ಕಾರ್ಕಳ :ನವೆಂಬರ್ 24:ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದ P.K.T.P.(ಟೆಲಿಫೋನ್) ಕಂಪನಿಯ ಮುಂದೆ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.ಹಲವು ಸಮಯದಿಂದ ಬೀಡಿ ಎಲೆ ಹಾಳಾಗಿದ್ದು ಸರಿಪಡಿಸಲು ಹಲವು ಬಾರಿ ಎಚ್ಚರಿಕೆಯನ್ನು ನೀಡಲಾಗಿದೆ. ಅದರೆ ಎಚ್ಚೆತ್ತು ಕೊಳ್ಳದ ಕಂಪನಿಯ ವಿರುದ್ಧ ಇಂದು ಸಂಘದ ಮುಖಂಡರು ಹಾಗೂ ಕಾರ್ಮಿಕರು ಸೇರಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು .ನಂತರ ಕಂಪನಿಯ ಮ್ಯಾನೇಜರ್ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ ಹಳೇ ಎಲೆ ಕಾಲಿಮಾಡಿದ್ದು ಈಗ ಹೊಸ ಎಲೆ ಬಂದಿದ್ದು ಎರಡು ದಿನಗಳಲ್ಲಿ ಕಾರ್ಮಿಕರಿಗೆ ವಿರತರಿಸಲಾಗುವುದು ಎಂದು ಹೇಳಿದರು. ನಂತರ ಸಂಘದ ಮುಖಂಡರು ಹಾಗೂ ಕಾರ್ಮಿಕರು ಎಲೆ ಸಂಸ್ಕರಿಸುವ ( ಗೊಡೌನ್) ಸ್ಥಳಕ್ಕೆ ಹೋಗಿ ಪರಿಶಿಲಿಸಿದ ನಂತರ ಪ್ರತಿಭಟನೆಯನ್ನು ವಾಪಸು ಪಡೆಯಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಉಪಾಧ್ಯಕ್ಷ ರಾದ ಬಲ್ಕೀಸ್,ಕಾರ್ಯದರ್ಶಿ ಉಮೇಶ್ ಕುಂದರ್ ಮಾತನಾಡಿದರು. ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಮುಖಂಡರಾದ ನಳಿನಿ.ಎಸ್,ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುನೀತ ಶೆಟ್ಟಿ, ಕೋಶಾಧಿಕಾರಿ ಸುಮತಿ ಮುಖಂಡರಾದ ಜಯಂತಿ, ಅನಿತ,ಶಕುಂತಲಾ,ಮಾಲತಿ, ಉಪಸ್ಥಿತರಿದ್ದರು. ಸಿಐಟಿಯು ಕಾರ್ಕಳ ತಾಲೂಕು ಮುಖಂಡರಾದ ನಾಗೇಶ್ ಉಪಸ್ಥಿತರಿದ್ದರು.








