Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನ್ಯಾಷನಲ್ ಹೈವೇ ಯ್ಲಲಿ ಆಯಿಲ್ ಸೋರಿಕೆ ; ಕುಂದಾಪುರ ಟ್ರಾಫಿಕ್  ಪೊಲೀಸರಿಂದ ಆಯಿಲ್ ತುಂಬಿದ್ದ ಟ್ಯಾಂಕರ್ ವಶ..!!

Dhrishya News by Dhrishya News
08/09/2024
in ಸುದ್ದಿಗಳು
0
0
SHARES
43
VIEWS
Share on FacebookShare on Twitter

ಕುಂದಾಪುರ :ಸೆಪ್ಟೆಂಬರ್ 08 :ಮಂಗಳೂರಿನಿಂದ ಉತ್ತರಪ್ರದೇಶದತ್ತ ಸೋಪ್ ಆಯಿಲ್ (ಸೋಪ್ ತಯಾರಿಕೆಯ ದ್ರವಾಂಶ) ತುಂಬಿದ್ದ ಬ್ರಹತ್ ಟ್ಯಾಂಕರ್ ಅಡಿಭಾಗದಲ್ಲಿ ಉಂಟಾದ ರಂಧ್ರದಿಂದ ಹೊರಚೆಲ್ಲಿದ ಸೋಪ್ ಆಯಿಲ್ ರಸ್ತೆಯಲ್ಲಿನ ಮಳೆ ನೀರಿನೊಂದಿಗೆ ಬೆರೆತು  ತೆಕ್ಕಟ್ಟೆಯಿಂದ ಹೆಮ್ಮಾಡಿಯವರೆಗೂ ಹಲವರು ಬಿದ್ದು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದ್ದು ಕುಂದಾಪುರ ಟ್ರಾಫಿಕ್ ಪೊಲೀಸರು ಮರವಂತೆ ಬಳಿ ಟ್ಯಾಂಕರ್ ವಶಕ್ಕೆ ಪಡೆದಿದ್ದಾರೆ.

ಚಾಲಕ ಧ್ಯಾನಚಂದ್ ಎನ್ನುವಾತನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. 

ಮಂಗಳೂರಿನಿಂದ ಯುಪಿಗೆ ಬೆಳಿಗ್ಗೆ 32 ಟನ್ ಸೋಪ್ ಆಯಿಲ್ (ಪಾಮ್ ಪ್ಯಾಟಿ ಆಸಿಡ್ ಡಿಸ್ಟಿಲೇಟ್) ತುಂಬಿದ್ದ 16 ಟೈರ್‌ನ ಬೃಹತ್ ಗಾತ್ರದ ಟ್ಯಾಂಕರ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಟ್ಯಾಂಕರ್ ಅಡಿಭಾಗದಲ್ಲಿ ಆಯಿಲ್ ಸೋರಿಕೆಯಾಗುತ್ತಿದ್ದು ಅದೇ ವೇಳೆ ಮಳೆಯಿದ್ದ‌ ಕಾರಣ ವಾಹನದ ಕನ್ನಡಿಯಲ್ಲಿ ಚಾಲಕನಿಗೆ ಇದು ಗಮನಕ್ಕೆ ಬಂದಿರಲಿಲ್ಲ. ಹೀಗಾಗಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ ಟ್ಯಾಂಕರ್ ಸಾಗಿದ ದಾರಿಯಲ್ಲಿ ಮತ್ತೆ ಪ್ರಯಾಣಿಸಿದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ಕಳೆದುಕೊಂಡು ಬೀಳುವಂತಾಗಿದ್ದು ಲಘು ವಾಹನಗಳು ಬ್ರೇಕ್ ತಗುಲದೆ ಸಣ್ಣಪುಟ್ಟ ಅವಘಡ ಸಂಭವಿಸಿತ್ತು. ಪ್ರಾಥಮಿಕ ವರದಿ ಪ್ರಕಾರ 25-30 ಮಂದಿ ಬಿದ್ದಿದ್ದು 6 ಮಂದಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿದ್ದ ಅಪಘಾತದಿಂದ ಹಲವು ವಾಹನಗಳಿಗೆ ಹಾನಿಯಾಗಿದೆ. ಗಂಗೊಳ್ಳಿ ಸಮೀಪ ತೆರಳುವಾಗ ಮಳೆ ನಿಂತಿದ್ದರಿಂದ ಚಾಲಕನಿಗೆ ಹಿಂದೆ ಆಯಿಲ್ ಸೋರಿಕೆ ಕಂಡುಬಂದಿದ್ದು ತ್ರಾಸಿ ಮರವಂತೆ ಬಳಿ ಟ್ಯಾಂಕರ್ ಬದಿಗಿಟ್ಟು ಸಂಬಂದಪಟ್ಟವರಿಗೆ ಮಾಹಿತಿ ನೀಡಿದ್ದಾನೆ. ಟ್ರಾಫಿಕ್ ಠಾಣೆ ಪಿಎಸ್‌ಐ ಪ್ರಸಾದ್ ಕುಮಾರ್ ಕೆ., ಸುದರ್ಶನ್ ಹಾಗೂ ಸಿಬ್ಬಂದಿಗಳು ಟ್ಯಾಂಕರ್ ವಶಕ್ಕೆ ಪಡೆದಿದ್ದಾರೆ‌.

ಘಟನೆ ಬಗ್ಗೆ ಮಾಹಿತಿ ಯರಿತು ಕಾರ್ಯಪ್ರವೃತ್ತರಾ ಪೊಲೀಸರು ಪ್ರಕರಣ ವರದಿಯಾದ ತೆಕ್ಕಟ್ಟೆಯಿಂದ ಹೆಮ್ಮಾಡಿಯವರೆಗೆ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಏಕಮುಖ ಸಂಚಾರ ವ್ಯವಸ್ಥೆ ಮಾಡಿದರು. ಪೊಲೀಸರಿಗೆ ಹಲವೆಡೆ ಸಾರ್ವಜನಿಕರು ಸಹಕಾರ ನೀಡಿದರು. ಶನಿವಾರ ಮಧ್ಯಾಹ್ನ 12 ಗಂಟೆಯವರೆಗೆ 15 ಕಿಮೀ ವ್ಯಾಪ್ತಿಯಲ್ಲಿ ಒನ್ ವೇ ಮಾಡಲಾಗಿದ್ದು ಸಂಭಾವ್ಯ ಅಪಘಾತ ತಪ್ಪಿಸಲು ಮುಂಜಾಗೃತಾ ಕ್ರಮ ವಹಿಸಲಾಗಿತ್ತು. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ

ದ್ವಿಚಕ್ರ ವಾಹನ ಸವಾರರು ಹಾಗೂ ಲಘು ವಾಹನಕ್ಕೆ ಸಮಸ್ಯೆಯಾಗುತ್ತಿದ್ದಂತೆ ಅಗ್ನಿಶಾಮಕ ದಳದವರು, ರಾಷ್ಟ್ರೀಯ ಹೆದ್ದಾರಿ ಗುತ್ತಿಗೆ ಕಂಪೆನಿಗಳು ಸ್ಥಳಕ್ಕೆ ದೌಡಾಯಿಸಿ ನೀರನ್ನು ಹರಿಸಿ ಸೋರಿಕೆಯಾದ ಸೋಪ್ ಆಯಿಲ್‌ನಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗದಂತೆ ಮಾಡಲು ಹರಸಾಹಸಪಟ್ಟರು.

Previous Post

ಬಿಜೆಪಿ ಸದಸ್ಯತ್ವ ವಿವಾದ : ತೆಲಿಕೆದ ಬೊಳ್ಳಿ ಖ್ಯಾತಿಯ ಕಾಪಿಕಾಡ್’ ಕಾಮಿಡಿ ಶೋಗೆ ಸೌದಿ ಅರೇಬಿಯಾದಲ್ಲಿ ‘ ಬಹಿಷ್ಕಾರದ ಬೆದರಿಕೆ..!

Next Post

ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ನಿಧಿಯಿಂದ ವಿದ್ಯುತ್ ಚಾಲಿತ ವಾಹನ ಹಸ್ತಾಂತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ನಿಧಿಯಿಂದ ವಿದ್ಯುತ್ ಚಾಲಿತ ವಾಹನ ಹಸ್ತಾಂತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved