Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉದ್ಯಾವರ : ಸ್ನೇಹಾಲಯಕ್ಕೆ ದಿನಸಿ ವಸ್ತುಗಳ ವಿತರಣೆ..!!

Dhrishya News by Dhrishya News
26/09/2024
in ಸುದ್ದಿಗಳು
0
ಉದ್ಯಾವರ : ಸ್ನೇಹಾಲಯಕ್ಕೆ ದಿನಸಿ ವಸ್ತುಗಳ ವಿತರಣೆ..!!
0
SHARES
13
VIEWS
Share on FacebookShare on Twitter

ಉದ್ಯಾವರ:ಸೆಪ್ಟೆಂಬರ್ 26: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟನ ಸ್ನೇಹಾಲಯದ ವಿದ್ಯಾರ್ಥಿಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜವರು ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ. ಫಾ ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ ಅಗಲುವಿಕೆ ನಮಗೆ ತುಂಬಲಾಗದ ನಷ್ಟವಾಗಿದೆ. ಅದರ ಸಲುವಾಗಿ ಈ ಕಾರ್ಯಕ್ರಮದ ಎಲ್ಲಾ ಶ್ರೇಯಸ್ಸು ದಿ. ಫಾ ವಲೇರಿಯನ್ ಮೆಂಡೋನ್ಸ ಇವರಿಗೆ ಅರ್ಪಿಸುತ್ತೇನೆ. ಅವರಿಗೆ ಗೌರವ ಸಮರ್ಪಣೆಯಿಂದ ನಾವು ಮೊದಲು ಮಾನಸ ಪುನರ್ವಸತಿ ಕೇಂದ್ರ ಪಾಂಬೂರು ಇಲ್ಲಿನ ವಿಶೇಷ ಚೇತನ ಮಕ್ಕಳೊಂದಿಗೆ ಆಚರಿಸಿಕೊಂಡಿದ್ದು, ಇಂದು ಈ ಕಾರ್ಯಕ್ರಮವನ್ನು ಇಲ್ಲಿ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸ್ಥಳೀಯ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ಉದ್ಯಾವರದ ಧರ್ಮ ಗುರುಗಳಾದ ರೇ/ಫಾ/ ಅನಿಲ್ ಡಿಸೋಜ ಇವರು ಮಾತನಾಡಿ ಸಂಸ್ಥೆಯಿಂದ ಇನ್ನಷ್ಟು ಜವಾಬ್ದಾರಿಯುತವಾದ ಸಾಮಾಜಿಕ ಕಾರ್ಯಕ್ರಮಗಳು ಮೂಡಿ ಬರಲಿ ಎಂದು ಶುಭ ಹಾರೈಸಿದರು. 

ಸೈಂಟ್ ಮೇರಿಸ್ ಕ್ಯಾಥೆಡ್ರಲ್ ಬ್ರಹ್ಮಾವರ ಇಲ್ಲಿನ ಧರ್ಮ ಗುರುಗಳಾದ ಫಾ. ಲಾರೆನ್ಸ್ ಡೆವಿಡ್ ಕ್ರಾಸ್ತ ಇವರು ಮಾತನಾಡಿ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ದಿ. ವಲೆರಿಯನ್ ಮೆಂಡೋನ್ಸ ಇವರು ನುಡಿದಂತೆ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಸಂಸ್ಥೆಯು ಬೆಳೆಯುತ್ತಾ ಇತರರನ್ನು ಬೆಳೆಸಿಕೊಂಡು ಸಾಗಲಿ ಎಂದು ಶುಭ ಹಾರೈಸಿದರು. 

ಮುಖ್ಯ ಅತಿಥಿ ಸೀಮಾ ಎಸ್ ಹಳದಿಪುರರವರು ಮಾತನಾಡಿ, ಮಹಿಳೆಯರು ಇಂದು ಉನ್ನತ ಸ್ಥಾನವನ್ನು ಅಲಂಕರಿಸಿಕೊಂಡು ಜವಾಬ್ದಾರಿಯುತವಾಗಿ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಅವಿರತ ಪರಿಶ್ರಮದೊಂದಿಗೆ ಉನ್ನತ ಮಟ್ಟದಲ್ಲಿ ಸ್ಥಾನವನ್ನು ಅಲಂಕರಿಸಿಕೊಂಡಿದ್ದಾರೆ. ಇಂದು ಚಪ್ಪಾಳೆ ತಟ್ಟುವ ಕೈಗಳು ಮುಂದೆ ಚಪ್ಪಾಳೆಯನ್ನು ಗಿಟ್ಟಿಸಿಕೊಳ್ಳುವುದೇ ಸಾಧನೆ ಎಂದು ಸಂಸ್ಥೆಯ ವಿದ್ಯಾರ್ಥಿನಿಯರಿಗೆ ಕಿವಿ ಮಾತು ತಿಳಿಸಿದರು.

ಮುಖ್ಯ ಅತಿಥಿ ಮಿಲಾಗ್ರೀಸ್ ಕಲ್ಯಾಣ್ಪುರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನೇರಿ ಕರ್ನೆಲಿಯೊ ಮಾತನಾಡಿ, ಸಂಸ್ಥೆಯು ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಮತ್ತು ದಿ. ಫಾ ವಲೇರಿಯನ್ ಮೆಂಡೋನ್ಸ ಇವರ ಸ್ಮರಣಾರ್ಥವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ಭಾಗವಹಿಸಿದ್ದಕ್ಕೆ ಸಂತೋಷವಾಗಿದೆ. ಈ ಸಂಸ್ಥೆಯು ಹೆಚ್ಚಿನ ಶಾಖೆಗಳನ್ನು ಪ್ರಾರಂಭಿಸಿ ಇನ್ನು ಅನೇಕ ರೀತಿಯಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸೇವೆಯನ್ನು ನೀಡಲಿ ಎಂದು ಶುಭ ಹಾರೈಸಿದರು.

ಸ್ಥಳೀಯ ಸಾಮಾಜಿಕ ಕಾರ್ಯಕರ್ತರ ಮತ್ತು ಖ್ಯಾತ ನಿರೂಪಕರು ಸ್ಟೀವನ್ ಕುಲಾಸೊ ಸಂಸ್ಥೆಯ ಏಳಿಗೆಯ ಬಗ್ಗೆ ಶ್ಲಾಘಿಸಿದರು ಹಾಗೂ ಶುಭ ಹಾರೈಸಿದರು. 

 ಸ್ಥಳೀಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮಗಳಾದ ವo. ಫಾ. ಅನಿಲ್ ಡಿಸೋಜ ಮತ್ತು ಬ್ರಹ್ಮಾವರ ಸಂತ ಮೇರಿಸ್ ಕಾಥೆದ್ರಲ್ ನ ಧರ್ಮಗುರು ವo. ಫಾ. ಡೇವಿಡ್ ಕ್ರಾಸ್ತಾ ಆಶೀರ್ವದೊಂದಿಗೆ ಶುಭ ಹಾರೈಸಿದರು.

ಸಂತ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟಿನ ಸುಪಿರಿಯರ್ ಸಿ. ಲೀನಾ ಇವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ ನ ಲೆಕ್ಕ ವ್ಯವಸ್ಥಾಪಕರಾದ ಕುಮಾರ್ ಹೆಚ್ ಎನ್, ಕಿರಿಯ ಸಹಾಯಕರಾದ ದೀಕ್ಷಿತ್ ನಾಯ್ಕ್ ಮತ್ತು ಸಂಸ್ಥೆಯ ಪರಿಚಾರಕರಾದ (ಅಟೆಂಡರ್) ವಿವಿಯನ್ ಮರ್ವಿನ್ ನೊರೊನ್ಹಾ ಹಾಗೂ ರೋಟರಿ ಕ್ಲಬ್ ಉದ್ಯಾವರದ ಸದಸ್ಯರು ಉಪಸ್ಥಿತರಿದ್ದರು.

Previous Post

ಸೌದಿಯಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಗಂಗೊಳ್ಳಿ ಮೂಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!!

Next Post

ಕಾರ್ಕಳ :ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಸೆ.29ರಂದು ಹೃದಯಕ್ಕಾಗಿ ನಡಿಗೆ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಸೆ.29ರಂದು ಹೃದಯಕ್ಕಾಗಿ ನಡಿಗೆ ಕಾರ್ಯಕ್ರಮ..!!

ಕಾರ್ಕಳ :ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಸೆ.29ರಂದು ಹೃದಯಕ್ಕಾಗಿ ನಡಿಗೆ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved