Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ : ಕಾರುಗಳಲ್ಲಿ ಪೊಲೀಸ್‌ ಹಾಗೂ ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದ ಅಪರಿಚಿತರ ತಂಡ : ಸ್ಥಳೀಯರಲ್ಲಿ ಆತಂಕ..!!

Dhrishya News by Dhrishya News
29/07/2024
in ಸುದ್ದಿಗಳು
0
0
SHARES
110
VIEWS
Share on FacebookShare on Twitter

ಕುಂದಾಪುರ: ಜುಲೈ 29: ಬೆಳಗಿನ ಜಾವ ಎರಡು ಕಾರುಗಳಲ್ಲಿ ಪೊಲೀಸ್‌ ಹಾಗೂ ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದ ಅಪರಿಚಿತರ ತಂಡವೊಂದು ಊರಿನಲ್ಲಿ ಆತಂಕದ ವಾತಾವರಣ ಸ್ರಷ್ಟಿ ಮಾಡಿದೆ.

ಈ ತಂಡದ ವರ್ತನೆ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದ್ದು, ಕೋಟ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ದೂರು ನೀಡಿರುವ ಮನೆ ಮಾಲಕಿ ಮಣೂರು ಗ್ರಾಮದ ಕವಿತಾ (34) ಅವರು, ಜು.25ರಂದು ಬೆಳಗ್ಗೆ 8.30 ಗಂಟೆಗೆ ಮನೆಯ ಹೊರಗಿನಿಂದ ಯಾರೋ ಬಾಗಿಲು ಬಡಿದ ಶಬ್ದವಾ ಗಿತ್ತು. ಆಗ ನಿರ್ಲಕ್ಷಿಸಿದ್ದು, 9 ಗಂಟೆಗೆ ಹೊರಗೆ ಬಂದು ನೋಡಿದಾಗ ಯಾರೂ ಇರಲಿಲ್ಲ.

ಈ ನಡುವೆ ಮನೆಯ ಸಿಸಿಟಿವಿ ಮೇಲೆ ನಿಗಾ ಇಡುತ್ತಿರುವ ಕುಂದಾಪುರದ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಕೃಷ್ಣ ಅವರು ಕರೆ ಮಾಡಿ, ನಿಮ್ಮ ಮನೆಗೆ ಸ್ವಿಫ್ಟ್‌ ಮತ್ತು ಇನೋವಾ ಕಾರಿನಲ್ಲಿ 6-8 ಜನ ಮಂದಿ ಆಗಮಿಸಿ ಗೇಟು ತೆರೆಯಲು ಯತ್ನಿಸಿದ್ದರು. ಸಾಧ್ಯವಾಗದಿದ್ದಾಗ ಕಾಂಪೌಂಡ್‌ ಹಾರಿ ಮನೆಗೆ ಬಂದು ಬಾಗಿಲು ಹಾಗೂ ಕಿಟಕಿಯನ್ನು ಬಲಾತ್ಕಾರವಾಗಿ ತೆಗೆಯಲು ಪ್ರಯತ್ನಿಸಿರುವುದಾಗಿ ತಿಳಿಸಿದ್ದಾರೆ.

ಅಪರಿಚಿತರು ಮನೆಗೆ ಅಕ್ರಮ ಪ್ರವೇಶ ಮಾಡಿ, ಮನೆಯ ಬಾಗಿಲು ತೆರೆಯಲು ಯತ್ನಿಸಿ, ಗೇಟಿಗೆ ಹಾನಿ ಮಾಡಿ ವಾಪಸ್‌ ಹೋಗಿರುವುದಾಗಿ ತಿಳಿಸಿದ್ದಾರೆ.

ಒಂದು ಕಾರಿನಲ್ಲಿ ಅಧಿಕಾರಿಗಳ ಸೋಗಿನಲ್ಲಿ ಸಫಾರಿ ಧರಿಸಿದ್ದ ಒಬ್ಬ ಹಾಗೂ ಇತರ ನಾಲ್ವರು, ಮತ್ತೂಂದು ಕಾರಿನಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿದ್ದ ಒಬ್ಬ ಹಾಗೂ ಇತರರು ಸೇರಿ ಒಟ್ಟು 8 ಮಂದಿ ಇದ್ದರು ಎಂದು ಶಂಕಿಸಲಾಗಿದೆ.

6 ಜನ ಇರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಳೆಹನಿಯುತ್ತಿದ್ದಾಗ ಕಾರಿನಿಂದ ಇಳಿದ ತಂಡ ಗೇಟು ತೆರೆಯಲು ಯತ್ನಿಸಿದೆ. ಸಾಧ್ಯವಾಗದಿದ್ದಾಗ ಗೇಟಿಗೆ ಗುದ್ದಿ ಸದ್ದು ಮಾಡಿದೆ. ಆ ಬಳಿಕ ಇನ್ನೊಂದು ಮಗ್ಗುಲಿನಿಂದ ಹೋಗಿ ಕಾಂಪೌಂಡ್‌ನಿಂದ ಬಾವಿಕಟ್ಟೆಗೆ ಇಳಿದು ಅಂಗಳಕ್ಕೆ ಹೋಗಿ ಮುಖ್ಯ ಬಾಗಿಲ ಬಳಿ ಹೋಗಿದೆ. ಆಗಲೂ ಬಾಗಿಲು ತೆರೆಯದಿದ್ದಾಗ ತಂಡ ಮರಳಿದೆ.

ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಸಿಬಂದಿ ಉದ್ಯಮಿ ಮನೆಯ ಸಿಸಿಟಿವಿಯ ಲೈವ್‌ ವೀಕ್ಷಣೆ ಮಾಡುತ್ತಿ ದ್ದಾಗ ಎರಡು ವಾಹನಗಳಲ್ಲಿ ಆಗಂತು ಕರು ಆಗಮಿಸಿದ್ದುದು ಗೊತ್ತಾಗಿದೆ.

ಕೂಡಲೇ ಸಿಬಂದಿಯು ಮನೆಯವರಿಗೆ ಕರೆ ಮಾಡಿದ್ದು, ಆ ಕರೆಯನ್ನು ಮನೆ ಯವರು ಸ್ವೀಕರಿಸಲಿಲ್ಲ. ಬಳಿಕ ಸಂಸ್ಥೆಯ ಮಾಲಕ ಕೃಷ್ಣ ಕರೆ ಮಾಡಿದಾಗ ಮನೆಯವರು ಕರೆ ಸ್ವೀಕರಿಸಿದ್ದು, ಮನೆಯ ಹೊರಗಡೆ ನಡೆಯುತ್ತಿರುವ ಸಂಗತಿಯನ್ನು ತಿಳಿಸಿದ್ದಾರೆ. ಆಗಮಿಸಿದ ತಂಡ ಐಟಿ, ಇ.ಡಿ.ಯವರು ಆಗಿರಬಹುದು ಎಂಬ ಅನುಮಾನ ಮನೆಯವರಲ್ಲಿತ್ತು ಎನ್ನಲಾಗಿದೆ 

Previous Post

ಒಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮೊದಲ ಪದಕ : ಮಹಿಳೆಯರ 10 ಮೀ. ಏರ್ ಪಿಸ್ತೂಲ್ ನಲ್ಲಿ ಕಂಚಿನ ಪದಕ ಗೆದ್ದು ಸಂಭ್ರಮಿಸಿದ ಶೂಟರ್ ಮನು ಭಾಕರ್..!!

Next Post

ಉಡುಪಿ : ಚಿರತೆ ಚಲನವಲನ ಪತ್ತೆಹಚ್ಚಲು ಕ್ಯಾಮರಾ ಅಳವಡಿಕೆ: ಇನ್ನೂ ಸುಳಿವಿಲ್ಲ – ಭೀತಿಯಲ್ಲಿ ಸ್ಥಳೀಯರು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಚಿರತೆ ಚಲನವಲನ ಪತ್ತೆಹಚ್ಚಲು ಕ್ಯಾಮರಾ ಅಳವಡಿಕೆ: ಇನ್ನೂ ಸುಳಿವಿಲ್ಲ - ಭೀತಿಯಲ್ಲಿ ಸ್ಥಳೀಯರು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

23/03/2026
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

23/03/2026
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

23/03/2026
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

23/03/2026

Recent News

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

23/03/2026
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

23/03/2026
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

23/03/2026
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

23/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved