Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ನಾಳೆ (ನ .10 ) ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ..!!

Dhrishya News by Dhrishya News
09/11/2024
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಉಡುಪಿ : ನವೆಂಬರ್ 09:ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಶ್ರೀ ಶ್ರೀನಿವಾಸ ಉತ್ಸವ ಬಳಗ(ರಿ.) ಬೆಂಗಳೂರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ಸಹಯೋಗದೊಂದಿಗೆ ‘ಶ್ರೀ ವಿಜಯ ದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರ ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ವಿದ್ವಾಂಸರಾದ ಡಾ! ಬಿ.ಗೋಪಾಲಾಚಾರ್ಯ ಇವರ ಸಂಯೋಜನೆಯಲ್ಲಿ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರ ನೇತೃತ್ವದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’ವು ನ.10 ರವಿವಾರ ಮಧ್ಯಾಹ್ನ ಗಂಟೆ 2.00ಕ್ಕೆ ಸರಿಯಾಗಿ ಉಡುಪಿ ಶ್ರೀ ಕೃಷ್ಣ ಮಠದ ‘ರಾಜಾಂಗಣ’ದಲ್ಲಿ ನಡೆಯಲಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

‘ಸಹಸ್ರ ಕಂಠ ಗಾಯನ’ದ ಪೂರ್ವಭಾವಿಯಾಗಿ ವಿದ್ವಾಂಸರಾದ ಡಾ! ಬಿ.ಗೋಪಾಲಾಚಾರ್ಯ ಅವರ ಮಾರ್ಗದರ್ಶನದಲ್ಲಿ ಖ್ಯಾತ ಭಜನಾ ತರಬೇತುದಾರೆ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ 4 ದಿನಗಳ ಭಜನಾ ತರಬೇತಿಯಲ್ಲಿ ಸುಮಾರು 600ಕ್ಕೂ ಮಿಕ್ಕಿ ಭಜಕರು ಆಯ್ದ ಭಜನಾ ಹಾಡುಗಳನ್ನು ಅಭ್ಯಾಸ ಮಾಡಿರುವ ಜೊತೆಗೆ ಕುಣಿತದ ಭಜನಾ ತರಬೇತುದಾರರಾದ ಶ್ರೀ ರೋಹಿತ್ ಕಬ್ಯಾಡಿ ಅವರಿಂದ ಕುಣಿತದ ಭಜನೆಯಲ್ಲಿಯೂ ಪರಿಣತಿಯನ್ನು ಹೊಂದಿದ್ದಾರೆ.

 

ಈಗಾಗಲೇ ಭಜನಾ ತರಬೇತಿ ಪಡೆದ ಸುಮಾರು 800ಕ್ಕೂ ಮಿಕ್ಕಿ ಭಜಕರು ವಿವಿಧ ಭಜನಾ ಮಂಡಳಿಗಳಿಂದ ಹಾಗೂ ವೈಯಕ್ತಿಕವಾಗಿ ‘ಸಹಸ್ರ ಕಂಠ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ತಾಲೂಕಿನ ವಿವಿಧ ಭಜನಾ ಮಂಡಳಿಗಳ ಸುಮಾರು 500ಕ್ಕೂ ಮಿಕ್ಕಿ ಭಜಕರು ಸೇರಿದಂತೆ ಸುಮಾರು 1,000ಕ್ಕೂ ಮಿಕ್ಕಿ ಭಜಕರು ‘ಸಹಸ್ರ ಕಂಠ ಗಾಯನ’ ಹಾಗೂ ‘ಭಜನಾ ಮಂಡಳಿಗಳ ಸಮಾವೇಶ’ದಲ್ಲಿ ಪಾಲ್ಗೊಳ್ಳಲಿದ್ದಾರೆ.

 

ನ.2ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಅನ್ನ ಪ್ರಸಾದ ವಿತರಣೆ, ಗಂಟೆ 1.00ಕ್ಕೆ ಭಜನಾ ಮಂಡಳಿಗಳ ನೊಂದಾವಣೆ, 2.00ಕ್ಕೆ ಉದ್ಘಾಟನೆ, 2.30ಕ್ಕೆ ‘ಸಹಸ್ರ ಕಂಠ ಗಾಯನ’ ಹಾಗೂ ಸಂಜೆ 4.00ಕ್ಕೆ ಸಮಾರೋಪ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ತೀವ್ರ ರಕ್ತದ ಕೊರತೆ: ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜೀವ ಉಳಿಸಿ…!!

Next Post

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಚೌಕಿಯಂಗಡಿ ಮಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಚೌಕಿಯಂಗಡಿ ಮಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ  ನೀರಿನ ಟ್ಯಾಂಕ್ ಕೊಡುಗೆ..!!

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಚೌಕಿಯಂಗಡಿ ಮಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved