Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವೈಭವದ ವಿರಾಟ್ ವಿಶ್ವಕರ್ಮ ಮಹೋತ್ಸವ : ಸಾಧಕರಿಗೆ ವಿಶ್ವಕರ್ಮ ಶ್ರೀ, ವಿಶ್ವಕರ್ಮ ಸೇವಾ ರತ್ನ ಸೇರಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ..!!

Dhrishya News by Dhrishya News
28/09/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಬೆಂಗಳೂರು : ಸೆಪ್ಟೆಂಬರ್ 28: ವಿಶ್ವಕರ್ಮ ಸಮಾಜ ನಿಜವಾದ ಮೊದಲ ಇಂಜಿನಿಯರ್ ಗಳು. ಅವರಲ್ಲಿರುವ ಕುಶಲತೆ ಅಪಾರ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ವಿಶ್ವಕರ್ಮ ನಾಡೋಜ ಡಾ.ಬಿ.ಎಂ. ಉಮೇಶ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿರಾಟ್ ವಿಶ್ವಕರ್ಮ ಮಹೋತ್ಸವವನ್ನು ಉದ್ಘಾಟಿಸಿ ಸಾಧಕರಿಗೆ ವಿಶ್ವಕರ್ಮ ಶ್ರೀ, ವಿಶ್ವಕರ್ಮ ಸೇವಾ ರತ್ನ ಸೇರಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯ ಭವ್ಯವಾದ ಶ್ರಮ ಸಂಸ್ಕೃತಿಯನ್ನು ಬೆಳೆಸಿಕೊಂಡು, ಉಳಿಸಿಕೊಂಡು ಬಂದಿದೆ. ನಿಮ್ಮಲ್ಲಿ ಅಗಾಧ ಪ್ರತಿಭೆ ಇದ್ದು, ಮುಂದಿನ ಪೀಳಿಗೆಗೆಯನ್ನು ಇನ್ನಷ್ಟು ಸಶಕ್ತಗೊಳಿಸಬೇಕಾಗಿದೆ. ಸಮುದಾಯದ ಸೃಜನ ಶೀಲತೆಯನ್ನು ಪ್ರೋತ್ಸಾಹಿಸಿ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದರು.

ಯಾವುದೇ ಸಮುದಾಯಕ್ಕೆ ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ಅತ್ಯಂತ ಅಗತ್ಯವಾಗಿದೆ. ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶವಿದೆ. ಪ್ರತಿಯೊಬ್ಬರೂ ಬೆಳೆಯಲು ಅವಕಾಶವಿದೆ. ಎಲ್ಲರೂ ಸಶಕ್ತರಾದರೆ ದೇಶ ಸೂಪರ್ ಪವರ್ ಆಗಲಿದೆ. ವಿಶ್ವಕರ್ಮ ಸಮಾಜಕ್ಕೆ ಸರ್ಕಾರದ ಬೆಂಬಲ ಇದ್ದೇ ಇರುತ್ತದೆ ಎಂದರು.

ಚಿತ್ರನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಮಾತನಾಡಿ, ಪ್ರತಿಯೊಬ್ಬರೂ ಕುಲದ ನೆಲೆಯನ್ನು ಗೌರವಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕು. ಸಮುದಾಯದ ನೊಂದವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರೂಪಿಸಿರುವ ವಿಶ್ವಕರ್ಮ ಯೋಜನೆ ಅತ್ಯುತ್ತಮವಾಗಿದ್ದು, 13 ಸಾವಿರ ಕೋಟಿ ರೂಪಾಯಿ ಮೀಸಲಿರಿಸಿದ್ದಾರೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರ ಅವರನ್ನು ಸಮುದಾಯದಿಂದ ಗೌರವಿಸಲಾಯಿತು. ಆಡಳಿತ ಕ್ಷೇತ್ರದಲ್ಲಿ ಭಾರತೀಯ ಸಮಾಚಾರ ಸೇವೆ ಅಧಿಕಾರಿ ಸುಹಾಸ್ ರಾಮಚಂದ್ರಚಾರ್, ಕೆ.ಎ.ಎಸ್ ಅಧಿಕಾರಿ ಆರ್. ಉಮಾದೇವಿ, ರಾಜಕೀಯದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾ ಪೌರ ರಾಮಪ್ಪ ಬಡಿಗೇರ್, ಚಲನಚಿತ್ರದಲ್ಲಿ ಚಲನಚಿತ್ರ ಕಲಾವಿದೆ ವೀಣಾ ಸುಂದರ್, ಸಮುದಾಯ ಸೇವಾ ಕ್ಷೇತ್ರದಲ್ಲಿ ಬಿ.ಎನ್.ವಿ. ರಾಜಶೇಖರ್ ಅವರಿಗೆ ವಿಶ್ವಕರ್ಮ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಂಗೀತ ಕ್ಷೇತ್ರದಲ್ಲಿ ರಾಜೇಶ್ ಕೃಷ್ಣನ್, ಶಾಸ್ತ್ರೀಯ ನೃತ್ಯಪಟು ಡಾ. ಶ್ರೀಧರ್, ಆಡಳಿತ ಕ್ಷೇತ್ರದಲ್ಲಿ ಡಿಜಿಪಿ ನಂಜುಂಡಸ್ವಾಮಿ, ಕಲಾವಿದ ಡಿ. ಮಹೇಂದ್ರ, ಬರಹಗಾರ ನಾಡೋಜ ಎಸ್. ಷಡಾಕ್ಷರಿ, ಯೋಗ ಗುರು ಆರಾಧ್ಯ, ಶಿಕ್ಷಣ ಕ್ಷೇತ್ರದಲ್ಲಿ ಬಸವನಗುಡಿಯ ನ್ಯಾಷನಲ್ ಕಾಲೇಜ್, ವಾಸವಿ ಆಸ್ಪತ್ರೆ, ಪಂಚಶಿಲ್ಪಿಗಳಾದ ರಾಜಗೋಪಾಲ ಆಚಾರ್ಯ, ನಂಜುಂಡಸ್ವಾಮಿ, ವೆಂಕಟರಮಣಾಚಾರಿ, ಎಂ. ಶಂಕರ್ ಮೂರ್ತಿ, ಎನ್ ಶಂಕರಾಚಾರ್ಯ ಹಾಗೂ ಗೌರವ ಪ್ರಶಸ್ತಿಗಳನ್ನು ಪಿ.ಲಿಂಗಾಚಾರ್, ಬಾಲಸುಬ್ರಹ್ಮಣ್ಯ ಚಾರಿ, ಗಿರಿಧರ್ ಲಾಲ್ ಜಹಂಗೀಡ್, ಮಾನಪ್ಪ ಪತ್ತಾರ, ಕೆ.ಪಿ ಸ್ವಾಮಿ, ಉಮಾಶಂಕರಾಚಾರ್ಯ ಅವರಿಗೆ ವಿಶ್ವಕರ್ಮ ಸೇವಾ ರತ್ನ ಪ್ರಶಸ್ತಿನೀಡಿ ಗೌರವಿಸಲಾಯಿತು.

ಸ್ಮಾರಕ ಪ್ರಶಸ್ತಿ ವಲಯದಲ್ಲಿ ಖಂಜಿರ ವಿದ್ವಾನ್ ಎಚ್.ಪಿ. ರಾಮಾಚಾರ್, ಖ್ಯಾತ ಸಂಗೀತ ಹಾಗೂ ಮೃದಂಗ ವಿದ್ವಾಂಸರು ಆನೂರು ಅನಂತ ಕೃಷ್ಣ ಶರ್ಮ, ತುಮಕೂರಿನ ಶಿಲ್ಪಿ ದಿ. ಕೆ.ಎಚ್. ರಾಜಶೇಖರಚಾರ್ ಪ್ರಶಸ್ತಿಗೆ ಸ್ವರ್ಣ ಶಿಲ್ಪಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಮಾಜಿ ಶಾಸಕಿ ಸೌಮ್ಯ ರೆಡ್ಡಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸೋಮಶೇಖರ್, ಪ್ರತಿಷ್ಠಾನದ ಅಧ್ಯಕ್ಷ ಪ್ರಭಾಕರ್, ಮುಖಂಡರಾದ ವೇದಮೂರ್ತಿ, ಶಿಲ್ಪಿ ಹೊನ್ನಪ್ಪಾಚಾರ್, ಜಿ.ಶಂಕರ್, ಚಂದ್ರಶೇಖರ ಚಾರಿ, ಬಿ. ರುದ್ರಾಚಾರ್, ಎಸ್. ನಂಜುಂಡ ಪ್ರಸಾದ್, ಡಾ. ಆರ್. ಮಧುಸೂದನ್, ಬಾಲಾಜಿ ಹಾಗೂ ಆರ್. ಪ್ರಸನ್ನ ಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Previous Post

ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ, ಉಡುಪಿ ‘ಶ್ರೀಕೃಷ್ಣಮಠದಲ್ಲಿ ನವರಾತ್ರಿ ಆಚರಣೆ’..!!

Next Post

ಶ್ರೀ ಕೃಷ್ಣ ಮಠಕ್ಕೆ ಮೈಸೂರಿನ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಕೃಷ್ಣ ಮಠಕ್ಕೆ ಮೈಸೂರಿನ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಕುಂದಾಪುರದಲ್ಲಿ ಪ್ರಕರಣ ದಾಖಲು…!

ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಕುಂದಾಪುರದಲ್ಲಿ ಪ್ರಕರಣ ದಾಖಲು…!

26/03/2026

Recent News

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಕುಂದಾಪುರದಲ್ಲಿ ಪ್ರಕರಣ ದಾಖಲು…!

ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಕುಂದಾಪುರದಲ್ಲಿ ಪ್ರಕರಣ ದಾಖಲು…!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved