಗೆ ಪ್ರತಿಕ್ರಿಯಾತ್ಮಕವಾಗಿ ಕೈಗೊಳ್ಳುವ ಆರೈಕೆ ಕ್ರಮಗಳ ಬಗ್ಗೆ ಮತ್ತು ಗಾಯಗಳು ತೀವ್ರಗೊಂಡು ಪ್ರಾಣಾಪಾಯವಾಗುವುದನ್ನು ತಪ್ಪಿಸುವ ಬಗ್ಗೆ ಈ ಕಾರ್ಯಾಗಾರದಲ್ಲಿ ತರಬೇತಿಯನ್ನು ನೀಡಲಾಯಿತು. ತುರ್ತು ಸಂದರ್ಭದಲ್ಲಿ ತರಬೇತಿ ಹೊಂದಿದ ಪ್ರತಿಪ್ರೇಷಕ [ರೆಸ್ಪಾಂಡರ್‌] ರು ಆಘಾತಕ್ಕೊಳಗಾದವರ ಸ್ಥಿತಿಯನ್ನು ಸ್ಥಿರಗೊಳಿಸಿ, ಸಂಪನ್ಮೂಲಗಳನ್ನು ಬಳಸಿ, ಅವರನ್ನು ಹೇಗೆ ಬದುಕುಳಿಯುವಂತೆ ಮಾಡಬಹುದು ಎಂಬ ವಿಚಾರದ ಬಗ್ಗೆ ಕಾರ್ಯಾಗಾರದ ಆಶಯ ಕೇಂದ್ರೀಕೃತವಾಗಿತ್ತು. 

 

ಉಡುಪಿಯ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಪರಮೇಶ್ವರ ಎ. ಹೆಗ್ಡೆ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತ, ‘ಆಘಾತಕ್ಕೊಳಗಾಗುವವರ ಗಾಯವನ್ನು ಆರೈಕೆ ಮಾಡುವ ಪ್ರಥಮ ಪ್ರತಿಪ್ರೇಷಕ [ಫರ್ಸ್ಟ್‌ ರೆಸ್ಪಾಂಡರ್‌] ರ ಕೌಶಲವನ್ನು ಹೆಚ್ಚಿಸುವುದು ಇಂದಿನ ಅಗತ್ಯವಾಗಿದೆ. ಆಘಾತಗಳನ್ನು ಪ್ರಾಯೋಗಿಕವಾಗಿ ನಿರ್ವಹಿಸಿ ಮಾನವೀಯವಾಗಿ ಸ್ಪಂದಿಸುವ ನೆಲೆಯಲ್ಲಿ ಉಡುಪಿಗೆ ಅತ್ಯುನ್ನತ ಸ್ಥಾನ ದೊರಕಿಸಿಕೊಡಬೇಕಿದೆ. ಈ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರಗಳ ಪಾತ್ರ ಮಹತ್ತ್ವದ್ದಾಗಿದೆ’ ಎಂದರು. 

ಕೆಎಂಸಿಯ ತುರ್ತು ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಮಲ್‌ ಕೃಷ್ಣನ್‌, ನುರಿತ ದಾದಿಯಾಗಿ ಸಕ್ರಿಯವಾಗಿರುವ ಪ್ರಸನ್ನ ಕುಮಾರ, ಫೋರೆನ್ಸಿಕ್‌ ಸಾಯನ್ಸಸ್‌ ಪ್ರೊಫೆಸರ್‌ ಡಾ. ವಿನೋದ್‌ ನಾಯಕ್‌, ಪ್ಲಾಸ್ಟಿಕ್‌ ಸರ್ಜರಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ತನ್ವಿ ರಾವ್‌, ಮಾಹೆಯ ಫೈಮೆರ್‌ ಇಂಟರ್‌ನೇಶನಲ್‌ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕರಾದ ಮತ್ತು ಮಣಿಪಾಲ್‌ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಇನ್‌ ಇಂಟರ್‌ಪ್ರೊಫೆಶನಲ್‌ ಎಡ್ವಾನ್ಸ್‌ಡ್‌ ವೂಂಡ್‌ ಕೇರ್‌ನ ಸಂಚಾಲಕರಾದ ಡಾ. ಎಲ್ಸಾ ಸನಾತೊಂಬಿ ದೇವಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ವಿವಿಧ ಆಘಾತಗಳ ನಿರ್ವಹಣೆಯಲ್ಲಿ ಪ್ರಥಮ ಪ್ರತಿಪ್ರೇಷಕ [ಫರ್ಸ್ಟ್‌ ರೆಸ್ಪಾಂಡರ್‌] ನ ಪಾತ್ರದ ಕುರಿತು ವಿವರಿಸಿದರು.

 

ಪಿಎಚ್‌ಡಿ ವಿದ್ಯಾರ್ಥಿಗಳಾದ ಶ್ರೀನಿಧಿ ಜೋಗಿ ಮತ್ತು ಇಫೆನ್ಸಿಯಾ ಡಿ. ವಾಹ್‌ಲ್ಯಾಂಗ್‌ ಅವರು ಕಾರ್ಯಾಗಾರದ ಸಂಯೋಜಕರಾಗಿ ಸಹಕರಿಸಿ, ಕಾರ್ಯಾಗಾರದಲ್ಲಿ ಭಾಗಿಯಾದವರ ಪ್ರಾಯೋಗಿಕ ಅನುಭವ ಮತ್ತು ಪ್ರತಿಪ್ರೇಷಕ ಸಾಮರ್ಥ್ಯ ಅಧಿಕವಾಗುವಂಥ ಅಭ್ಯಾಸಗಳನ್ನು ನಡೆಸಿಕೊಟ್ಟರು. 

ಮಣಿಪಾಲ್‌ ಕಾಲೇಜ್‌ ಆಪ್‌ ನರ್ಸಿಂಗ್‌ನ ಸಹ-ಡೀನ್‌ ಆಗಿರುವ ಡಾ. ಟ್ರೆಸ್ಸಿ ಟ್ರೀಸಾ ಜೋಸ್‌, ಐವೂಂಡ್‌ ಗ್ಲೋಬಲ್‌ನ ನಿರ್ದೇಶಕ ಪ್ರೊ ಸೆಲ್ವಮ್‌ ವಾಟ್ಸ್‌ ಅವರು ಕಾರ್ಯಾಗಾರದ ಮಹತ್ತ್ವವನ್ನು ವಿವಿರಿಸಿ, ಆಯೋಜಕರನ್ನು ಅಭಿನಂದಿಸಿದರು.

ಮಣಿಪಾಲ ಮತ್ತು ಮಂಗಳೂರು ಕೆಎಂಸಿಯ ವಿವಿಧ ವಿಭಾಗಗಳ ಸಿಬಂದಿಗಳು. ದಾದಿಯರು, ಪೊಲೀಸ್‌ ಇಲಾಖೆಯ ಸಿಬಂದಿಗಳು ಈ ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಿದರು

Previous Post

ಶಾಸಕ ಸುನೀಲ್ ಕುಮಾರ್ ಅವರಿಂದ ಹಿಂದೂ‌ ಭಾವನೆಗಳಿಗೆ ದಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ..!!

Next Post

ನವೀನ ಮಾದರಿಯ ಎಂಡೋಸ್ಕೋಪಿಕ್ ಕಾರ್ಯವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನವೀನ ಮಾದರಿಯ ಎಂಡೋಸ್ಕೋಪಿಕ್ ಕಾರ್ಯವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ..!!

ನವೀನ ಮಾದರಿಯ ಎಂಡೋಸ್ಕೋಪಿಕ್ ಕಾರ್ಯವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved