Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ :ನಾಳೆ (ಆ 22)ಡಾ. ವಸುಂಧರಾ ದೊರೆಸ್ವಾಮಿಯವರ ಕಿತ್ತೂರು ರಾಣಿ ಚೆನ್ನಮ್ಮ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನ..!!

Dhrishya News by Dhrishya News
21/08/2024
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ಮಣಿಪಾಲ, ಆಗಸ್ಟ್‌ 21, 2024 ಮಣಿಪಾಲ ವಿಶ್ವವಿದ್ಯಾನಿಲಯದ ಸಾಂಸ್ಕೃತಿಕ ವಿಭಾಗವು ಆಗಸ್ಟ್ ೨೨ರ ಗುರುವಾರ ಸಂಜೆ ೬.೩೦ಕ್ಕೆ ಸರಿಯಾಗಿ ಟಿ.ಎಂ.ಎ ಪೈ ಸಭಾಂಗಣದಲ್ಲಿ ಹಿರಿಯ ನೃತ್ಯಕಲಾವಿದೆ, ಗುರು ಡಾ. ವಸುಂಧರಾ ದೊರೆಸ್ವಾಮಿಯವರ ‘ಕಿತ್ತೂರು ರಾಣಿ ಚೆನ್ನಮ್ಮ’ಎಂಬ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನವನ್ನು ವಿದ್ಯಾರ್ಥಿಗಳಿಗೆ ಹಾಗೂ ಊರಿನ ಕಲಾಸಕ್ತರಿಗಾಗಿ ಆಯೋಜಿಸಿದೆ.   

ಪ್ರೊ. ಜ್ಯೋತಿ ಶಂಕರ್ ಅವರು ರಚಿಸಿ, ವಿದ್ವಾನ್ ಡಿ.ಎಸ್ ಶ್ರೀವತ್ಸ ಅವರ ಸಂಗೀತ ಸಂಯೋಜನೆಯ ಈ ನೃತ್ಯನಾಟಕದಲ್ಲಿ ಡಾ.ವಸುಂಧರಾ ಅವರ ನೃತ್ಯ-ನಾಟಕ-ಸಮರಕಲೆಗಳ ಸಿದ್ಧಿಯ ಸಮನ್ವಯವನ್ನು ಕಾಣಲಿದ್ದೀರಿ.  

ಶಾಸ್ತ್ರೀಯ ಭರತನಾಟ್ಯ ಹಾಗೂ ಸೃಜನಶೀಲ ಪ್ರಸ್ತುತಿಗಳಿಗೆ ಹೆಸರಾಗಿರುವವರು ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದೆ ಡಾ. ವಸುಂಧರಾ ದೊರೆಸ್ವಾಮಿಯವರು. ತನ್ನ ೭೫ರ ಇಳಿವಯಸ್ಸಿನಲ್ಲಿಯೂ ನಿರಂತರ ಪ್ರದರ್ಶನ, ಕಲಾಸಂಯೋಜನೆ, ಅಧ್ಯಯನ, ಅಧ್ಯಾಪನದಲ್ಲಿ ತೊಡಗಿಕೊಂಡಿರುವ ಬದ್ಧತೆಯ ಕಲಾವಿದೆ ಇವರು. ದಕ್ಷಿಣಕನ್ನಡದ ಮೂಡಬಿದರೆಯ ಮಗಳು. ಸಾಂಸ್ಕೃತಿಕ ನಗರಿ ಮೈಸೂರಿನ ಹೆಮ್ಮೆಯ ಸೊಸೆ. ವಸುಂಧರಾ ಪ್ರದರ್ಶಕ ಕಲೆಗಳ ಕೇಂದ್ರವನ್ನು ಸ್ಥಾಪಿಸಿ ಕಳೆದ ೪೦ ವರುಷಗಳಿಂದ ನಿರಂತರ ಕಲಾ ಉತ್ಸವಗಳನ್ನು ಆಯೋಜಿಸಿ ಹಿರಿಯ ಕಿರಿಯ ಕಲಾವಿದರಿಗೆ ವೇದಿಕೆಯನ್ನೊದಗಿಸಿದ್ದಾರೆ. 

ಶಾಸ್ತ್ರೀಯ ನೃತ್ಯ ಕಾರ್ಯಕ್ರಮಗಳಲ್ಲದೆ, ಹಲವಾರು ನೃತ್ಯನಾಟಕಗಳು, ಏಕವ್ಯಕ್ತಿ ನೃತ್ಯನಾಟಕಗಳನ್ನು ಇಂದಿಗೂ ಪ್ರದರ್ಶಿಸುತ್ತಿದ್ದಾರೆ. ಕರ್ನಾಟಕದ ಪ್ರತಿಷ್ಥಿತ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕಲಾತಿಲಕ ಬಿರುದು, ನಾಟ್ಯರಾಣಿ ಶಾಂತಲಾ ಬಿರುದು ಸೇರಿ ಗೌರವಾನ್ವಿತ ಕೇಂದ್ರ ಸಂಗೀತನಾಟಕ ಅಕಾಡೆಮಿಯ ಪ್ರಶಸ್ತಿಯೊಂದಿಗೆ, ಅಮೇರಿಕ, ಆಸ್ಟ್ತೇಲಿಯ, ಯುರೊಪ್ ಹಾಗೂ ಯುನೈಟೆಡ್ ಕಿಂಗ್ ಡಮ್ ದೇಶಗಳ ಪ್ರಶಸ್ತಿಗಳನ್ನೂ ಪಡೆದಿರುತ್ತಾರೆ. 

ಮಾಗಿದ ಕಲಾತಪಸ್ವಿಯ ಪ್ರಸ್ತುತಿಯನ್ನು ಆಸ್ವಾದಿಸಲು ಕಲಾಸಕ್ತರಿಗೆ ಮುಕ್ತ ಪ್ರವೇಶ. ಕಾರ್ಯಕ್ರಮವು ಸಮಯಕ್ಕೆ ಸರಿಯಾಗಿ ಆರಂಭವಾಗಲಿದ್ದು, ಹದಿನೈದು ನಿಮಿಷ ಮುಂಚಿತವಾಗಿ ಪ್ರೇಕ್ಷಕರು ಆಸನ ಸ್ವೀಕರಿಸಬೇಕೆಂಬುದು ಆಯೋಜಕರು ವಿನಂತಿಸಿದ್ದಾರೆ 

Previous Post

ಉಡುಪಿಯ ಶ್ರೀ ರಾಘವೇಂದ್ರ ಮಠದಲ್ಲಿ  ಪುತ್ತಿಗೆ ಶ್ರೀಪಾದರಿಂದ ವಿಶೇಷ ಪೂಜೆ ಹಾಗೂ ಪಲ್ಲಪೂಜೆ..!!

Next Post

ಉಡುಪಿಯಲ್ಲಿ ವೈಭವದ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯಲ್ಲಿ ವೈಭವದ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

30/01/2026
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026

Recent News

ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

30/01/2026
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved