Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸರ್ಕಾರಿ ಕಚೇರಿ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳ ಸೇವನೆ ಸಂಪೂರ್ಣ ನಿಷೇಧ..!!

Dhrishya News by Dhrishya News
07/11/2024
in ಸುದ್ದಿಗಳು
0
ಸರ್ಕಾರಿ ಕಚೇರಿ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳ ಸೇವನೆ  ಸಂಪೂರ್ಣ ನಿಷೇಧ..!!
0
SHARES
14
VIEWS
Share on FacebookShare on Twitter

ಬೆಂಗಳೂರು: ನವೆಂಬರ್ 07: ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನಾತ್ಮಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸುವಂತೆ ನಿರ್ದೇಶನ ನೀಡಲಾಗಿದೆ.

ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ಕಚೇರಿಯಲ್ಲಿ ಅಥವಾ ಕಚೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

Previous Post

ಕಾರ್ಕಳ :ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ..!!

Next Post

ನವೆಂಬರ್ 8 ರಿಂದ 10 ರವರೆಗೆ ಮಣಿಪಾಲ ಮಾಹೆ ವಿಶ್ವ ವಿದ್ಯಾಲಯದ 32ನೇ ಘಟಿಕೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನವೆಂಬರ್ 8 ರಿಂದ 10 ರವರೆಗೆ ಮಣಿಪಾಲ ಮಾಹೆ ವಿಶ್ವ ವಿದ್ಯಾಲಯದ 32ನೇ ಘಟಿಕೋತ್ಸವ..!!

ನವೆಂಬರ್ 8 ರಿಂದ 10 ರವರೆಗೆ ಮಣಿಪಾಲ ಮಾಹೆ ವಿಶ್ವ ವಿದ್ಯಾಲಯದ 32ನೇ ಘಟಿಕೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ತುಳುನಾಡಿನಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ:ಪಾಲೆ ಕಷಾಯ ಸೇವನೆ ತುಳುವರ ವಿಶೇಷ ಸಂಪ್ರದಾಯ ..!!

ತುಳುನಾಡಿನಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ:ಪಾಲೆ ಕಷಾಯ ಸೇವನೆ ತುಳುವರ ವಿಶೇಷ ಸಂಪ್ರದಾಯ ..!!

24/07/2025
ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ರು ತೆರಿಗೆ ವಸೂಲಿ ಮಾಡಲ್ಲ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…!!

ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ರು ತೆರಿಗೆ ವಸೂಲಿ ಮಾಡಲ್ಲ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…!!

24/07/2025
ಹೋರಾಟ ಸಮಿತಿಯ ಅಧ್ಯಕ್ಷರಾದ ಬಾರ್ಕೂರು ಸತೀಶ್ ಪೂಜಾರಿ ನಿಧನ…!!

ಹೋರಾಟ ಸಮಿತಿಯ ಅಧ್ಯಕ್ಷರಾದ ಬಾರ್ಕೂರು ಸತೀಶ್ ಪೂಜಾರಿ ನಿಧನ…!!

24/07/2025
ನಾಳೆ ಜುಲೈ (17)ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ನಿರಂತರ ಮಳೆ: ನಾಳೆ (ಜು. 24) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

23/07/2025

Recent News

ತುಳುನಾಡಿನಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ:ಪಾಲೆ ಕಷಾಯ ಸೇವನೆ ತುಳುವರ ವಿಶೇಷ ಸಂಪ್ರದಾಯ ..!!

ತುಳುನಾಡಿನಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ:ಪಾಲೆ ಕಷಾಯ ಸೇವನೆ ತುಳುವರ ವಿಶೇಷ ಸಂಪ್ರದಾಯ ..!!

24/07/2025
ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ರು ತೆರಿಗೆ ವಸೂಲಿ ಮಾಡಲ್ಲ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…!!

ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ರು ತೆರಿಗೆ ವಸೂಲಿ ಮಾಡಲ್ಲ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…!!

24/07/2025
ಹೋರಾಟ ಸಮಿತಿಯ ಅಧ್ಯಕ್ಷರಾದ ಬಾರ್ಕೂರು ಸತೀಶ್ ಪೂಜಾರಿ ನಿಧನ…!!

ಹೋರಾಟ ಸಮಿತಿಯ ಅಧ್ಯಕ್ಷರಾದ ಬಾರ್ಕೂರು ಸತೀಶ್ ಪೂಜಾರಿ ನಿಧನ…!!

24/07/2025
ನಾಳೆ ಜುಲೈ (17)ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ನಿರಂತರ ಮಳೆ: ನಾಳೆ (ಜು. 24) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

23/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved