Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಂತೆಕಟ್ಟೆ:ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ವತಿಯಿಂದ ಮಹಿಳೆಯರ ವಿರುದ್ಧದ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ..!!

Dhrishya News by Dhrishya News
24/08/2024
in ಸುದ್ದಿಗಳು
0
0
SHARES
44
VIEWS
Share on FacebookShare on Twitter

ಸಂತೆಕಟ್ಟೆ:ಆಗಸ್ಟ್ 24: ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ವತಿಯಿಂದ ಮಹಿಳೆಯರ ವಿರುದ್ಧದ ದೌರ್ಜನ್ಯ ಖಂಡಿಸಿ ಸಂತೆಕಟ್ಟೆಯ ಮೌಂಟ್ ರೋಝರಿ ಚರ್ಚ್ ಸಮೀಪದ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು.‌

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉಪನ್ಯಾಸಕಿ ಶಾರದ ಅವರು, ಮಹಿಳೆಯರನ್ನು ಸಮಾಜ ಯಾಕೆ ದುರ್ಬಲವೆಂದು ಹೇಳುತ್ತದೆ. ದೈಹಿಕವಾಗಿಯೂ ನಮ್ಮ ಪುರುಷರಷ್ಟೇ ಸಮಾನರು. ಯಾವ ಕಾರಣಕ್ಕೂ ನಾವು ಅಸಮಾನರು ಅಲ್ಲ. ನಾವು ಸಮಾನರಾಗಿ ಶಕ್ತಿಯುತರು ಎಂದರು.

ಅತ್ಯಾಚಾರಕ್ಕೆ ಜಾತಿಯಾಧರಿತ, ಧರ್ಮಾಧಾರಿತ ಹಾಗೂ ಪುರುಷಾಧಿಪತ್ಯದ ಮನಸ್ಥಿತಿಯೇ ಕಾರಣವಾಗಿದೆ. ಸಂತ್ರಸ್ಥರಿಗೆ ನ್ಯಾಯ ಸಿಗುವುದೇ ಜಾತಿ, ಧರ್ಮಧಾರಿತವಾಗಿ ಎಂಬ ವಾತಾವರಣ ಸೃಷ್ಟಿಯಾಗಿದೆ. ನ್ಯಾಯ ಎಲ್ಲರಿಗೂ ಸಮಾನವಾಗಿಲ್ಲ ಎಂದು ಖೇದ ವ್ಯಕ್ತಪಡಿಸಿದರು.

ಹೆಣ್ಣುಮಕ್ಕಳು ಮೊಂಬತ್ತಿಗಳ ರೂಪಕವಾಗುವುದು ಬೇಡ. ಹೆಣ್ಣು ಮಕ್ಕಳಿಗೆ ಶಕ್ತಿಯಿದೆ‌. ನಮ್ಮ ಬಟ್ಟೆ ಸರಿಯಿಲ್ಲ, ನಡವಳಿಕೆ ಸರಿಯಿಲ್ಲ ಎನ್ನುವ ಮನಸ್ಥಿತಿ ವಿರುದ್ಧ ಮಾತನಾಡಬೇಕು. ಅವರನ್ನು ಸಮಾಜದಲ್ಲಿ ಸರಿಯಾದ ರೀತಿಯಲ್ಲಿ ಪ್ರಶ್ನಿಸುವಂತವರಾಗಿ ಬೆಳೆಸಬೇಕು ಎಂದು ಹೇಳಿದರು. ಹೆಣ್ಣು ಮಕ್ಕಳ ಪರ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ಒರ ಮಾತನಾಡುವವರನ್ನು ವ್ಯವಸ್ಥಿತವಾಗಿ ತುಳಿಯುವ ಪ್ರಯತ್ನ ನಡೆಯುತ್ತಿದೆ ಅದರ ಕುರಿತು ಮಾತನಾಡಬೇಕೆಂದು ಕರೆ ನೀಡಿದರು.

ಇನ್ನೋರ್ವ ಅತಿಥಿ ಡಾ.ಪಿ.ವಿ ಭಂಡಾರಿ ಮಾತನಾಡಿ, ” ಸರಕಾರ ಮಹಿಳೆಯರ ರಕ್ಷಣೆಯ ಜವಾಬ್ದಾರಿಯನ್ನು ಸೂಕ್ತವಾಗಿ ಮಾಡುತ್ತಿಲ್ಲ. ಕಾನೂನು ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕಾದ ಅವಶ್ಯಕತೆ ಇದೆ” ಎಂದು ಹೇಳಿದರು. 

ಬಂಗಾಳ ಸರಕಾರವನ್ನೋ, ಕರ್ನಾಟಕ ಸರಕಾರವನ್ನೋ ದೂರಿ ಪ್ರಯೋಜನವಿಲ್ಲ. ಎಲ್ಲ ಸರಕಾರಗಳ ಸಮಾನವಾಗಿ ನಿಷ್ಕ್ರಿಯವಾಗಿದೆ.ಇದರಿಂದಾಗಿ ಪೊಲೀಸರಿಗೂ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಹಲವು ಪ್ರಕರಣದಲ್ಲಿ ಮಹಿಳೆಯರು ಪ್ರಕರಣ ದಾಖಲಿಸಲು ಹಿಂಜರಿಯಬೇಕಾದ ವಾತಾವರಣ ಸೃಷ್ಟಿಯಾಗಿದೆ ಎಂದು ಖೇದ ವ್ಯಕ್ತಪಡಿಸಿದರು.

“ವೈದ್ಯರ ರಕ್ಷಣೆಗೆ ಸೂಕ್ತವಾದ ಕಾನೂನು ರಚಿಸುವಲ್ಲಿ ಸರಕಾರಗಳು ವಿಫಲವಾಗಿದೆ. ಸರಕಾರಗಳು ಈ ಕುರಿತು ಗಂಭೀರವಾಗಿ ಚಿಂತಿಸಬೇಕೆಂದು ಹೇಳಿದರು. ಇನ್ನು ಮಾಧ್ಯಮಗಳು ಸಂತ್ರಸ್ಥ ವಿವರಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಬಾರದು ಇದರಿಂದ ಸಂತ್ರಸ್ಥರಿಗೆ ಮತ್ತಷ್ಟು ಘಾಸಿಯಾಗುತ್ತದೆ. ಯಾವುದೇ ಕಾರಣಕ್ಕೂ ಇಂತಹ ಕೃತ್ಯವನ್ನು ಧರ್ಮಾಧರಿತವಾಗಿ ನೋಡಬಾರದು. ಎಲ್ಲ ಧರ್ಮ ಜಾತಿಗಳಲ್ಲೂ ಇಂತಹ ಜನರು ಇರುತ್ತಾರೆ ಎಂದು ಹೇಳಿದರು.

ಸುಂದರ್ ಮಾಸ್ತರ್ ಈ ಸಂದರ್ಭದಲ್ಲಿ ಮಾತನಾಡಿದರು. ಸಮೀರ್ ತೀರ್ಥಹಳ್ಳಿ ಪ್ರಸ್ತಾವಿಕವಾಗಿ ಮಾತನಾಡಿದರು.

ಸಭೆಯ ಆರಂಭದಲ್ಲಿ ಮೌಂಟ್ ರೋಝರಿ ಚರ್ಚ್ ನಿಂದ ಪ್ರತಿಭಟನಾ ಸ್ಥಳದ ವರೆಗೆ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ವೆರೋನಿಕಾ ಕರ್ನೆಲಿಯೋ,ಅಝೀಜ್ ಉದ್ಯಾವರ, ಝೀರ್ ನೇಜಾರು, ಸಾದೀಕ್ ಉಸ್ತಾದ್ ಹೂಡೆ, ಹುಸೇನ್ ಕೋಡಿಬೆಂಗ್ರೆ, ಫಾ.ವಿಲಿಯಮ್ ಮಾರ್ಟಿಸ್, ಸಂತೋಷ್ ಕರ್ನೆಲಿಯೋ ಸೇರಿದಂತೆ ಹಲವಾರು ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು

ಅಲ್ವಿನ್ ದಾಂತಿ ನಿರೂಪಿಸಿದರು. ಗಾಡ್ವಿನ್ ಮಸ್ಕರೇನಸ್ ಧನ್ಯವಾದವಿತ್ತರು.

Previous Post

ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಪ್ರಯುಕ್ತ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ “ಬಾಪೂಜಿ ಪ್ರಬಂಧ ಸ್ಪರ್ಧೆ”..!!

Next Post

ಕಾರ್ಕಳ ಪೊಲೀಸರು ವಶಪಡಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಆರೋಪಿಗೆ ವಾಪಸ್ ನೀಡಲು ನಿರಾಕರಿಸಿದ ಹೈಕೋರ್ಟ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಪೊಲೀಸರು ವಶಪಡಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಆರೋಪಿಗೆ ವಾಪಸ್ ನೀಡಲು ನಿರಾಕರಿಸಿದ ಹೈಕೋರ್ಟ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved