Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಟಿಡೊಂಜಿ ಕೂಟ’ದಿಂದ ತುಳುನಾಡಿನ ಗತ ಸಾಂಸ್ಕೃತಿಕ ವೈಭವದ ಪರಿಚಯ..!!

ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : 'ಆಟಿಡೊಂಜಿ ಕೂಟ'

Dhrishya News by Dhrishya News
13/08/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ :ಆಗಸ್ಟ್ 13 :ಆಟಿಡೊಂಜಿ ಕೂಟ ಕಾರ್ಯಕ್ರಮದಿಂದ ಆಟಿ ತಿಂಗಳ ವೈಶಿಷ್ಟ್ಯ ಮತ್ತು ತುಳುನಾಡಿನ ಗತ ಸಾಂಸ್ಕೃತಿಕ ವೈಭವವನ್ನು ಇಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ ಎಂದು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ ಹೇಳಿದರು.

ಅವರು ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕದ ವತಿಯಿಂದ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಅಜ್ಜರಕಾಡು ಡಾ! ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥೆ ಡಾ! ನಿಕೇತನ ಅವರು ಆಟಿ ತಿಂಗಳ ಆಚಾರ-ವಿಚಾರ ಮತ್ತು ಜೀವನ ಪದ್ಧತಿಯ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ ಉಡುಪಿ ಇದರ ಆರ್ಥಿಕ ಸಮಾಲೋಚಕಿ ಮೀರಾ ಬ್ರಹ್ಮಾವರ ಅವರು ಬ್ಯಾಂಕ್ ಮೂಲಕ ದೊರೆಯುವ ಸರಕಾರದ ವಿವಿಧ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದ ಡಾ! ನಿಕೇತನ ಮತ್ತು ಮೀರಾ ಬ್ರಹ್ಮಾವರ ಅವರನ್ನು ಸಂಘದ ಆಡಳಿತ ಸಮಿತಿ ಮತ್ತು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಸುಮಾರು 30ಕ್ಕೂ ಮಿಕ್ಕಿ ಆಟಿ ತಿಂಗಳ ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಿದ ಮಹಿಳಾ ಘಟಕದ ಸದಸ್ಯರನ್ನು ಗುಲಾಬಿ ಹೂ ನೀಡಿ ಅಭಿನಂದಿಸಲಾಯಿತು. ಮಹಿಳಾ ಘಟಕದ ಕಾರ್ಯದರ್ಶಿ ವಾಣಿಶ್ರೀ ಅರುಣ್ ಕುಮಾರ್ ಸದಸ್ಯರ ಯಾದಿಯನ್ನು ವಾಚಿಸಿದರು.

ಮಹಿಳಾ ಘಟಕದ ಸಂಚಾಲಕಿ ಗೋಧಾವರಿ ಎಮ್. ಸುವರ್ಣ ಮತ್ತು ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಸಂಘದ ಆಡಳಿತ ಸಮಿತಿ ಮತ್ತು ಮಹಿಳಾ ಘಟಕದ ಸದಸ್ಯರನ್ನು ಅಭಿನಂದಿಸಿದರು.

ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಸಂಘದ ಆಶ್ರಯದಲ್ಲಿ ಮಹಿಳಾ ಘಟಕದ ವತಿಯಿಂದ ನಡೆಯುತ್ತಿರುವ ಆಟಿಡೊಂಜಿ ಕೂಟ ಕಾರ್ಯಕ್ರಮ ಸಂಘದ ಸದಸ್ಯರಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಸಿದೆ. ಇದು ನಮ್ಮ ಹಿರಿಯರೆಲ್ಲರನ್ನೂ ನೆನಪಿಸಿಕೊಳ್ಳುವ ಭಾವನಾತ್ಮಕ ಕ್ಷಣವೂ ಹೌದು ಎಂದರು.

ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ್ ಎ, ಮಹಿಳಾ ಘಟಕದ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್ ಮತ್ತು ಜಯಂತಿ ಹರೀಶ್ ಹಾಗೂ ಸಂಘದ ಆಡಳಿತ ಸಮಿತಿ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಸಂಘದ ಸದಸ್ಯರು ಹಾಗೂ ಮಹಿಳಾ ಘಟಕ ಮತ್ತು ಶ್ರೀ ಗುರು ಕುಣಿತ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಮಹಿಳಾ ಘಟಕದ ಸಮಿತಿ ಸದಸ್ಯೆಯರಾದ ವಿಜಯ ಕೃಷ್ಣ ಮತ್ತು ಪ್ರಭಾ ದಯಾನಂದ್ ಕಾರ್ಯಕ್ರಮ ನಿರೂಪಿಸಿ, ಅನಿತಾ ಲಕ್ಷ್ಮಣ್ ವಂದಿಸಿದರು.

ರೀಶಾ ಪ್ರಾರ್ಥನೆ ಹಾಡಿದರು. ಅನ್ವಿ ಮತ್ತು ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿಯ ಸದಸ್ಯೆಯರಿಂದ ನೃತ್ಯ ಪ್ರದರ್ಶನ ಹಾಗೂ ಆಟಿ ತಿಂಗಳ ವಿವಿಧ ಖಾಧ್ಯಗಳೊಂದಿಗೆ ಸಾಮೂಹಿಕ ಸಹ ಭೋಜನ ನಡೆಯಿತು.

Previous Post

ತುಳುನಾಡಿನ ಸಾಂಸ್ಕೃತಿಕ ಪರಂಪರೆ ಅನಾವರಣಗೊಳಿಸಿದ ಮಾಹೆ ಮಣಿಪಾಲದ “ಆಟಿದ ತುಳು ಪರ್ಬ” ಆಚರಣೆಯ ಉದ್ಘಾಟನೆ..!!

Next Post

ಆಗಸ್ಟ್ 18 ರಂದು ರೂಪಕಲಾ ಆಳ್ವರಿಗೆ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಪ್ರದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಗಸ್ಟ್ 18 ರಂದು ರೂಪಕಲಾ ಆಳ್ವರಿಗೆ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಪ್ರದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026