Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನವೆಂಬರ್ 24 ರಂದು ಉದ್ಯಾವರದಲ್ಲಿ ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ..!!

Dhrishya News by Dhrishya News
06/11/2024
in ಸುದ್ದಿಗಳು
0
ನವೆಂಬರ್ 24 ರಂದು ಉದ್ಯಾವರದಲ್ಲಿ ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ..!!
0
SHARES
37
VIEWS
Share on FacebookShare on Twitter

ಉದ್ಯಾವರ: ನವೆಂಬರ್ 06: ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಲಯನ್ಸ್ ಜಿಲ್ಲೆ 317Cಯ ಲಯನ್ ದಂಪತಿಗಳಿಗೆ ವಿನೂತನ ರೀತಿಯ ಆದರ್ಶ ದಂಪತಿ ಸ್ಪರ್ಧೆ ಉದ್ಯಾವರ ಚರ್ಚ್ ವಠಾರದಲ್ಲಿ ನವಂಬರ್ 24 ಆದಿತ್ಯವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ .

ಎಚ್’ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯ ಪೋಸ್ಟರ್ ಅನ್ನು ಎಚ್’ಪಿಆರ್ ಫಿಲಂಸ್ ಮುಖ್ಯಸ್ಥ ಮತ್ತು ಎಲ್’ಸಿಯಫ್ ಕೋಆರ್ಡಿನೇಟರ್ ಲಯನ್ ಹರಿಪ್ರಸಾದ್ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ ಡಾ. ಶೇಕ್ ವಹಿದ್ ಉಡುಪಿ, ಕಾಪು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಮತ್ತು ಪತ್ರಕರ್ತ ರಾಕೇಶ್ ಕುಂಜೂರು, ಪ್ರಾಂತೀಯ ಅಧ್ಯಕ್ಷ ಲಯನ್ ಮೆಲ್ವಿನ್ ಆರನ್ನ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ ಜಿಲ್ಲೆ 317Cಯಲ್ಲಿ 115 ಕ್ಲಬ್ ಗಳಿದ್ದು, ಆದರ್ಶ ದಂಪತಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇದೆ. ವಾರ್ಷಿಕ ವಿವಿಧ ಸೇವಾ ಮತ್ತು ಸಾಮಾಜಿಕ ಚಟುವಟಿಕೆಗಳ ಸಹಾಯಾರ್ಥವಾಗಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಈ ಸ್ಪರ್ಧೆಯನ್ನು ವಿನೂತನ ರೀತಿಯಲ್ಲಿ ಹಮ್ಮಿಕೊಂಡಿದ್ದು, ಮೊದಲು ನೋಂದಾಯಿಸಿದ 25 ಲಯನ್ಸ್ ದಂಪತಿಗಳಿಗೆ ಮಾತ್ರ ಅವಕಾಶ ಇದೆ. ಮೂರು ಸುತ್ತುಗಳಲ್ಲಿ ನಡೆಯಲಿರುವ ಈ ಸ್ಪರ್ಧೆಯು ಕ್ಷಣ ಕ್ಷಣಕ್ಕೂ ಕುತೂಹಲದೊಂದಿಗೆ ಸಂಗೀತ ಸುದೆ, ಹಾಸ್ಯ ಲಹರಿ, ಸಾಂಸ್ಕೃತಿಕ ವೈಭವದೊoದಿಗೆ ನಡೆಯಲಿದೆ.

ಶಿಕ್ಷಕರು ಮತ್ತು ರಾಷ್ಟ್ರೀಯ ಜೆಸಿ ತರಬೇತುದರಾಗಿರುವ ಜೆ ಸಿ ರಾಜೇಂದ್ರ ಭಟ್ ಕಾರ್ಯಕ್ರಮದ ನಿರೂಪಣೆ ನಡೆಸಲಿದ್ದು, ವಿಶೇಷ ಆಕರ್ಷಣೆಯಾಗಿ ತುಳುರಂಗಭೂಮಿಯ ಪ್ರಭುದ್ಧ ಹಾಸ್ಯ ಮತ್ತು ಚಲನಚಿತ್ರ ನಟರಾದ ಅರವಿಂದ ಬೋಳಾರ್, ದಾಯ್ಜಿ ವರ್ಲ್ಡ್ ಸ್ಥಾಪಕ ವಾಲ್ಟರ್ ನಂದಳಿಕೆ, ಗಿನ್ನೆಸ್ ದಾಖಲೆ ಖ್ಯಾತಿಯ ಯೋಗರತ್ನ ತನುಶ್ರೀ ಪಿತ್ರೋಡಿ ಮತ್ತು ಮಿಡಲ್ ಕ್ಲಾಸ್ ಫ್ಯಾಮಿಲಿ ಚಲನಚಿತ್ರ ತಂಡ ಆಗಮಿಸಲಿದ್ದಾರೆ.

ಪ್ರತಿಷ್ಠಿತ ಎಚ್’ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯು ಉಚಿತ ಪ್ರವೇಶವಾಗಿದ್ದು, ಪ್ರಥಮ ಬಹುಮಾನ ರೂ. 15,000 ಮೌಲ್ಯದ ಗಿಫ್ಟ್ ವೋಚರ್ ಮತ್ತು ಟ್ರೋಫಿ, ದ್ವಿತೀಯ ಬಹುಮಾನ 10 ಸಾವಿರ ರೂ. ಮೌಲ್ಯದ ಗಿಫ್ಟ್ ವೋಚರ್ ಮತ್ತು ಟ್ರೋಫಿ, ತೃತೀಯ ಬಹುಮಾನ 7.5 ರೂ. ವೆಚ್ಚದ ಗಿಫ್ಟ್ ವೋಚರ್ ಮತ್ತು ಟ್ರೋಫಿ, ಫೈನಲ್ ಸ್ಪರ್ಧಿಗಳಿಗೆ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರತಿಷ್ಠಿತ ಕಂಪನಿಗಳ ಗಿಫ್ಟ್ ವೋಚರ್ ಲಭಿಸಲಿದೆ.

ಒಂದು ಕ್ಲಬ್ ನಿಂದ ಒಂದು ದಂಪತಿಗೆ ಮಾತ್ರ ಅವಕಾಶವಿದ್ದು, ನವೆಂಬರ್ 10 ಹೆಸರು ನೋಂದಾಯಿಸಲು ಕೊನೆಯ ದಿನಾಂಕ. ಕಾರ್ಯಕ್ರಮದ ಸಂಚಾಲಕ ಲಯನ್ ಸ್ಟೀವನ್ ಕುಲಾಸೊ ಇವರ ಮೊಬೈಲ್ ಸಂಖ್ಯೆ 9901701381 ಗೆ ಹೆಚ್ಚಿನ ಮಾಹಿತಿ ಮತ್ತು ಹೆಸರು ನೋಂದಾಯಿಸಲು ಸಂಪರ್ಕಿಸಬಹುದಾಗಿದೆ.

Previous Post

ಪಿಂಚಣಿಗೆ ಸಂಬಂಧಿಸಿದ ದೂರುಗಳ ಪರಿಹಾರಕ್ಕಾಗಿ ನವೆಂಬರ್ 7 ರಂದು ತಾಲೂಕು ಮಟ್ಟದ ಪಿಂಚಣಿ ಅದಾಲತ್..!!

Next Post

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಡೊನಾಲ್ಡ್ ಟ್ರಂಪ್’ ಗೆಲುವು : ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಡೊನಾಲ್ಡ್ ಟ್ರಂಪ್’ ಗೆಲುವು : ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ..!!

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ 'ಡೊನಾಲ್ಡ್ ಟ್ರಂಪ್' ಗೆಲುವು : ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved