Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು:ಯೂಟ್ಯೂಬ್ ನೋಡಿ ನಕಲಿ ನೋಟ್ ಪ್ರಿಂಟ್ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ …!!

Dhrishya News by Dhrishya News
20/08/2024
in ಸುದ್ದಿಗಳು
0
0
SHARES
41
VIEWS
Share on FacebookShare on Twitter

ಮಂಗಳೂರು, ಆಗಸ್ಟ್ 20: ನಕಲಿ ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಾಲ್ವರನ್ನು ನಾಲ್ವರನ್ನು ಬಂಧಿಸಿರುವ ಮಂಗಳೂರು ಪೊಲೀಸರು, 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೇರಳದ ಕಾಸರಗೋಡು ಮೂಲದ ವಿ ಪ್ರಿಯೇಶ್ (38), ವಿನೋದ್ ಕುಮಾರ್ ಕೆ (33), ಅಬ್ದುಲ್ ಖಾದರ್ ಎಸ್​ಎಂ (58) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಯೂಬ್ ಖಾನ್ (51) ಎಂದು ಗುರುತಿಸಲಾಗಿದೆ.

ಕಾಸರಗೋಡಿನ ಚೆರ್ಕಳದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪ್ರಮುಖ ಆರೋಪಿ ಪ್ರಿಯೇಶ್ ಸಾಲದ ಸುಳಿಯಲ್ಲಿ ಸಿಲುಕಿದ್ದು, ಸಾಲ ಮರುಪಾವತಿಸಲು ನಕಲಿ ನೋಟು ಮುದ್ರಣಕ್ಕೆ ಮುಂದಾಗಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. ಅವರು ಕೋಝಿಕ್ಕೋಡ್ ಮತ್ತು ದೆಹಲಿಯಿಂದ ಆನ್‌ಲೈನ್‌ನಲ್ಲಿ ಕಚ್ಚಾ ವಸ್ತುಗಳನ್ನು ಖರೀದಿಸಿದ್ದರು. ಯೂಟ್ಯೂಬ್ ಮೂಲಕ ನಕಲಿ ಕರೆನ್ಸಿ ಮುದ್ರಿಸುವುದನ್ನು ಕಲಿತರು. ಈತ ಕಳೆದ ಮೂರು ತಿಂಗಳಿಂದ ಚೆರ್ಕಳದಲ್ಲಿರುವ ತನ್ನ ಪ್ರಿಂಟಿಂಗ್ ಪ್ರೆಸ್​​ನಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ.

ಆರೋಪಿಗಳು ಉತ್ತಮ ಗುಣಮಟ್ಟದ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು (ಎಫ್‌ಐಸಿಎನ್) ಪ್ರಿಂಟ್ ಮಾಡಿದ್ದು, ಇದು ನಕಲಿ ಎಂದು ಕಂಡುಹಿಡಿಯುವುದು ಸಾಮಾನ್ಯ ಜನರಿಗೆ ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಮೂವರು ಆರೋಪಿಗಳು ಈತನಿಗೆ ನಕಲಿ ನೋಟು ಚಲಾವಣೆ ಮಾಡಲು ಸಹಕರಿಸಿದ್ದರು.

25 ಸಾವಿರ ನಗದು ನೀಡಿ 1 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ವೇಳೆ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರು ಲಾಡ್ಜ್‌ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಇನ್ನಷ್ಟು ಮಂದಿ ಶಾಮೀಲಾಗಿರುವ ಸಾಧ್ಯತೆಗಳಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಆರೋಪಿಗಳಿಂದ 9,030 ರೂಪಾಯಿ ನಗದು ಮತ್ತು ಮೂರು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Previous Post

ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ :ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ..!!

Next Post

ಉಡುಪಿ :ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ) ವತಿಯಿಂದ ಶ್ರೀ ನಾರಾಯಣ ಗುರುಗಳ ಜಯಂತಿ, ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ) ವತಿಯಿಂದ ಶ್ರೀ ನಾರಾಯಣ ಗುರುಗಳ ಜಯಂತಿ, ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026