Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ನಿವೃತ್ತಿ ಘೋಷಣೆ ..!!

Dhrishya News by Dhrishya News
08/08/2024
in ಸುದ್ದಿಗಳು
0
0
SHARES
53
VIEWS
Share on FacebookShare on Twitter

ನವದೆಹಲಿ, ಆಗಸ್ಟ್‌ 08: ಪ್ಯಾರಿಸ್ ಒಲಿಂಪಿಕ್ಸ್ 2024ರಿಂದ ಅನರ್ಹಗೊಂಡ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಫೈನಲ್‌ ಪ್ರವೇಶಿಸಿದ ಬಳಿಕ ಅನರ್ಹಗೊಂಡಿದ್ದ ಅವರು ಬಹಳ ನೊಂದಿದ್ದರು. ಬುಧವಾರದ ಬೆಳವಣಿಗೆಗಳ ಬಳಿಕ ವಿನೇಶ್ ಫೋಗಟ್ ನಿವೃತ್ತರಾಗುವುದಾಗಿ ಹೇಳಿದ್ದಾರೆ.

ಹರ್ಯಾಣ ಮೂಲದ 29 ವರ್ಷದ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಪದಕ ತಂದು ಕೊಡುವ ಭರವಸೆ ಮೂಡಿಸಿದ್ದರು. ಇದಕ್ಕೆ ಕೇವಲ ಒಂದು ಹೆಜ್ಜೆ ಬಾಕಿ ಇತ್ತು. 50 ಕೆಜಿ ಮಹಿಳಾ ಕುಸ್ತಿ ಅಖಾಡದಲ್ಲಿ ಫೈನಲ್ ಪ್ರವೇಶಿಸಿದ ಮೊದಲಿಗರು ಎಂಬ ಹೆಗ್ಗಳಿಕೆಯನ್ನು ಅವರು ಪಡೆದಿದ್ದರು.

 

ವಿನೇಶ್ ಫೋಗಟ್ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿ ನಿವೃತ್ತಿ ಘೋಷಣೆ ಮಾಡಿದ್ದಾರೆ, “ಕ್ಷಮಿಸಿ, ನಿಮ್ಮ ಕನಸು, ನನ್ನ ಧೈರ್ಯ ಎಲ್ಲವೂ ಮರಿದು ಹೋಗಿದೆ. ಈಗ ನನಗೆ ಇದಕ್ಕಿಂತ ಹೆಚ್ಚಿನ ಶಕ್ತಿ ಇಲ್ಲ. 2021-2024 ಕುಸ್ತಿಗೆ ವಿದಾಯ. ನಿಮ್ಮೆಲ್ಲರಿಗೂ ನಾನು ಋಣಿಯಾಗಿರುತ್ತೇನೆ” ಎಂದು ಪೋಸ್ಟ್ ಹಾಕಿದ್ದಾರೆ.

 

ಆದರೆ ಬುಧವಾರ ನಡೆದ ಬೆಳವಣಿಗೆ ವಿನೇಶ್ ಫೋಗಟ್ ಮತ್ತು ಕೋಟ್ಯಾಂತರ ಭಾರತೀಯರಿಗೆ ನಿರಾಸೆ ಮೂಡಿಸಿತ್ತು. 50 ಕೆಜಿಗಿಂತ ಹೆಚ್ಚಿನ ತೂಕ ಹೊಂದಿದ ಕಾರಣಕ್ಕೆ ವಿನೇಶ್ ಫೋಗಟ್‌ ಪ್ಯಾರಿಸ್ ಒಲಿಂಪಿಕ್ಸ್ 2024ರಿಂದ ಹೊರ ಬಿದ್ದಿದ್ದರು. ಫೈನಲ್‌ಗೆ ಪ್ರವೇಶ ಪಡೆದಿದ್ದ ಅವರು ಅನರ್ಹಗೊಂಡಿದ್ದರು.

 

ಫೈನಲ್ ಪಂದ್ಯಕ್ಕೂ ಮುನ್ನ ಕುಸ್ತಿಪಟುಗಳ ತೂಕ ಪರೀಕ್ಷೆ ಮಾಡಲಾಗುತ್ತದೆ. ಮಂಗಳವಾರ ವಿನೇಶ್ ಫೋಗಟ್ ಅವರ ತೂಕ 52 ಕೆಜಿಯಾಗಿತ್ತು. ಅದನ್ನು ಇಳಿಸಲು ಅವರು ರಾತ್ರಿಪೂರ್ತಿ ವಿವಿಧ ವ್ಯಾಯಾಮಗಳನ್ನು ಮಾಡಿದ್ದರು. ಬುಧವಾರ ಬೆಳಗ್ಗೆ ತೂಕ ಚೆಕ್ ಮಾಡಿದಾಗ 50 ಕೆಜಿಗಿಂತ 100 ಗ್ರಾಂ ತೂಕ ಹೆಚ್ಚಿತ್ತು. ಆದ್ದರಿಂದ ಒಲಿಂಪಿಕ್ಸ್‌ನಿಂದ ಅವರು ಅನರ್ಹ ಎಂದು ಘೋಷಣೆ ಮಾಡಲಾಯಿತು.

 

1 ಗಂಟೆ ಸಮಯ ನೀಡಿ ತೂಕ ಕಡಿಮೆ ಮಾಡಿಕೊಂಡು ಬರುತ್ತೇನೆ ಎಂದು ಮಾಡಿದ ಮನವಿಯನ್ನು ತಿರಸ್ಕಾರ ಮಾಡಲಾಗಿತ್ತು. ಇದರಿಂದಾಗಿ ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಪದಕ ಗೆಲ್ಲುವ ಆಸೆ ಹೊಂದಿದ್ದ ವಿನೇಶ್ ಫೋಗಟ್ ಮತ್ತು ಕೋಟ್ಯಾಂತರ ಭಾರತೀಯರಿಗೆ ನಿರಾಸೆಯಾಗಿತ್ತು. ರಾತ್ರಿಪೂರ್ತಿ ತೂಕ ಇಳಿಸಿಕೊಳ್ಳಲು ವ್ಯಾಯಾಮ ಮಾಡಿದ್ದ ವಿನೇಶ್ ಫೋಗಟ್ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು.

 

ಬುಧವಾರದಂದು ಪ್ಯಾರಿಸ್ ಒಲಿಂಪಿಕ್ಸ್ 2024ರ 50 ಕೆಜಿ ವಿಭಾಗದ ಮಹಿಳೆಯರ ಫ್ರೀಸ್ಟೈಲ್ ಕುಸ್ತಿ ಫೈನಲ್‌ನಲ್ಲಿ ವಿನೇಶ್ ಫೋಗಟ್ ಪದಕ ಗೆಲ್ಲುವುದನ್ನು ಕಣ್ತುಂಬಿಕೊಳ್ಳಲು ಭಾರತೀಯಕರು ಕಾದು ಕುಳಿತಿದ್ದರು. ಆದರೆ ತೂಕದ ಕಾರಣಕ್ಕೆ ಅವರು ಅನರ್ಹಗೊಂಡಿದ್ದು, ಭಾರೀ ನಿರಾಸೆ ಮೂಡಿಸಿತ್ತು. ಅವರಿಗೆ ಆಡಲು ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು.

Previous Post

ಕಾರ್ಕಳ: ತಾಲೂಕು ಮಟ್ಟದ ಯೋಗ ಸ್ಪರ್ಧೆ ಜೇಸೀಸ್ ಆಂಗ್ಲ ಮಾಧ್ಯಮಕ್ಕೆ ಪ್ರಥಮ ಸ್ಥಾನ..!!

Next Post

ಪ್ಯಾರಿಸ್ ಒಲಿಂಪಿಕ್ಸ್; ಹಾಕಿಯಲ್ಲಿ ಕಂಚು ಗೆದ್ದ ಭಾರತ ಹಾಕಿ ತಂಡ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ಯಾರಿಸ್ ಒಲಿಂಪಿಕ್ಸ್; ಹಾಕಿಯಲ್ಲಿ ಕಂಚು ಗೆದ್ದ ಭಾರತ ಹಾಕಿ ತಂಡ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved