Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಶ್ರೀ ಚಕ್ರ ಮಂಡಲ ಪೂಜೆ ಸಂಪನ್ನ..!!

Dhrishya News by Dhrishya News
30/08/2024
in ಸುದ್ದಿಗಳು
0
ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಶ್ರೀ ಚಕ್ರ ಮಂಡಲ ಪೂಜೆ ಸಂಪನ್ನ..!!
0
SHARES
7
VIEWS
Share on FacebookShare on Twitter

ಉಡುಪಿ :ಆಗಸ್ಟ್ 30: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಏಕಕಾಲ ಶ್ರೀ ಚಕ್ರ ಮಂಡಲ ಪೂಜೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ, ಕುಕ್ಕಿ ಕಟ್ಟೆ ವೇದಮೂರ್ತಿ ರಾಘವೇಂದ್ರ ತಂತ್ರಿ ಗಳವರ ಪ್ರಧಾನತ್ವ ದಲ್ಲಿ ಬಹು ವಿಜೃಂಭಣೆಯಿಂದ ಸಂಪನ್ನಗೊಂಡಿತು…

ಆ ಪ್ರಯುಕ್ತ ಕ್ಷೇತ್ರದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ,, ನಂತರ ಶಾಸ್ತ್ರೋಕ್ತವಾದ ಅರಣಿಮಥನದಿಂದ ಅಗ್ನಿ ಜನನ ಗೊಳಿಸಿ ಆದ್ಯ ಗಣಪತಿಯಾಗ ನೆರವೇರಿಸಲಾಯಿತು..

ಶ್ರೀ ಚಕ್ರ ಮಂಡಲ ಪೂಜೆಗೆ ವಿಶೇಷವಾಗಿ ರಚಿಸಲಾದ ಪುಷ್ಪಾಲಂಕೃತ ಮಂಟಪದೊಳಗೆ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ದೀಪ ಪ್ರಜ್ವಲಿಸಿ, ಪಂಚವರ್ಣಾತ್ಮಕವಾಗಿ ಬಿಂದುವನ್ನು ಇಟ್ಟು ಶ್ರೀಚಕ್ರ ಮಂಡಲ ರಚನೆಗೆ ಚಾಲನೆ ನೀಡಿದರು…

ಸಂಜೆ ಗಂಟೆ ಆರರಿಂದ ಆರಂಭಗೊಂಡ ಶ್ರೀ ಚಕ್ರ ಮಂಡಲ ಪೂಜೆ ಆರಂಭಗೊಂಡಿತು. ಪೂಜೆಯಲ್ಲಿ ಪುಷ್ಪಾರ್ಚನೆಗೆ ವಿಶೇಷ ಪ್ರಾಧಾನ್ಯತೆ ಇದ್ದು ಸುಗಂಧ ಭರಿತ ವಿಧ ವಿಧದ ಪುಷ್ಪಗಳಿಂದ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕಿಯಾದ ಶ್ರೀ ರಾಜರಾಜೇಶ್ವರಿಯನ್ನು ಲಲಿತಾ ಸಹಸ್ರ ನಾಮ ಸಹಿತ ವಿವಿಧ ಸ್ತುತಿಗಳಿಂದ ಸ್ತುತಿಸಿ ಅರ್ಚನೆ ನೆರವೇರಿಸಲಾಯಿತು..

 ಶಾಸ್ತ್ರಗಳು ಉಲ್ಲೇಖಿಸಿದಂತೆ ವಿಶೇಷವಾಗಿ ನವ ನೈವೇದ್ಯಗಳನ್ನು ಆಕೆಗೆ ಸಮರ್ಪಿಸಿ ಶೋಡಸ ಆರತಿಯನ್ನು ಬೆಳಗಿಸಿ ಚೆಂಡೆ ವಾದ್ಯ ನಾದದೊಂದಿಗೆ ಅಷ್ಟಾವದನ ಸಹಿತವಾಗಿ ಆರಾಧಿಸಲಾಯಿತು…

ವಿಶೇಷವಾಗಿ ಸಮರ್ಥಿಸಲ್ಪಡುವ ಅಷ್ಟಾವಧಾನ ಸೇವೆಯಲ್ಲಿ ಸಂಗೀತ ಸೇವೆಯನ್ನು ಶ್ರೀಮತಿ ಚಂದ್ರಕಲಾ ಶರ್ಮ, ಯಕ್ಷಗಾನ ಸೇವೆಯನ್ನು ಶ್ರೀಮತಿ ಊರು ಭಾಗ್ಯಲಕ್ಷ್ಮಿ, ಪಂಚವಾದ್ಯ ಸಹಿತ ರುದ್ರನಾದ ಸೇವೆಯನ್ನು ನಾಗೇಂದ್ರ ಕುಡುಪು, ನಾದಸ್ವರ ವಾದನ ಸೇವೆ ಶ್ರೀಯುತ ಮುರಳಿದರ ಮುದ್ರಾಡಿ ಮತ್ತು ತಂಡದವರು ನೃತ್ಯ ಸೇವೆಯನ್ನು ವಿದುಷಿ ಕುಮಾರಿ ಅನ್ವಿತಾ ಹಾಗೂ ಚತುರ್ವೇದ ಸಹಿತ ವಿವಿಧ ಸೇವೆಯನ್ನು ವಿಪ್ರೊತ್ತಮರು ನೆರವೇರಿಸಿದರು…

 ಪೂಜೆಯ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾದನೆ ಬ್ರಹ್ಮಚಾರಿ ಆರಾಧನೆ ದಂಪತಿ ಪೂಜೆ ಆಚಾರ್ಯ ಪೂಜೆಗಳು ಸಂಪನ್ನಗೊಂಡು ಮಧ್ಯಾಹ್ನ ಹಾಗೂ ರಾತ್ರಿ ವಿಶೇಷ ಮೃಷ್ಟಾನ್ನ ಸಂತರ್ಪಣೆ ನೆರವೇರಿತು.ಇಹದಲ್ಲಿ ಸುಖ ಪರದಲ್ಲಿ ಮೋಕ್ಷವನ್ನು ಕರುಣಿಸುವಂತಹ ಬಹು ವಿಶಿಷ್ಟವೂ ಅಪರೂಪವು ಬಹು ಫಲಪ್ರದವು ಆದಂತಹ ಈ ಶ್ರೀಚಕ್ರ ಮಂಡಲ ಪೂಜೆಯು ಚೆನ್ನೈನ ಶ್ರೀಯುತ ವಾಸುದೇವನ್ ಮತ್ತು ಕುಟುಂಬಸ್ಥರ ಪರವಾಗಿ ಪ್ರಾಯಶ್ಚಿತ್ತ ಪೂರ್ವಕವಾಗಿ ಕ್ಷೇತ್ರದಲ್ಲಿ ಸಂಪನ್ನಗೊಂಡಿತು.

ಶ್ರೀಚಕ್ರ ಆರಾಧಕ ರಿಂದಲೇ ನಡೆಸಲ್ಪಡುವ ಈ ವಿಶಿಷ್ಟ ಪೂಜೆಯು ಪ್ರಾಜ್ಞವಿಪ್ರವರ್ಗದ ಸಹಕಾರದಿಂದ ನೋಡುಗರನ್ನು ಭಕ್ತಿ ಪರವಶಗೊಳಿಸಿ ರೋಮಾಂಚನಗೊಳ್ಳು ವಂತೆ ಸಂಪನ್ನಗೊಂಡಿತು.

ಈ ವಿಶೇಷ ಪೂಜೆಯ ನೇತೃತ್ವವನ್ನು ವೇದಮೂರ್ತಿ ವಿಕ್ಯಾತ್ ಭಟ್ ವಹಿಸಿದ್ದರು ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ..

Previous Post

ಡಾ.ಟಿಎಂಎ ಪೈ ಆಸ್ಪತ್ರೆ ಉಡುಪಿಯಲ್ಲಿ ಸಮಗ್ರ ಲಿವರ್ ವೆಲ್ ನೆಸ್ (ಯಕೃತ್ ಆರೋಗ್ಯ ತಪಾಸಣಾ ) ಪ್ಯಾಕೇಜ್..!!

Next Post

ಕಾರ್ಕಳ ಪುರಸಭೆ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ಪುರಸಭೆ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್..!!

ಕಾರ್ಕಳ ಪುರಸಭೆ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

06/12/2025
ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

06/12/2025
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025

Recent News

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

06/12/2025
ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

06/12/2025
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved