Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಲೆಕ್ಕಪತ್ರ ವ್ಯವಸ್ಥೆಯು ಪಾರದರ್ಶಕವಾಗಿರಬೇಕು: ರಾಜು ಮೊಗವೀರ ಕುಲಸಚಿವರು ಮಂಗಳೂರು ವಿಶ್ವವಿದ್ಯಾನಿಲಯ..!!

Dhrishya News by Dhrishya News
08/01/2025
in ಮುಖಪುಟ
0
0
SHARES
20
VIEWS
Share on FacebookShare on Twitter

ಮಂಗಳೂರು: ಜನವರಿ 08:ಕಂಪನಿ ಮತ್ತು ಸಂಸ್ಥೆಗಳು ಏಕರೂಪದ ಹಾಗೂ ಪಾರದರ್ಶಕವಾದ ಲೆಕ್ಕಪತ್ರ ವ್ಯವಸ್ಥೆಯನ್ನು ಹೊಂದಿರಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ರಾಜು ಮೊಗವೀರ ಹೇಳಿದರು. 

 

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಅಧ್ಯಯನ ವಿಭಾಗ ಮತ್ತು ಅಸೋಸಿಯೇಷನ್ ಆಪ್ ಸರ್ಟಿಫೈಡ್ ಚಾರ್ಟೆಡ್ ಅಕೌಂಟೆಂಟ್ಸ್ ಇವರ ಸಂಯುಕ್ತ ಆಶಯದಲ್ಲಿ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ನಡೆದ ಇಂಟರ್ನ್ಯಾಷನಲ್ ಫೈನಾನ್ಸಿಯಲ್ ರಿಪೋರ್ಟಿಂಗ್ ಸ್ಟ್ಯಾಂಡರ್ಡ್ (ಐ.ಎಫ್.ಆರ್.ಎಸ್) ಕಾರ್ಯಗಾರದಲ್ಲಿ ಮಾತನಾಡುತ್ತಾ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಲೆಕ್ಕಪತ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬೇಕು ಹಾಗೂ ಪ್ರಪಂಚ ಮತ್ತು ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಪದ್ಧತಿಯನ್ನು ಕಟ್ಟುನಿಟ್ಟಾಗಿ ತೊಲಗಿಸಲು ಹಣಕಾಸು ಮತ್ತು ಲೆಕ್ಕಪತ್ರ ಸಂಸ್ಥೆಗಳು ಮತ್ತು ಲೆಕ್ಕಾಧಿಕಾರಿಗಳು ನಿಷ್ಠೆಯಿಂದ ಶ್ರಮಿಸಬೇಕು ಇದರಿಂದ ದೇಶದ ಅಭಿವೃದ್ಧಿಗೆ ಪ್ರಾಮಾಣಿಕತೆಯಿಂದ ಕೊಡುಗೆ ನೀಡಲು ಸಹಕಾರಿಯಾಗುವುದು ಎಂದು ಹೇಳಿದರು.

ಚೆನ್ನೈನ ಸೀನಿಯರ್ ಬಿಜಿನೆಸ್ ರಿಲೇಷನ್ಶಿಪ್ ಮ್ಯಾನೇಜರ್ ಆಲ್ತ್ ಲೀ ಕಾರ್ಯಗಾರದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ನವ ದೆಹಲಿಯ ರಿಜಿನಲ್ ಹೆಡ್ ಆಫ್ ಲರ್ನಿಂಗ್ ಅಂಡ್ ಎಜುಕೇಶನ್ ನ ಡಾ. ಪಲ್ಲವಿ ಗುಪ್ತ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಪ್ರೀತಿ ಕೀರ್ತಿ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರೊಫೆಸರ್. ಮುನಿರಾಜು, ಪ್ರೊಫೆಸರ್. ಈಶ್ವರ ಪಿ. ಮತ್ತು ಪ್ರೊಫೆಸರ್. ಪರಮೇಶ್ವರ ಉಪಸ್ಥಿತರಿದ್ದರು. 

ಪ್ರೊಫೆಸರ್. ಪರಮೇಶ್ವರ ಸ್ವಾಗತಿಸಿದರೆ ರಮ್ಯ ರಾಮಚಂದ್ರ ನಾಯ್ಕ್ ವಂದಿಸಿದರು. ಸಂಶೋಧನಾ ವಿದ್ಯಾರ್ಥಿ ಕಿಶು ಕೈ ಪ್ರಾರ್ಥಿಸಿದರೆ, ಕಾರ್ಯಕ್ರಮದ ನಿರೂಪಣೆಯನ್ನು ರಶ್ಮಿತಾ ಆರ್. ಕೋಟ್ಯಾನ್ ಗೈದರು. 

 

 

ಉದ್ಘಾಟನಾ ಸಮಾರಂಭದ ಬಳಿಕ ಚೆನ್ನೈನ ಬಿಜಿನೆಸ್ ರಿಲೇಷನ್ಶಿಪ್ ಮೆನೇಜರ್ ಸುಹಾಸ್ ಕುಮಾರ್ ಸಿಂಗ್ ಮತ್ತು ಬೆಂಗಳೂರಿನ ಐ.ಎಫ್. ಆರ್.ಎಸ್ ನ ತರಬೇತುದಾರರಾದ ಪ್ರಶಾಂತ್ ಶಂಕರ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಯನ್ನು ನೀಡಿದರು. ಕಾರ್ಯಗಾರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಿಂದ ನೂರಕ್ಕೂ ಅಧಿಕ ಮಂದಿ ವಾಣಿಜ್ಯ ಉಪನ್ಯಾಸಕರು ಭಾಗವಹಿಸಿದ್ದರು.

 

 

Previous Post

ಐಟಿಐ ಉತ್ತೀರ್ಣರಾದವರಿಗೆ ಅಪ್ರೆಂಟಿಸ್ ತರಬೇತಿ : ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Next Post

ಉಡುಪಿ :ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026