Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಅಪಾಯಕಾರಿ ಚೀನಾ ಬೆಳ್ಳುಳ್ಳಿ ಮಾರಾಟ ಆರೋಪ : ಆದಿಉಡುಪಿ APMC ಮಾರುಕಟ್ಟೆಗೆ ನಗರಸಭಾ ಅಧಿಕಾರಿಗಳಿಂದ ದಾಳಿ ಪರಿಶೀಲನೆ..!!

Dhrishya News by Dhrishya News
01/10/2024
in ಸುದ್ದಿಗಳು
0
0
SHARES
84
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 01:ಉಡುಪಿಯ ಆದಿಉಡುಪಿ ಎಪಿಎಂಸಿ ಮಾರುಕಟ್ಟೆಯಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ l ಉಡುಪಿ ನಗರಸಭಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ

ರಾಸಾಯನಿಕ ಮಿಶ್ರಿತ ಚೀನಾ ಬೆಳ್ಳುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನಂತೆ ಉಡುಪಿ ನಗರಸಭಾ ಪೌರಾಯುಕ್ತ ರಾಯಪ್ಪ ನೇತೃತ್ವದ ತಂಡ ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಗೆ ಆಗಮಿಸಿ ಪರಿಶೀಲನೆ ನಡೆಸಿತು.

ಈ ಸಂದರ್ಭದಲ್ಲಿ ಎಪಿಎಂಸಿ ಅಧಿಕಾರಿಗಳು ಕೂಡ ಹಾಜರಿದ್ದರು. ಬಳಿಕ ವ್ಯಾಪಾರಸ್ಥರಿಂದ ಮಾಹಿತಿ ಪಡೆದು, ಮಾರಾಟಕ್ಕೆ ತಂದಿದ್ದ ರಾಸಾಯನಿಕ ಮಿಶ್ರಿತ ಚೀನಾ ಬೆಳ್ಳುಳ್ಳಿ ಎಂಬ ಶಂಕೆಯ ಮೇರೆಗೆ ಸುಮಾರು 12 ಟನ್ ಬೆಳ್ಳುಳ್ಳಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. 

‘ಎಪಿಎಂಸಿ ಮಾರುಕಟ್ಟೆಗೆ ಚೀನಾದ ಬೆಳ್ಳುಳ್ಳಿ ಬಂದಿದೆ ಎಂಬ ಮಾಹಿತಿ ಬಂದ ಕೂಡಲೇ ಆಗಮಿಸಿ ಪರಿಶೀಲನೆ ಮಾಡಿದ್ದೇವೆ. ಇಲ್ಲಿಗೆ ಬಂದ ಎಲ್ಲ ಬೆಳ್ಳುಳ್ಳಿಗಳನ್ನು ವಶಪಡಿಸಿಕೊಂಡು, ಅದರ ಮಾದರಿಯನ್ನು ಮಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಲ್ಲಿನ ವರದಿಯಂತೆ ಮುಂದಿನ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ. 

ಉಡುಪಿ ನಗರಸಭೆ ವ್ಯಾಪ್ತಿಯ ಮಾರುಕಟ್ಟೆ, ಎಪಿಎಂಸಿಯಲ್ಲಿ ಯಾವುದೇ ಕಾರಣಕ್ಕೂ ಇಂತಹ ರಾಸಾಯನಿಕ ಮಿಶ್ರಿತ ಆಹಾರ ಪದಾರ್ಥ, ತರಕಾರಿ, ಬೆಳ್ಳುಳ್ಳಿ ಮಾರಾಟ ಮಾಡಲು ಅವಕಾಶ ನೀಡಲ್ಲ. ಅಂತಹ ತರಕಾರಿಗಳನ್ನು ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು. ಅಲ್ಲದೆ ಅವುಗಳ ಬಗ್ಗೆ ನಿಗಾ ಇಡಲು ಸಿಬ್ಬಂದಿಗಳನ್ನು ಕೂಡ ನೇಮಿಸಲಾಗುವುದು ಎಂದು ಅವರು ತಿಳಿಸಿದರು.

Previous Post

ಕೊಡವೂರಿನ ಮಹಿಳೆ ನಾಪತ್ತೆ: ಪ್ರಕರಣ ಧಾಖಲು .!!

Next Post

ಉಡುಪಿ ಉಚ್ಚಿಲ ದಸರಾ ಉತ್ಸವ -2024:ಹೊರೆಕಾಣಿಕೆ ನೀಡಲಿಚ್ಚಿಸುವ ಭಕ್ತರಿಗೆ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಉಚ್ಚಿಲ ದಸರಾ ಉತ್ಸವ -2024:ಹೊರೆಕಾಣಿಕೆ ನೀಡಲಿಚ್ಚಿಸುವ ಭಕ್ತರಿಗೆ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

27/03/2026

Recent News

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved