Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ , ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ..!!

ಪ್ರಶಸ್ತಿಯ ಹಿಂದೆ ಹೋಗಬಾರದು- ಪ್ರವೀಣ್ ಕುಮಾರ್ ಶೆಟ್ಟಿ 

Dhrishya News by Dhrishya News
10/09/2024
in ಸುದ್ದಿಗಳು
0
ಹಿರಿಯ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ , ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ..!!
0
SHARES
11
VIEWS
Share on FacebookShare on Twitter

ಹೆಬ್ರಿ :ಸೆಪ್ಟೆಂಬರ್ 10:ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ ಸಂಸ್ಥೆ ತೆರೆಮರೆಯ ಸಾಧಕರನ್ನು ನಾಡಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ.ಅಂಕ ಗಳಿಕೆಯ ತರಬೇತಿಯೊಂದೇ ಶಿಕ್ಷಣವಾಗದೆ ಬದುಕು ಶಿಕ್ಷಣ ನೀಡುವ ಮತ್ತು ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವ ಪ್ರಯತ್ನವನ್ನು ಶಿಕ್ಷಣದ ಜೊತೆ ಮಾಡಿದಾಗ ನಮ್ಮ ಬದುಕು ಸುಂದರವಾಗುತ್ತದೆ ಎಂದು ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಾಡಿನ ಹೆಸರಾಂತ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ಕೊಡಮಾಡುವ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಶಿಕ್ಷಕರು ವಿದ್ಯಾರ್ಥಿಗಳ ಬದುಕಿನ ಆಶಾಕಿರಣ – ಸುನೀಲ್ ಕುಮಾರ್

ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸುವುದರ ಜತೆಗೆ ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣವಾಗಿದ್ದಾರೆ ಎಂದು ಚಾರ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಸುನೀಲ್ ಕುಮಾರ್ ಹೇಳಿದರು.

 ಸಮಾಜಮುಖಿ ಕಾರ್ಯ ಶ್ಲಾಘನೀಯ – ನಿತ್ಯಾನಂದ ಶೆಟ್ಟಿ 

 ಕೇವಲ ಪಠ್ಯ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನು ಗುರುತಿಸುವ ಚಾಣಕ್ಯ ಸಂಸ್ಥೆಯ ಸಮಾಜ ಮುಖಿ ಚಿಂತನೆ ಶ್ಲಾಘನೀಯ ಎಂದು ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಹೇಳಿದರು.

 ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಅವರ ಪುತ್ರ ಸನತ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೇ ವೀಣಾ ಯು.ಶೆಟ್ಟಿ ವಹಿಸಿದ್ದರು.ಇದೇ ಸಂದರ್ಭದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ ಹಾಗು ಜೇಸಿಐ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಸಮಾರಂಭದಲ್ಲಿ ಚಾರ ಜವಾಹರ ನವೋದಯ ವಿದ್ಯಾಲಯದ ಉಪ ಪ್ರಾಂಶುಪಾಲ ವಿ.ಕೆ. ಮನೋಹರ್, ನೇತಾಜಿ ಫ್ರೆಂಡ್ಸ್ ಕ್ಲಬ್‌ಮುದ್ರಾಡಿ ಇದರ ಅಧ್ಯಕ್ಷ ಸಂತೋಷ್ ಪೂಜಾರಿ ಬಲ್ಲಾಡಿ,ಜೇಸಿಐ ಅಧ್ಯಕ್ಷೆ ರಕ್ಷಿತಾ ಪುಟ್ಟಣ್ಣ ಭಟ್, ಪೂರ್ವಾಧ್ಯಕ್ಷ ಪ್ರಶಾಂತ್ ಪೈ,ಜೇಸಿರೆಟ್ ಪೂರ್ವಾದ್ಯಕ್ಷೆ ಅನಿತಾ ಪಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಚಾಣಕ್ಯ ಸಂಸ್ಥೆಯ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿ,ಮುದ್ರಾಡಿ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Previous Post

ರಾಜ್ಯದಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ..!!

Next Post

ನಾಳೆಯಿಂದ ಮೂರು ದಿನಗಳ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಾಳೆಯಿಂದ ಮೂರು ದಿನಗಳ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ..!

ನಾಳೆಯಿಂದ ಮೂರು ದಿನಗಳ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

29/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

29/07/2025
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025

Recent News

ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

29/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

29/07/2025
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved