Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ನವೆಂಬರ್ 9 ರಿಂದ ಮೂರು ದಿನ  ಶ್ರೀನಿವಾಸ ಉತ್ಸವ ಬಳಗದವರಿಂದ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ..!!  

Dhrishya News by Dhrishya News
05/11/2024
in ಸುದ್ದಿಗಳು
0
ಉಡುಪಿ : ನವೆಂಬರ್ 9 ರಿಂದ ಮೂರು ದಿನ  ಶ್ರೀನಿವಾಸ ಉತ್ಸವ ಬಳಗದವರಿಂದ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ..!!   
0
SHARES
3
VIEWS
Share on FacebookShare on Twitter

ಉಡುಪಿ : ನವೆಂಬರ್ 05:ಹರಿದಾಸರ ಅಚ್ಚುಮೆಚ್ಚಿನ ಕೃಷ್ಣನ ನೆಲವೀಡಾದವೀಡಾದ ಉಡುಪಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ವಾದಿರಾಜ ಸಂಶೋಧನಾ ಪ್ರತಿಷ್ಠಾನ, ಬೆಂಗಳೂರಿನ ಶ್ರೀ ಶ್ರೀನಿವಾಸ ಉತ್ಸವ ಬಳಗ ಸಂಯುಕ್ತ ಆಶ್ರಯದಲ್ಲಿ ನವಂಬರ್ 9 ರಿಂದ 11 ರವರೆಗೆ ಶ್ರೀ ವಿಜಯದಾಸರ ಆರಾಧನಾ ಅಂಗವಾಗಿ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ, ಶ್ರೀನಿವಾಸ ಕಲ್ಯಾಣ ಮಹೋತ್ಸವ, ಸಹಸ್ರ ಕಂಠ ಗಾಯನ – ಭಜನಾ ಮಂಡಳಿಗಳ ಸಮಾವೇಶ, ಮಧ್ವ ಪುರಂದರ ಪ್ರಶಸ್ತಿ ಪ್ರದಾನ ಮೊದಲಾದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ

ನವಂಬರ್ 9 ಬೆಳಿಗ್ಗೆ 9:30ಕ್ಕೆ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸಮ್ಮೇಳನವನ್ನು ಉದ್ಘಾಟಿಸುವರು.

ಕಿರಿಯ ಪಟ್ಟ ಶ್ರೀಸುಶ್ರೀ0ದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಬೆಂಗಳೂರು ಬೇಲಿ ಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ದಿಕ್ಸೂಚಿ ಭಾಷಣವನ್ನು ಮಾಡುವರು.

ಖ್ಯಾತ ದಾಸ ಸಾಹಿತ್ಯ ಸಂಶೋಧಕ ಡಾ. ಎ.ಬಿ. ಶ್ಯಾಮಾಚಾರ್ಯರು ಸಮ್ಮೇಳನದ ಅಧ್ಯಕ್ಷ ರಾಗಿರುತ್ತಾರೆ. 

ಅವರು ರಚಿಸಿರುವ ‘ವಿಜಯ ಚಿಂತನಾಮೋದ’ ಹಾಗು ವಾದಿರಾಜ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ಬಿ ಗೋಪಾಲಾಚಾರ್ಯ ಪ್ರಧಾನ ಸಂಪಾದಕತ್ವದಲ್ಲಿ ಮತ್ತು ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಸಂಪಾದಕತ್ವದಲ್ಲಿ ಸಮ್ಮೇಳನದಲ್ಲಿ ಮಂಡಿಸುವ ಪ್ರಬಂಧಗಳ ಸಂಕಲನ ‘ವಿಜಯ ವಿಠಲ’ ಕೃತಿಗಳು ಹಾಗೂ ಸರ್ವಜ್ಞ ಮಾಸ ಪತ್ರಿಕೆಯ ವಿಶೇಷ ಸಂಚಿಕೆ ಲೋಕಾರ್ಪಣೆಯಾಗಲಿದೆ. 

ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ, ಯು ಎಸ್ ಎ ಸಂಶೋಧಕ ವಿದ್ವಾಂಸ ಕೇಶವ ರಾವ್ ತಾಡಪತ್ರಿ ಮತ್ತು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

 ಸೇಡಂನ ದಾಸಧೇನು ಟ್ರಸ್ಟ್ ಅಧ್ಯಕ್ಷ ಡಾ.ವಾಸುದೇವ ಅಗ್ನಿಹೋತ್ರಿ ಆಶಯ ಭಾಷಣ ಮಾಡುವರು. ಖ್ಯಾತ ಹಿಂದೂಸ್ತಾನಿ ಗಾಯಕ ಪಂ. ಡಾ.ಮುದ್ದು ಮೋಹನ್ ರವರಿಂದ ದಾಸವಾಣಿ ಕಾರ್ಯಕ್ರಮ ನಡೆಯಲಿದೆ.

 ನಂತರ ಸಮ್ಮೇಳನ ದಲ್ಲಿ ನೊಂದಾಯಿಸಿಕೊಂಡ ಪ್ರತಿನಿಧಿ ಗಳಿಂದ ಪ್ರಬಂಧ ಮಂಡನೆ- ವಿಚಾರಗೋಷ್ಠಿ, ಸಂಜೆ ಶ್ರೀಶೈಲ ಪ್ರಭ ಕನ್ನಡ ವಿಭಾಗದ ವಿದ್ವಾನ್ ಗೊಗ್ಗಿ ಬಲರಾಮಚಾರ್ಯರಿಂದ ಮತ್ತು ಗುಂಡೂರು ಪವನ ಕುಮಾರ್ ಗಂಗಾವತಿ ರವರಿಂದ ವಿಜಯ ದಾಸರ ಕುರಿತು ಧಾರ್ಮಿಕ ಪ್ರವಚನ ಏರ್ಪಡಿಸಲಾಗಿದೆ.

 ನವೆಂಬರ್ 10 ಭಾನುವಾರ ಬೆಳಿಗ್ಗೆ 9.00ರಿಂದ ಕಲಿಯುಗದ ಆರಾಧ್ಯ ದೈವ ತಿರುಮಲ ಶ್ರೀನಿವಾಸನ ವೈಭವದ ಕಲ್ಯಾಣ ಮಹೋತ್ಸವ- ಶ್ರೀನಿವಾಸ ಉತ್ಸವ ಬಳಗದ ತಾಯಲೂರು ವಾದಿರಾಜ ನೇತೃತ್ವದಲ್ಲಿ ಡಾ. ಬಿ ಗೋಪಾಲಾಚಾರ್ಯರ ವ್ಯಾಖ್ಯಾನ,ವಿದ್ವಾನ್ ಡಾ.ರಾಯಚೂರು ಶೇಷಗಿರಿ ದಾಸ್ ಮತ್ತು ವಿದುಷಿ ಶುಭ ಸಂತೋಷ ರವರ ಗಾಯನದೊಂದಿಗೆ ನಡೆಯಲಿದೆ

ಕಲಬುರ್ಗಿಯ ಉದ್ಯಮಿ ಸಂಜೀವ ಗುಪ್ತ, ದಾಸ ಸೌರಭದ ಪಾಂಡುರಂಗ ರಾವ್ ಕಂಪ್ಲಿ ಮತ್ತು ಕೆ ಆರ್ ಗುರುರಾಜ ರಾವ್ ಕುಟುಂಬದವರು ವಿಶೇಷ ಸೇವಾಕರ್ತರಾಗಿರುತ್ತಾರೆ.

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಉಡುಪಿ ತಾಲೂಕು ಇವರ ಸಹಯೋಗದಲ್ಲಿ ವಿದುಷಿ ಉಷಾ ಹೆಬ್ಬಾರ್ ನೇತೃತ್ವದಲ್ಲಿ ಸಹಸ್ರ ಕಂಠ ಗಾಯನ ಮತ್ತು ಭಜನಾ ಮಂಡಳಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. 

ಬೆಂಗಳೂರಿನ ಖ್ಯಾತ ವೈದ್ಯ ಡಾ.ವೇಣುಗೋಪಾಲ್ ಮತ್ತು ಮುಂಬೈನ ಎನ್ ಆರ್ ರಾವ್ ವಿಶೇಷ ಆಹ್ವಾನಿತರಾಗಿರುವರು. 

ಇದೇ ಸಂದರ್ಭದಲ್ಲಿ ಸಾಫಲ್ಯ ಮೂವೀಸ್ ನಿರ್ಮಾಣದ ಭಕ್ತಿ ಪ್ರಧಾನ ‘ಸಂಕೀರ್ತನ ‘ ಚಲನಚಿತ್ರ ಟೀಸರ್ ಬಿಡುಗಡೆಗೊಳ್ಳಲಿದೆ. 

ಖ್ಯಾತ ಚಲನಚಿತ್ರ ನಟ ಶ್ರೀಧರ್, ನಿರ್ಮಾಪಕ ಪದ್ಮಕಲಾ ಗುಂಡು ರಾವ್, ನಿರ್ದೇಶಕ ಕಲಾ ಗಂಗೋತ್ರಿ ಮಂಜು, ಸಂಭಾಷಣಕಾರ ಜೆ ಎಂ ಪ್ರಹ್ಲಾದ್, ಸಂಗೀತ ನಿರ್ದೇಶಕ ಪ್ರವೀಣ್ ಡಿ ರಾವ್ ಹಾಗೂ ಚಿತ್ರ ತಂಡ ಭಾಗವಹಿಸಲಿದ್ದಾರೆ 

ಶ್ರೀ ವಿಜಯ ದಾಸರ ಆರಾಧನಾ ಮಹೋತ್ಸವ – ನವೆಂಬರ್ 11 ಸೋಮವಾರ ಬೆಳಗ್ಗೆ ಏಳರಿಂದ ನಗರ ಸಂಕೀರ್ತನೆ ಯಾಯೀವಾರ ನಡೆಯಲಿದೆ

ಹುಬ್ಬಳ್ಳಿಯ ಲೆಕ್ಕಪರಿಶೋಧಕ ಸಿ ಆರ್ ಢವಳಗಿ ಉಪಸ್ಥಿತಿಯಲ್ಲಿ ಇಂಗ್ಲೀಷಿನಲ್ಲಿ ಪ್ರಬಂಧ ಮಂಡನೆ, ಸಂಜೆ ಐದರಿಂದ ಪರ್ಯಾಯ ಶ್ರೀಪಾದದ್ವಯರ ದಿವ್ಯ ಉಪಸ್ಥಿತಿಯಲ್ಲಿ ರಥ ಬೀದಿಯಲ್ಲಿ ಶ್ರೀ ವಿಜಯದಾಸರ ಭಾವಚಿತ್ರದ ಶೋಭಾ ಯಾತ್ರೆ ನಡೆಯಲಿದೆ.

ಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ, ಹಿರಿಯ ವೈದ್ಯ -ಕಲಾಪೋಷಕ ಡಾ. ಎಂ ಆರ್ ವಿ ಪ್ರಸಾದ್ ರವರಿಗೆ ಮಧ್ವ ಪುರಂದರ ಪ್ರಶಸ್ತಿ ಪ್ರದಾನ, ಮೈಸೂರು ವಿಶ್ವವಿದ್ಯಾಲಯ ಪ್ರಸಾರಂಗದ ಸಹ ನಿರ್ದೇಶಕ ಡಾ. ಬಿ ಎಸ್ ಅನಿಲ ಕುಮಾರ ಬೊಮ್ಮಘಟ್ಟ ರವರು ಸಮಾರೋಪ ನುಡಿಗಳನ್ನಾಡುವರು.

 ಶ್ರೀವಾರಿ ಫೌಂಡೇಶನ್ ಅಧ್ಯಕ್ಷ ಎಸ್.ವೆಂಕಟೇಶಮೂರ್ತಿ, ಭಾರತ ವಿಕಾಸ ಸಂಗಮ ಮಹಿಳಾ ವಿಭಾಗದ ಹುಬ್ಬಳ್ಳಿಯ ರೂಪಾ ಢವಳಗಿ,ಹರಿದಾಸ ಸಂಪದ ಟ್ರಸ್ಟ್ ಕಾರ್ಯದರ್ಶಿ ಮಧುಸೂದನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಈ ಮೂರು ದಿನಗಳ ಸಮಾವೇಶದಲ್ಲಿ ವಿದ್ವಾಂಸರಾದ ಡಾ. ಎನ್ ಕೆ ರಾಮಶೇಷನ್, ಪರಶುರಾಮ ಬೆಟಗೇರಿ, ವಾರುಣಿ ಜಯತೀರ್ಥ, ಲಕ್ಷ್ಮಿಕಾಂತ್ ಮೋಹರೀರ, ಚಿಪ್ಪಗಿರಿ ಮೋಹನ್ ಮೊದಲಾದರು ಭಾಗವಹಿಸುವರು .

 ಪ್ರಣವ ಮೀಡಿಯಾ ಹೌಸ್ ಪ್ರಕಾಶನ, ಎಂಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್, ಭಾರತೀಯ ಸ್ಟೇಟ್ ಬ್ಯಾಂಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೊದಲಾದ ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪುತ್ತಿಗೆ ಮಠದ ದಿವಾನರು ಮತ್ತು ಶ್ರೀನಿವಾಸ ಉತ್ಸವ ಬಳಗದ ಟಿ ವಾದಿರಾಜರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Previous Post

ಉಡುಪಿ :ಗೃಹಲಕ್ಷ್ಮಿ ಯೋಜನೆಯ ಬಂದ ಹಣದಿಂದ ಕವಾಟು ಖರೀದಿಸಿದ ಮಹಿಳೆ..!!

Next Post

ಉಡುಪಿ : ಯತಿ ಸಮಾಗಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಯತಿ ಸಮಾಗಮ..!!

ಉಡುಪಿ : ಯತಿ ಸಮಾಗಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved