Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನ “ಐಕಾನ್” ನಿವೃತ್ತಿ..!!

Dhrishya News by Dhrishya News
30/08/2024
in ಸುದ್ದಿಗಳು
0
0
SHARES
29
VIEWS
Share on FacebookShare on Twitter

ಉಡುಪಿ :ಆಗಸ್ಟ್ 30:ಕಳೆದ 10 ವರ್ಷ 25 ದಿನಗಳಿಂದ ಉಡುಪಿ ಜಿಲ್ಲೆಯ ಪೊಲೀಸ್‌ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ ಐಕಾನ್‌ ನಿವೃತ್ತಿ ಹೊಂದಿದ್ದು, ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು ದಿನಾಂಕ: 05/08/2014 ರಂದು ಜನಿಸಿದ್ದು, ದಿನಾಂಕ: 05/11/2014 ರಂದು ಶ್ವಾನದಳ ವಿಭಾಗಕ್ಕೆ ಸೇರ್ಪಡೆಗೊಂಡಿರುತ್ತದೆ. ಶ್ರೀ ಗಣೇಶ ಎಂ. ಎಪಿಸಿ 1444 ರವರು ಹ್ಯಾಂಡ್ಲರ್‌ ಆಗಿ ಕರ್ತವ್ಯ ನಿರ್ವಹಿಸಿರುತ್ತಾರೆ. ದಿನಾಂಕ: 25/11/2014 ರಿಂದ 30/08/2015 ರವರೆಗೆ ಸಿ.ಎ.ಆರ್‌ ಸೌತ್‌ ಆಡುಗೋಡಿಯಲ್ಲಿ ಸ್ಪೋಟಕ ಪತ್ತೆ ಬಗ್ಗೆ 09 ತಿಂಗಳು ಕಠಿಣ ತರಬೇತಿಯನ್ನು ಪಡೆದು ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417 ಕ್ಕಿಂತ ಅಧಿಕ ವಿಶೇಷ ಕರ್ತವ್ಯ ನಿರ್ವಹಿಸಿದ್ದು, ಈ ಶ್ವಾನವು ಗೌರವಾನ್ವಿತ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ವಿದೇಶಿ ಗಣ್ಯರು ಹಾಗೂ ಗಣ್ಯಾತಿಗಣ್ಯರ ಆಗಮನದ ಸಂಧರ್ಭದಲ್ಲಿ ಹಾಗೂ ಏರ್‌ ಶೋ, ಜಿ-20 ಶೃಂಗಸಭೆ, ದತ್ತ ಜಯಂತಿ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಪಂದ್ಯಾವಳಿ, ಸಾಗರ ಕವಚ ಹಾಗೂ ಪ್ರತಿನಿತ್ಯದ ಕರ್ತವ್ಯದಲ್ಲಿ ಮಲ್ಪೆ ಬಂದರು, ಕಾಪು ಲೈಟ್‌ಹೌಸ್‌, ಮಣಿಪಾಲ ಯೂನಿವರ್ಸಿಟಿ, ರೈಲ್ವೇ ನಿಲ್ದಾಣ, ನಾಗಾರ್ಜುನ, ಮೈಸೂರು ದಸರಾ, ನ್ಯಾಷನಲ್‌ ನಾರ್ಕೋಟಿಕ್ಸ್‌ ಕಾನ್ಫರೆನ್ಸ್‌, ಬ್ರಹ್ಮಾವರದಲ್ಲಿ ಕಚ್ಚಾ ಬಾಂಬ್‌ ಪತ್ತೆ ಇತ್ಯಾದಿ ಸಂಧರ್ಭಗಳಲ್ಲಿ ಸ್ಪೋಟಕ ಪತ್ತೆ ಕಾರ್ಯದಲ್ಲಿ ಯಾವುದೇ ವಿಧ್ವಂಸಕ ಕೃತ್ಯ ನಡೆಯದಂತೆ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿರುತ್ತದೆ. 

 22/02/2020 ರಂದು ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬೆಳ್ಳಿಯ ಪದಕ ಪಡೆದು, ಉಡುಪಿ ಜಿಲ್ಲೆಗೆ ಹಾಗೂ ಪೊಲೀಸ್‌ ಇಲಾಖೆಗೆ ಗೌರವವನ್ನು ತಂದು ಕೊಟ್ಟಿರುತ್ತದೆ. 

ಕಾರ್ಯಕ್ರಮದಲ್ಲಿ ಪೊಲೀಸ್‌ ಅಧೀಕ್ಷಕರಾದ ಡಾ|| ಅರುಣ್‌ ಕೆ. ಐ.ಪಿ.ಎಸ್‌ , ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ ಕೆ.ಎಸ್.ಪಿ.ಎಸ್., ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರಾದ ಶ್ರೀ ಪ್ರಭು ಡಿ.ಟಿ, ಕೆ.ಎಸ್.ಪಿ.ಎಸ್ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಉಪಾಧೀಕ್ಷಕರಾದ ಶ್ರೀ ತಿಮ್ಮಪ್ಪ ಗೌಡ ಜಿ. ಕೆ.ಎಸ್.ಪಿ.ಎಸ್, ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ನಿರೀಕ್ಷಕರಾದ ಶ್ರೀ ಎಸ್. ರವಿಕುಮಾರ್‌ ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

Previous Post

ಕಾರ್ಕಳ ಪುರಸಭೆ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್..!!

Next Post

ನಾದಲೋಲನಿಗೆ ಗಾನ ನೃತ್ಯದೊಂದಿಗೆ ಉದಯಾಸ್ತಮಾನ ಸೇವೆ – ಕೃಷ್ಣಮಾಸೋತ್ಸವ ಸಮಾರೋಪ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾದಲೋಲನಿಗೆ ಗಾನ ನೃತ್ಯದೊಂದಿಗೆ ಉದಯಾಸ್ತಮಾನ ಸೇವೆ - ಕೃಷ್ಣಮಾಸೋತ್ಸವ ಸಮಾರೋಪ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026