Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಾ ಮೋಹನ್ ಭಾಗವತ್ ಹಿಂದೂ ಸಮ್ರಾಟ್ ಗೌರವದೊಂದಿಗೆ “ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ”ಪ್ರದಾನ..!!

Dhrishya News by Dhrishya News
09/12/2024
in ಸುದ್ದಿಗಳು
0
0
SHARES
7
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 09:ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಮೋಚ್ಚ ವರಿಷ್ಠ , ಸರಸಂಘಚಾಲಕ ಡಾ ಮೋಹನ್ ಭಾಗವತ್ ಭಾನುವಾರ ಸಂಜೆ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು .

ಬಳಿಕ ಗೀತಾಮಂದಿರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಸನಾತನ ಧರ್ಮ ಸಂರಕ್ಷಣೆಯ ಕಾರ್ಯದಲ್ಲಿ ನೀಡಿದ ಮಹೋನ್ನತ ಸೇವೆಯನ್ನು ಪರಿಗಣಿಸಿ ಹಿಂದು ಸಾಮ್ರಾಟ್ ಎಂಬ ಬಿರುದು ಹಾಗೂ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ ಸಹಿತ ಸಂಮಾನಿಸಿ ಶ್ರೀ ಕೃಷ್ಣ ಮುಖ್ಯಪ್ರಾಣರ ಪ್ರಸಾದವಿತ್ತು ಅನುಗ್ರಹಿಸಿದರು. ಸಂಮಾಮವು ಬೃಹತ್ ಕಡಗೋಲು , ರಜತಫಲಕ ಶಾಲು ಫಲಪುಷ್ಪವನ್ನು ಒಳಗೊಂಡಿತ್ತು.

ಶ್ರೀಕೃಷ್ಣ ದರ್ಶನದ ಬಳಿಕ ಡಾ ಭಾಗವತ್ ಗೀತಾಮಂದಿರಕ್ಕೆ ಭೇಟಿ ನೀಡಿದರು .‌ಶ್ರೀಗಳು ಅಲ್ಲಿನ ಗೀತಾಶಿಲಾ ಲೇಖನ ಧ್ಯಾನ ಮಂದಿರ ,ವಾದಿರಾಜ ಸಂಶೋಧನ ಮಂದಿರಗಳನ್ನು ಪರಿಚಯಿಸಿ ನಡೆಸುತ್ತಿರುವ ಚಟುವಟಿಕೆಗಳನ್ನು ವಿವರಿಸಿದರು. ತಮ್ಮ ಚತುರ್ಥ ಪರ್ಯಾಯಾವಧಿಯ ಅತ್ಯಂತ ದೂರದೃಷ್ಟಿಯ ಕೋಟಿ ಗೀತಾಲೇಖನ ಯಜ್ಞದ ಕುರಿತೂ ವಿವರಿಸಿದರು. 

ಈ ಎಲ್ಲವುಗಳನ್ನೂ ಆಸಕ್ತಿಯಿಂದ ಆಲಿಸಿದ ಭಾಗವತ್ ಬಹಳ ಸಂತೋಷ ವ್ಯಕ್ತಪಡಿದರು .

ಗೀತೋತ್ಸವ ಸಂದರ್ಭದಲ್ಲಿಯೇ ಆಗಮಿಸಿದ ಡಾ ಭಾಗವತರಿಗೆ ಗೀತಾಲೇಖನ ಯಜ್ಞದ ದೀಕ್ಷೆಯನ್ನು ಪೂಜ್ಯ ಶ್ರೀಪಾದರು ನೀಡಿದರು.

ವರ್ತಮಾನದಲ್ಲಿ ದೇಶ ಮತ್ತು ಬಾಂಗ್ಲಾ ಮೊದಲಾದೆಡೆಗಳಲ್ಲಿ ನಡೆಯುತ್ತಿರುವ ಹಿಂದು ವಿರೋಧಿ ವಿದ್ಯಮಾನಗಳ ಕುರಿತಾಗಿಯೂ ಈರ್ವರೂ ಖಾಸಗಿಯಾಗಿ ಗಹನ ಚರ್ಚೆ ನಡೆಸಿದರು. ಸನಾತನ ಧರ್ಮದ ರಕ್ಷಣೆ ಪೋಷಣೆ ಸಂವರ್ಧನೆಯ ವಿಚಾರದಲ್ಲಿ ಪ್ರತಿಯೊಬ್ಬ ಹಿಂದು ಶೂನ್ಯ ಸಹಿಷ್ಣುವಾಗಿರಬೇಕು ಮತ್ತು ಸಮಸ್ತ ಸಾಧು ಸಂತ ಸಮಾಜ ಹಿಂದೆಂದಿಗಿಂತ ಹೆಚ್ಚು ಸಮರ್ಥವಾಗಿ ಸಮಾಜಕ್ಕೆ ಧಾರ್ಮಿಕ ಮೌಲ್ಯಗಳು ಮತ್ತು‌ ರಾಷ್ಟ್ರೀಯ ವಿಚಾರಧಾರೆಗಳ ಮಾರ್ಗದರ್ಶನ ನೀಡಬೇಕೆಂದು ಅನಿಸಿಕೆ ವ್ಯಕ್ತ ಪಡಿಸಿದರು. 

 

‌ಶತಮಾನದ ಹೊಸ್ತಿಲಲ್ಲಿರುವ ಸಂಘವು ದೇಶದಲ್ಲಿ ಸನಾತನ ಧರ್ಮದ ಅಸ್ಮಿತೆಯನ್ನು ಸಂರಕ್ಷಿಸುವಲ್ಲಿ ನೀಡುತ್ತಿರುವ ಕೊಡುಗೆಗಳ ಬಗ್ಗೆ ಅತೀವ ಪ್ರಶಂಸೆ ವ್ಯಕ್ತಪಡಿಸಿದ ಶ್ರೀಗಳು ಸಂಘವಿಲ್ಲದಿದ್ದರೆ ಹಿಂದೂಗಳು ದೇಶದಲ್ಲಿ ಮತ್ತಷ್ಟು ಬವಣೆಗಳನ್ನು ಅನುಭವಿಸಬೇಕಾದ ಸಂಭವ ಇತ್ತು .ಆದರೆ ಹೆಡಗೇ ವಾರರಿಂದ ಭಾಗವತ್ ರ ತನಕ ಸಂಘವನ್ನು ಮುನ್ನಡೆಸಿದ ಸಮಸ್ತ ನೇತಾರರೂ ತಮ್ಮ ರಾಷ್ಟ್ರೀಯ ಬದ್ಧತೆ ಹಾಗೂ ತ್ಯಾಗಪೂರ್ಣ ಬದುಕಿನಿಂದ ಅಸಂಖ್ಯ ಜನರಲ್ಲಿ ರಾಷ್ಟ್ರ ಭಕ್ತಿಯ ತೇಜಸ್ಸನ್ನು ಜಾಗೃತಗೊಳಿಸಿದ ಪರಿ ಅನನ್ಯ ಮತ್ತು ಅದ್ಭುತ ಎಂದೂ ಬಣ್ಣಿಸಿ , ವರ್ತಮಾನದ ಸಂಕೀರ್ಣ ಸ್ಥಿತಿಯಲ್ಲಿ ಭಾಗವತರಂಥವರ ಮತ್ತು ಸಂಘ ಶಕ್ತಿಯ ಅನಿವಾರ್ಯತೆ ಇದೆ . ಬಹುಕಾಲ ಅವರ ಸೇವೆ ಮಾರ್ಗದರ್ಶನಗಳು ದೇಶಕ್ಕೆ ಲಭಿಸುವಂತಾಗಲಿ ಎಂದು ಹಾರೈಸಿದರು . ಕಿರಿಯ ಶ್ರೀ ಸುಶ್ರೀಂದ್ರ ತೀರ್ಥರಿಂದಲೂ ಭಾಗವತ್ ಆಶೀರ್ವಾದ ಪಡೆದರು 

ಸಂಘದ ಹಿರಿಯ ಮುಖಂಡ ಮುಕುಂದ ಜೀ ,ಉಡುಪಿಯ ಪ್ರಮುಖ್ ನರತನ್ ಶೆಣೈ,ಮಠದ ದಿವಾನರಾದ ಎಂ ನಾಗರಾಜ ಆಚಾರ್ಯ ,ಮಟ್ಟಿ ಲಕ್ಷ್ಮಿನಾರಾಯಣ ರಾವ್,ಪ್ರಮೋದ್ ಸಾಗರ್ ಸಂತೋಷ್ ಶೆಟ್ಟಿ ,,ಶ್ರೀ ಮಠದ ವೈದಿಕ ವಿದ್ವಾಂಸರು,ಗಣ್ಯ ನಾಗರಿಕರು ಮೊದಲಾದವರು ಭಾಗವಹಿಸಿದ್ದರು.

ಆರಂಭದಲ್ಲಿ ಮಠದ ಮುಂಭಾಗದಲ್ಲಿ ಭಾಗವತ್ ಅವರನ್ನು ವಾದ್ಯ, ಚಂಡೆವಾದನ ಮಂತ್ರಘೋಷ ಸಹಿತ ಮಠದ ಸಾಂಪದ್ರದಾಯಿಕ ಗೌರವಗಳೊಂದಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು .

Previous Post

ಮಾದಕ ದ್ರವ್ಯ ಸೇವನೆ ದ್ರಡ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು..!!

Next Post

ಸಿಐಐ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಹೆ STEM 2024 ರಲ್ಲಿ ಮಹಿಳೆಯರಲ್ಲಿ ಅತ್ಯುತ್ತಮವಾದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾಗಿದೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿಐಐ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಹೆ STEM 2024 ರಲ್ಲಿ ಮಹಿಳೆಯರಲ್ಲಿ ಅತ್ಯುತ್ತಮವಾದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾಗಿದೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved